ರೋಗಿಗಳನ್ನು ಸುರಕ್ಷಿತವಾಗಿ ವರ್ಗಾಯಿಸುತ್ತಿರುವುದು 
ದೇಶ

ಗುಜರಾತ್ ನ ವಡೋದರದ ಸರ್ಕಾರಿ ಆಸ್ಪತ್ರೆಯ ಕೋವಿಡ್-19 ವಾರ್ಡ್ ನಲ್ಲಿ ಬೆಂಕಿ ಅವಘಡ:ರೋಗಿಗಳು ಸುರಕ್ಷಿತ

ಗುಜರಾತ್ ನ ವಡೋದರದ ಸರ್ ಸಯ್ಯಾಜಿರಾವ್ ಜನರಲ್ ಆಸ್ಪತ್ರೆಯ ಕೋವಿಡ್-19 ತುರ್ತು ನಿಗಾ ಘಟಕದಲ್ಲಿ ಅಗ್ನಿ ಅವಘಡ ಉಂಟಾಗಿದ್ದು ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ರಾತ್ರಿ ಈ ದುರ್ಘಟನೆ ನಡೆದಿದೆ.

ವಡೋದರ: ಗುಜರಾತ್ ನ ವಡೋದರದ ಸರ್ ಸಯ್ಯಾಜಿರಾವ್ ಜನರಲ್ ಆಸ್ಪತ್ರೆಯ ಕೋವಿಡ್-19 ತುರ್ತು ನಿಗಾ ಘಟಕದಲ್ಲಿ ಅಗ್ನಿ ಅವಘಡ ಉಂಟಾಗಿದ್ದು ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ರಾತ್ರಿ ಈ ದುರ್ಘಟನೆ ನಡೆದಿದೆ.

ಗುಜರಾತ್ ನ ವಡೋದರದಲ್ಲಿರುವ ಎಸ್ ಎಸ್ ಜಿ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದ ವೆಂಟಿಲೇಟರ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ದುರಂತ ಸಂಭವಿಸಿದ್ದು, ಇಲ್ಲಿ ಸುಮಾರು 300 ಕೊರೋನಾ ಪಾಸಿಟಿವ್ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಇಲ್ಲಿನ 35 ರೋಗಿಗಳನ್ನು ಬೇರೆ ವಾರ್ಡ್ ಗೆ ವರ್ಗಾಯಿಸಲಾಗಿದ್ದು ನಂತರ ಬೆಂಕಿಯನ್ನು ನಂದಿಸಲಾಯಿತು ಎಂದು ಗುಜರಾತ್ ಆರೋಗ್ಯ ಸಚಿವ ನಿತಿನ್ ಪಟೇಲ್ ತಿಳಿಸಿದ್ದಾರೆ.

ಬೆಂಕಿ ಸ್ಫೋಟಗೊಂಡು ಹತ್ತಿ ಉರಿಯತೊಡಗಿದಾಗ ವಾರ್ಡ್ ನಲ್ಲಿ ಸುಮಾರು 15 ಮಂದಿ ರೋಗಿಗಳಿದ್ದರು. ಈ ರೋಗಿಗಳು ಮತ್ತು ಪಕ್ಕದ ವಾರ್ಡ್ ನ ಸುಮಾರು 20 ರೋಗಿಗಳನ್ನು ಸುರಕ್ಷಿತವಾಗಿ ಬೇರೆ ವಾರ್ಡ್ ಗೆ ವರ್ಗಾಯಿಸಲಾಯಿತು. ಇದೀಗ ಇಡೀ ಆಸ್ಪತ್ರೆ ಸಹಜ ಸ್ಥಿತಿಗೆ ಬಂದು ಕಾರ್ಯನಿರ್ವಹಿಸುತ್ತಿದೆ ಎಂದು ಆರೋಗ್ಯ ಸಚಿವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಯಾವೊಬ್ಬ ರೋಗಿಗೂ ಗಾಯಗಳಾಗಿಲ್ಲ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT