ದೇಶ

ಅಯೋಧ್ಯೆವಿಮಾನ ನಿಲ್ದಾಣಕ್ಕೆ ಭಗವಾನ್ ಶ್ರೀರಾಮನ ಹೆಸರು

Srinivas Rao BV

ಅಯೋಧ್ಯೆ: ಅಯೋಧ್ಯೆಯಲ್ಲಿ  ನಿರ್ಮಾಣಗೊಳ್ಳಲಿರುವ ವಿಮಾನ ನಿಲ್ದಾಣಕ್ಕೆ ಭಗವಾನ್ ಶ್ರೀರಾಮನ ಹೆಸರು ಇರಿಸಲು ಉತ್ತರ ಪ್ರದೇಶ ಸರ್ಕಾರ ತೀರ್ಮಾನಿಸಿದೆ. ಈ ವಿಮಾನ ನಿಲ್ದಾಣವನ್ನು 2021 ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಲು  ಗುರಿ ಇರಿಸಿಕೊಂಡಿದೆ.

ವಿಶ್ವಸನೀಯ ಮೂಲಗಳ ಪ್ರಕಾರ,   ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್  ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಅಯೋಧ್ಯೆಯಲ್ಲಿ ಅಂತರಾಷ್ಟ್ರೀಯ ಮಟ್ಟದ  ವಿಮಾನ ನಿಲ್ದಾಣ ನಿರ್ಮಿಸಲು ನಿರ್ಧರಿಸಿದೆ. 2021 ಡಿಸೆಂಬರ್ ವೇಳೆಗೆ ಅದನ್ನು ಪೂರ್ಣಗೊಳಿಸಲು ಗುರಿ ಇರಿಸಿಕೊಂಡಿದೆ.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಪೂರ್ಣಗೊಂಡ ನಂತರ ದೇಶ, ವಿದೇಶಗಳಿಂದ ದೊಡ್ಡ ಸಂಖ್ಯೆಯ ಭಕ್ತರು  ಆಗಮಿಸಬಹುದು  ಎಂದು  ರಾಜ್ಯ ಸರ್ಕಾರ ಅಂದಾಜಿಸಿದೆ. ಈ ಹಿನ್ನಲೆಯಲ್ಲಿ ಭಕ್ತರಿಗೆ  ವ್ಯವಸ್ಥಿತ  ಸಾರಿಗೆ   ವ್ಯವಸ್ಥೆ   ಲಭಿಸುವಂತೆ ನೋಡಿಕೊಳ್ಳಲು ಪ್ರಯತ್ನಿಸುತ್ತಿದೆ.

SCROLL FOR NEXT