ಸಾಂದರ್ಭಿಕ ಚಿತ್ರ 
ದೇಶ

ಡಿಸಿಜಿಐ ಆದೇಶವನ್ನು ಪಾಲಿಸುತ್ತೇವೆ:ಶೋಕಾಸ್ ನೊಟೀಸ್ ಗೆ ಸೆರಂ ಇನ್ಸ್ ಟಿಟ್ಯೂಟ್ ಪ್ರತಿಕ್ರಿಯೆ

ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ)ದ ಆದೇಶ, ಸೂಚನೆಗಳಿಗೆ ಬದ್ಧವಾಗಿರುವುದಾಗಿ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್ಐಐ) ಫಾರ್ಮಾ ಕಂಪೆನಿ ಪ್ರತಿಕ್ರಿಯೆ ನೀಡಿದೆ.

ನವದೆಹಲಿ: ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ)ದ ಆದೇಶ, ಸೂಚನೆಗಳಿಗೆ ಬದ್ಧವಾಗಿರುವುದಾಗಿ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್ಐಐ) ಫಾರ್ಮಾ ಕಂಪೆನಿ ಪ್ರತಿಕ್ರಿಯೆ ನೀಡಿದೆ.

ನಿನ್ನೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದಿಂದ ಶೋಕಾಸ್ ನೊಟೀಸ್ ಬಂದ ತಕ್ಷಣವೇ ಪ್ರತಿಕ್ರಿಯಿಸಿರುವ ಕಂಪೆನಿ, ಉನ್ನತ ಡ್ರಗ್ ಪ್ರಾಧಿಕಾರದ ಆದೇಶವನ್ನು ಪಾಲಿಸುವುದಾಗಿ ಹೇಳಿದೆ. ಲಸಿಕೆಯ ಪ್ರಯೋಗವನ್ನು ನಿಲ್ಲಿಸುವಂತೆ ತಮಗೆ ಈ ಹಿಂದೆ ಸೂಚನೆ ಬಂದಿರಲಿಲ್ಲ ಎಂದು ಹೇಳಿದೆ.

ನಾವು ಡಿಸಿಜಿಐ ಆದೇಶವನ್ನು ಪಾಲಿಸುತ್ತೇವೆ, ನಮಗೆ ಪ್ರಯೋಗವನ್ನು ತಡೆಹಿಡಿಯುವಂತೆ ಸೂಚನೆ ಬಂದಿರಲಿಲ್ಲ. ಡಿಸಿಜಿಐ ಸುರಕ್ಷತೆ ದೃಷ್ಟಿಯಿಂದ ಇದನ್ನು ಹೇಳುವುದಾದರೆ ಅವರ ಸೂಚನೆಯನ್ನು ನಾವು ಪಾಲಿಸುತ್ತೇವೆ, ಗುಣಮಟ್ಟದ ಶಿಷ್ಟಾಚಾರವನ್ನು ಅನುಸರಿಸುತ್ತೇವೆ ಎಂದು ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಹೇಳಿದೆ.

ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರೊಂದಿಗೆ ಸೇರಿ ಅಸ್ಟ್ರಾ ಝೆನಕಾ ಎಂಬ ಡ್ರಗ್ ಕಂಪೆನಿ ಕೋವಿಡ್-19 ವಿರುದ್ಧ ಲಸಿಕೆ ಅಭಿವೃದ್ಧಿಪಡಿಸಿ ಅದನ್ನು ಪ್ರಯೋಗಿಸಿದ ವೇಳೆ ಸ್ವಯಂಸೇವಕರೊಬ್ಬರಲ್ಲಿ ವಿಚಿತ್ರ ಕಾಯಿಲೆ ಕಂಡುಬಂದ ಹಿನ್ನೆಲೆಯಲ್ಲಿ ಪ್ರಯೋಗವನ್ನು ನಿಲ್ಲಿಸಿದೆ. ಈ ಬೆಳವಣಿಗೆ ನಂತರ ಅಮೆರಿಕ, ಇಂಗ್ಲೆಂಡ್, ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾ ದೇಶಗಳಲ್ಲಿ ಸಹ ಕೋವಿಡ್-19 ಲಸಿಕೆಯ ಪ್ರಾಯೋಗಿಕ ಪರೀಕ್ಷೆಯನ್ನು ಸ್ಥಗಿತಗೊಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಕೂಡ ಪ್ರಯೋಗ ತಡೆಹಿಡಿಯುವಂತೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದ ಡಾ ವಿ ಜಿ ಸೊಮನಿ ಸೆರಂ ಇನ್ಸ್ ಟಿಟ್ಯೂಟ್ ಗೆ ನೊಟೀಸ್ ಜಾರಿ ಮಾಡಿದ್ದರು.

ಡ್ರಗ್ಸ್ ಕಂಟ್ರೋಲರ್ ಆಫ್ ಇಂಡಿಯಾ ಕಳೆದ ಆಗಸ್ಟ್ 2ರಂದು ಸೆರಂ ಇನ್ಸ್ ಟಿಟ್ಯೂಟ್ ಗೆ ಸುರಕ್ಷಿತ ಕ್ರಮಗಳೊಂದಿಗೆ ಕೋವಿಶೀಲ್ಡ್ ಕೊರೋನಾ ವೈರಸ್ ಲಸಿಕೆ ಕಂಡುಹಿಡಿಯಲು ಎರಡು ಮತ್ತು ಮೂರನೇ ಹಂತದ ಪ್ರಾಯೋಗಿಕ ಪರೀಕ್ಷೆಗೆ ಅನುಮತಿ ನೀಡಿತ್ತು. ಸೆರಂ ಇನ್ಸ್ ಟಿಟ್ಯೂಟ್ ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಅಸ್ಟ್ರಾ ಝೆನಕಾ ಕಂಪೆನಿಯ ಸಹಯೋಗದೊಂದಿಗೆ ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT