ಸಾಂದರ್ಭಿಕ ಚಿತ್ರ 
ದೇಶ

ವಂದೇ ಭಾರತ್ ಅಭಿಯಾನದಡಿ 13.74 ಲಕ್ಷ ಭಾರತೀಯರು ಸ್ವದೇಶಕ್ಕೆ ವಾಪಸ್- ವಿದೇಶಾಂಗ ವ್ಯವಹಾರಗಳ ಸಚಿವಾಲಯ

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಮೇ 7 ರಂದು ಆರಂಭಿಸಲಾದ ವಂದೇ ಭಾರತ್ ಅಭಿಯಾನ ಆರಂಭಿಸಿದ ನಂತರ ಸುಮಾರು 13.74 ಲಕ್ಷ ಭಾರತೀಯರು ಸ್ವದೇಶಕ್ಕೆ ವಾಪಸ್ ಆಗಿದ್ದಾರೆ ಎಂದು ವಿದೇಶಾಂಗ ವ್ಯವಹಾರ ಸಚಿವಾಲಯ ಗುರುವಾರ ತಿಳಿಸಿದೆ.

ನವದೆಹಲಿ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಮೇ 7 ರಂದು ಆರಂಭಿಸಲಾದ ವಂದೇ ಭಾರತ್ ಅಭಿಯಾನ ಆರಂಭಿಸಿದ ನಂತರ ಸುಮಾರು 13.74 ಲಕ್ಷ ಭಾರತೀಯರು ಸ್ವದೇಶಕ್ಕೆ ವಾಪಸ್ ಆಗಿದ್ದಾರೆ ಎಂದು ವಿದೇಶಾಂಗ ವ್ಯವಹಾರ ಸಚಿವಾಲಯ ಗುರುವಾರ ತಿಳಿಸಿದೆ.

ಸೆಪ್ಟೆಂಬರ್ 1ರಿಂದ ಆರನೇ ಹಂತದ ವಂದೇ ಭಾರತ್ ಅಭಿಯಾನ ಕಾರ್ಯರೂಪಕ್ಕೆ ಬಂದಿದ್ದು, ಈ ತಿಂಗಳಲ್ಲಿ 1,007 ಅಂತಾರಾಷ್ಟ್ರೀಯ ವಿಮಾನಗಳು 
 ಕಾರ್ಯಾಚರಣೆ ನಡೆಸಲು ನಿರ್ಧರಿಸಿವೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.

2 ಲಕ್ಷಕ್ಕೂ ಹೆಚ್ಚು ಜನರನ್ನು ವಾಪಸ್ ಕರೆತರಲು ನಾವು ನಿರೀಕ್ಷಿಸಿದ್ದೇವೆ .ಸೆಪ್ಟೆಂಬರ್ 10ರ ವೇಳೆಗೆ 13.74 ಲಕ್ಷ ಭಾರತೀಯರು ಏರ್ ಇಂಡಿಯಾ, ಖಾಸಗಿ ಮತ್ತು ವಿದೇಶಿ ವಿಮಾನಗಳು, ಚಾರ್ಟೆಡ್ ವಿಮಾನಗಳು, ನೌಕ ಹಡಗುಗಳು ಮತ್ತು ರಸ್ತೆ ಮೂಲಕ  ಭಾರತಕ್ಕೆ ವಾಪಸ್ ಆಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

 ಜೋರ್ಡನ್, ಅಪ್ಘಾನಿಸ್ತಾನ, ಮಾಲ್ಡೀವ್ಸ್, ಚೀನಾ, ಥೈಲ್ಯಾಂಡ್, ಅಮೆರಿಕಾ,ಇಂಗ್ಲೆಂಡ್, ಕೆನಡಾ, ಫ್ರಾನ್ಸ್, ಜರ್ಮನಿ, ಸಿಂಗಾಪುರ , ಮಲೇಷಿಯಾ, ಫಿಲೈಫೈನ್ಸ್ ಮತ್ತು ಆಸ್ಟ್ರೇಲಿಯ, ಜಿಸಿಜಿ ದೇಶಗಳಿಂದ ಈಗಾಗಲೇ 270 ಅಂತಾರಾಷ್ಟ್ರೀಯ ವಿಮಾನಗಳು ಕಾರ್ಯಾಚರಣೆ ನಡೆಸುತ್ತಿವೆ. 

ಅಭಿಯಾನದಡಿ ಸ್ವದೇಶಕ್ಕೆ ಬರುವವರ ಬೇಡಿಕೆಯನ್ನು ಮೇಲ್ವಿಚಾರಣೆಯೊಂದಿಗೆ ಮುಂದುವರೆಸಲಾಗುವುದು, ಇದಕ್ಕೆ ಏರ್ ಲೈನ್ಸ್ ಗೆ ಅಗತ್ಯ ನೆರವಿನ ಭರವಸೆಯೊಂದಿಗೆ ಅದರ ಜೊತೆಯಲ್ಲಿ ಕೆಲಸ ಮಾಡುವುದಾಗಿ ಅನುರಾಗ್ ಶ್ರೀವಾಸ್ತವ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT