ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19 ಮುಗಿದ ಮೇಲೆಯೂ ವರ್ಚುವಲ್ ಕೋರ್ಟ್ ಕಲಾಪವನ್ನು ಮುಂದುವರಿಸಿ: ಸಂಸದೀಯ ಸಮಿತಿ ಶಿಫಾರಸು 

ಕೋವಿಡ್-19 ಸಾಂಕ್ರಾಮಿಕ ರೋಗದ ಪ್ರಭಾವ ಕಡಿಮೆಯಾದ ಮೇಲೆ ಸಹ ನಿರ್ದಿಷ್ಟ ಕೇಸುಗಳಿಗೆ ವರ್ಚುವಲ್ ಕೋರ್ಟ್ ಮೂಲಕ ವಿಚಾರಣೆ ನಡೆಸುವ ಪ್ರಕ್ರಿಯೆಯನ್ನು ಮುಂದುವರಿಸಬೇಕು ಎಂದು ಕಾನೂನು ಮತ್ತು ನ್ಯಾಯ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿ ಶುಕ್ರವಾರ ಶಿಫಾರಸು ಮಾಡಿ ವರದಿ ಸಲ್ಲಿಸಿದೆ.

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ಪ್ರಭಾವ ಕಡಿಮೆಯಾದ ಮೇಲೆ ಸಹ ನಿರ್ದಿಷ್ಟ ಕೇಸುಗಳಿಗೆ ವರ್ಚುವಲ್ ಕೋರ್ಟ್ ಮೂಲಕ ವಿಚಾರಣೆ ನಡೆಸುವ ಪ್ರಕ್ರಿಯೆಯನ್ನು ಮುಂದುವರಿಸಬೇಕು ಎಂದು ಕಾನೂನು ಮತ್ತು ನ್ಯಾಯ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿ ಶುಕ್ರವಾರ ಶಿಫಾರಸು ಮಾಡಿ ವರದಿ ಸಲ್ಲಿಸಿದೆ.

ಬಿಜೆಪಿಯ ಹಿರಿಯ ನಾಯಕ ಭೂಪೇಂದರ್ ಯಾದವ್ ನೇತೃತ್ವದ ತಂಡ ರಾಜ್ಯಸಭಾ ಸಭಾಪತಿ ಎಂ ವೆಂಕಯ್ಯ ನಾಯ್ಡು ಅವರಿಗೆ ಸಲ್ಲಿಸಿದ ವರದಿಯಲ್ಲಿ ಈ ಶಿಫಾರಸು ಮಾಡಿದೆ.

ನ್ಯಾಯಾಲಯ ಎಂಬುದು ಜನರಿಗೆ ಸೇವೆ ಸಲ್ಲಿಸುವ ಸ್ಥಳ, ನಮ್ಮ ಪುರಾತನ ಕೆಲಸಗಳ ಅಭ್ಯಾಸದ ಕೊನೆಯ ಭದ್ರಕೋಟೆಯಾಗಿರುವ ನ್ಯಾಯಾಲಯ ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಳ್ಳಬೇಕು ಎಂದು ಕಾನೂನು ಮತ್ತು ನ್ಯಾಯ ಇಲಾಖೆಯ ಸಾರ್ವಜನಿಕ, ಖಾಸಗಿ ಕುಂದು ಕೊರತೆಗಳನ್ನು ನಿವಾರಿಸಲು ರಚಿಸಲಾಗಿರುವ ಸ್ಥಾಯಿ ಸಮಿತಿ ತನ್ನ ವರದಿಯಲ್ಲಿ ಹೇಳಿದೆ.

ನ್ಯಾಯಾಲಯಕ್ಕೆ ಹೋಗಿ ಹಣ, ಸಮಯ ವ್ಯರ್ಥ ಮಾಡುವ ಬದಲು ಡಿಜಿಟಲ್ ನ್ಯಾಯಾಧೀಕರ ವೇಗವಾಗಿ ಮತ್ತು ಅಗ್ಗದ ಖರ್ಚಿನಲ್ಲಿ ಸಾಗುತ್ತದೆ, ವರ್ಚುವಲ್ ಕೋರ್ಟ್ ಪದ್ಧತಿಯನ್ನು ಕೋವಿಡ್-19 ಮುಗಿದ ನಂತರವೂ ಕೆಲವು ನಿರ್ದಿಷ್ಟ ಪ್ರಕರಣಗಳಿಗೆ ಸಂಬಂಧಪಟ್ಟ ಎಲ್ಲಾ ಕಕ್ಷಿದಾರರು ಮತ್ತು ನ್ಯಾಯಾಧೀಶರ ಒಪ್ಪಿಗೆಯಿದ್ದರೆ ಮುಂದುವರಿಸಬಹುದು ಎಂದು ಹೇಳಿದೆ.

ದೇಶಾದ್ಯಂತ ಇರುವ ಹಲವು ಟಿಡಿಎಸ್ಎಟಿ, ಐಪಿಎಬಿ, ಎನ್‌ಸಿಎಎಲ್‌ಟಿಯಂತಹ ಮೇಲ್ಮನವಿ ನ್ಯಾಯಾಧಿಕರಣಗಳಲ್ಲಿ ಶಾಶ್ವತವಾಗಿ ವರ್ಚುವಲ್ ಕಲಾಪಗಳನ್ನು ಮುಂದುವರಿಸಬಹುದು ಎಂದು ಶಿಫಾರಸು ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT