ದೇಶ

ನ್ಯಾಯಾಂಗ ನಿಂದನೆ; ಪ್ರಶಾಂತ್‌ ಭೂಷಣ್‌ ಪ್ರಕರಣದ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಅ.12ಕ್ಕೆ ಮುಂದೂಡಿದೆ.

ನವದೆಹಲಿ: ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಅ.12ಕ್ಕೆ ಮುಂದೂಡಿದೆ.

ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ್‌ ಅವರ ಮನವಿ ಮೇರೆಗೆ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆಯನ್ನು ಮುಂದೂಡಿದೆ. 

ಈ ಪ್ರಕರಣವನ್ನು ಈ ಹಿಂದೆ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿದ್ದು, ಈಗ ಅರುಣ್ ಮಿಶ್ರಾ ನಿವೃತ್ತರಾಗಿದ್ದಾರೆ.

ನಿಯತಕಾಲಿಕೆಗೆ ನೀಡಿದ ಸಂದರ್ಶನದಲ್ಲಿ ಕೆಲ ಹಾಲಿ ಹಾಗೂ ಮಾಜಿ ಉನ್ನತ ನ್ಯಾಯಾಲಯದ ನ್ಯಾಯಾಧೀಶರ ಮೇಲೆ  ಆರೋಪ ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ 2009 ರ ನವೆಂಬರ್‌ನಲ್ಲಿ ಅಂದಿನ ತೆಹಲ್ಕಾ ನಿಯತಕಾಲಿಕೆಯ ಪ್ರಧಾನ ಸಂಪಾದಕ  ತರುಣ್ ತೇಜ್‌ಪಾಲ್ ಹಾಗೂ ಪ್ರಶಾಂತ್ ಭೂಷಣ್ ಅವರಿಗೆ ನ್ಯಾಯಾಂಗ ನಿಂದನೆ ನೋಟೀಸ್ ನೀಡಿತ್ತು. 

ಒಬ್ಬ ವ್ಯಕ್ತಿಯು ನ್ಯಾಯಾಂಗದ ವಿರುದ್ಧ ಯಾವಾಗ ಆರೋಪಗಳನ್ನು ಎತ್ತಬಹುದು ಅಥವಾ ಅವನಿಗೆ ಮಾದ್ಯಮಗಳೆದುರು  ಹೋಗಲು ಅನುಮತಿ ಇದೆಯೇ ಎಂಬ ಬಗ್ಗೆ ಸುಪ್ರೀಂ ಕೋರ್ಟ್ಅನೇಕ  ವಿಧದಲ್ಲಿ ಪರಿಶೀಲನೆ ನಡೆಸುತ್ತಿದೆ. ನ್ಯಾಯಾಲಯವು ಈಗ ಅಕ್ಟೋಬರ್ 12 ರಂದು ಮತ್ತೆ ಈ ವಿಷಯವನ್ನು ಕೈಗೆತ್ತಿಕೊಳ್ಳಲಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT