ಪ್ಲಾಸ್ಮಾ ಬ್ಯಾಂಕಿನಲ್ಲಿ ಪ್ಲಾಸ್ಮಾ ನೀಡುತ್ತಿರುವ ಕೋವಿಡ್-19ನಿಂದ ಗುಣಮುಖರಾದ ವ್ಯಕ್ತಿ 
ದೇಶ

ಕೋವಿಡ್-19 ರೋಗಿಗಳಿಗೆ ಪ್ಲಾಸ್ಮಾ ಥೆರಪಿ ಪ್ರಯೋಜನವಾಗುವುದಿಲ್ಲ: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ

ಕೋವಿಡ್-19 ಸೋಂಕಿತರಿಗೆ ಪ್ಲಾಸ್ಮಾ ಥೆರಪಿಯಿಂದ ಯಾವುದೇ ರೀತಿಯ ಪ್ರಯೋಜನವಾಗಲಿ, ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ಸಹಾಯವಾಗುವುದಿಲ್ಲ, ರೋಗ ನಿಯಂತ್ರಣಕ್ಕೆ ಸಹ ಸಹಾಯವಾಗುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಹೇಳಿದೆ.

ನವದೆಹಲಿ: ಕೋವಿಡ್-19 ಸೋಂಕಿತರಿಗೆ ಪ್ಲಾಸ್ಮಾ ಥೆರಪಿಯಿಂದ ಯಾವುದೇ ರೀತಿಯ ಪ್ರಯೋಜನ, ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ಸಹಾಯವಾಗುವುದಿಲ್ಲ, ರೋಗ ನಿಯಂತ್ರಣಕ್ಕೆ ಸಹ ಸಹಾಯವಾಗುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಹೇಳಿದೆ.

ಪ್ಲಾಸ್ಮಾ ಥೆರಪಿಯ ಪ್ರಯೋಜನಗಳ ಬಗ್ಗೆ ಐಸಿಎಂಆರ್ ಪ್ರಯೋಗವನ್ನು ನಡೆಸಿದ್ದು, ಅದಕ್ಕೆ ಪ್ಲಾಸಿಡ್ ಎಂದು ಹೆಸರು. ಭಾರತೀಯ ವೈದ್ಯಕೀಯ ಮಂಡಳಿ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 39 ಆಸ್ಪತ್ರೆಗಳಲ್ಲಿ ನಡೆಸಿದೆ.

ಕೊರೋನಾದಿಂದ ಸಾಧಾರಣವಾಗಿ ಮಧ್ಯಮ ಪ್ರಮಾಣದ ಸೋಂಕಿನಿಂದ ಬಳಲುತ್ತಿರುವ 464 ರೋಗಿಗಳ ಮೇಲೆ ಅಧ್ಯಯನ ನಡೆಸಲಾಗಿದ್ದು ಅವರಲ್ಲಿ 235 ಮಂದಿಗೆ ಚೇತರಿಸಿಕೊಳ್ಳುವ ಪ್ಲಾಸ್ಮಾ(ಸಿಪಿ0 convalescent plasma)ವನ್ನು ಗುಣಮುಖರಾಗಿರುವ ಕೊರೋನಾ ರೋಗಿಗಳಿಂದ ನೀಡಲಾಗಿದೆ.

ಉಳಿದ 229 ಮಂದಿಗೆ ಸಾಧಾರಣ ಆರೈಕೆ ನೀಡಲಾಗಿದೆ. ಮಧ್ಯದ ಗುಂಪಿನ ರೋಗಿಗಳಿಗೆ 24 ಗಂಟೆಗಳಲ್ಲಿ 200 ಎಂಎಲ್ ಪ್ಲಾಸ್ಮಾ ನೀಡಲಾಗಿದೆ. ಅಧ್ಯಯನದಲ್ಲಿ 34 ರೋಗಿಗಳು ಅಥವಾ ಶೇಕಡಾ 13.6 ಮಂದಿ ರೋಗಿಗಳು ಪ್ಲಾಸ್ಮಾ ಥೆರಪಿ ಪಡೆದುಕೊಂಡವರು ಮೃತಪಟ್ಟಿದ್ದಾರೆ. 31 ರೋಗಿಗಳು ಅಥವಾ ಶೇಕಡಾ 14.6ರಷ್ಟು ಮಂದಿ ಪ್ಲಾಸ್ಮಾ ಥೆರಪಿಗೆ ಒಳಗಾಗದವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್-19 ಹೆಚ್ಚುತ್ತಿರುವ ಸಂದರ್ಭದಲ್ಲಿ, ಹಲವು ರಾಜ್ಯ ಸರ್ಕಾರಗಳು ಪ್ಲಾಸ್ಮಾ ಥೆರಪಿ ಬ್ಯಾಂಕ್ ಗಳನ್ನು ಸ್ಥಾಪಿಸುತ್ತಿರುವಾಗ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಈ ವರದಿ ಆತಂಕ ಹುಟ್ಟಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT