ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19 ಮುಗಿದ ಮೇಲೆಯೂ ವರ್ಚುವಲ್ ಕೋರ್ಟ್ ಕಲಾಪವನ್ನು ಮುಂದುವರಿಸಿ: ಸಂಸದೀಯ ಸಮಿತಿ ಶಿಫಾರಸು 

ಕೋವಿಡ್-19 ಸಾಂಕ್ರಾಮಿಕ ರೋಗದ ಪ್ರಭಾವ ಕಡಿಮೆಯಾದ ಮೇಲೆ ಸಹ ನಿರ್ದಿಷ್ಟ ಕೇಸುಗಳಿಗೆ ವರ್ಚುವಲ್ ಕೋರ್ಟ್ ಮೂಲಕ ವಿಚಾರಣೆ ನಡೆಸುವ ಪ್ರಕ್ರಿಯೆಯನ್ನು ಮುಂದುವರಿಸಬೇಕು ಎಂದು ಕಾನೂನು ಮತ್ತು ನ್ಯಾಯ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿ ಶುಕ್ರವಾರ ಶಿಫಾರಸು ಮಾಡಿ ವರದಿ ಸಲ್ಲಿಸಿದೆ.

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ಪ್ರಭಾವ ಕಡಿಮೆಯಾದ ಮೇಲೆ ಸಹ ನಿರ್ದಿಷ್ಟ ಕೇಸುಗಳಿಗೆ ವರ್ಚುವಲ್ ಕೋರ್ಟ್ ಮೂಲಕ ವಿಚಾರಣೆ ನಡೆಸುವ ಪ್ರಕ್ರಿಯೆಯನ್ನು ಮುಂದುವರಿಸಬೇಕು ಎಂದು ಕಾನೂನು ಮತ್ತು ನ್ಯಾಯ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿ ಶುಕ್ರವಾರ ಶಿಫಾರಸು ಮಾಡಿ ವರದಿ ಸಲ್ಲಿಸಿದೆ.

ಬಿಜೆಪಿಯ ಹಿರಿಯ ನಾಯಕ ಭೂಪೇಂದರ್ ಯಾದವ್ ನೇತೃತ್ವದ ತಂಡ ರಾಜ್ಯಸಭಾ ಸಭಾಪತಿ ಎಂ ವೆಂಕಯ್ಯ ನಾಯ್ಡು ಅವರಿಗೆ ಸಲ್ಲಿಸಿದ ವರದಿಯಲ್ಲಿ ಈ ಶಿಫಾರಸು ಮಾಡಿದೆ.

ನ್ಯಾಯಾಲಯ ಎಂಬುದು ಜನರಿಗೆ ಸೇವೆ ಸಲ್ಲಿಸುವ ಸ್ಥಳ, ನಮ್ಮ ಪುರಾತನ ಕೆಲಸಗಳ ಅಭ್ಯಾಸದ ಕೊನೆಯ ಭದ್ರಕೋಟೆಯಾಗಿರುವ ನ್ಯಾಯಾಲಯ ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಳ್ಳಬೇಕು ಎಂದು ಕಾನೂನು ಮತ್ತು ನ್ಯಾಯ ಇಲಾಖೆಯ ಸಾರ್ವಜನಿಕ, ಖಾಸಗಿ ಕುಂದು ಕೊರತೆಗಳನ್ನು ನಿವಾರಿಸಲು ರಚಿಸಲಾಗಿರುವ ಸ್ಥಾಯಿ ಸಮಿತಿ ತನ್ನ ವರದಿಯಲ್ಲಿ ಹೇಳಿದೆ.

ನ್ಯಾಯಾಲಯಕ್ಕೆ ಹೋಗಿ ಹಣ, ಸಮಯ ವ್ಯರ್ಥ ಮಾಡುವ ಬದಲು ಡಿಜಿಟಲ್ ನ್ಯಾಯಾಧೀಕರ ವೇಗವಾಗಿ ಮತ್ತು ಅಗ್ಗದ ಖರ್ಚಿನಲ್ಲಿ ಸಾಗುತ್ತದೆ, ವರ್ಚುವಲ್ ಕೋರ್ಟ್ ಪದ್ಧತಿಯನ್ನು ಕೋವಿಡ್-19 ಮುಗಿದ ನಂತರವೂ ಕೆಲವು ನಿರ್ದಿಷ್ಟ ಪ್ರಕರಣಗಳಿಗೆ ಸಂಬಂಧಪಟ್ಟ ಎಲ್ಲಾ ಕಕ್ಷಿದಾರರು ಮತ್ತು ನ್ಯಾಯಾಧೀಶರ ಒಪ್ಪಿಗೆಯಿದ್ದರೆ ಮುಂದುವರಿಸಬಹುದು ಎಂದು ಹೇಳಿದೆ.

ದೇಶಾದ್ಯಂತ ಇರುವ ಹಲವು ಟಿಡಿಎಸ್ಎಟಿ, ಐಪಿಎಬಿ, ಎನ್‌ಸಿಎಎಲ್‌ಟಿಯಂತಹ ಮೇಲ್ಮನವಿ ನ್ಯಾಯಾಧಿಕರಣಗಳಲ್ಲಿ ಶಾಶ್ವತವಾಗಿ ವರ್ಚುವಲ್ ಕಲಾಪಗಳನ್ನು ಮುಂದುವರಿಸಬಹುದು ಎಂದು ಶಿಫಾರಸು ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ