ವಿದೇಶಾಂಗ ಸಚಿವರಾದ ಎಸ್ ಜೈಶಂಕರ್ ಮತ್ತು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ 
ದೇಶ

ವಿವಾದಗಳು ವ್ಯತ್ಯಾಸ ತರಬಾರದು:ಭಾರತ-ಚೀನಾ ವಿದೇಶಾಂಗ ಸಚಿವರ ಸಭೆಯಲ್ಲಿ ಸೇನಾಪಡೆ ಹಿಂತೆಗೆದುಕೊಳ್ಳಲು ಒಪ್ಪಿಗೆ

ಗಡಿ ವಾಸ್ತವ ರೇಖೆಯ ಬಳಿ ಚೀನಾ ಸೇನಾಪಡೆ ಶಸ್ತ್ರಸಜ್ಜಿತವಾಗಿ ನಿಯೋಜನೆ ಬಗ್ಗೆ ಭಾರತದ ಕಳವಳವನ್ನು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಜೊತೆಗೆ ಸಭೆ ನಡೆಸಿದ ವೇಳೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಗಡಿ ವಾಸ್ತವ ರೇಖೆಯ ಬಳಿ ಚೀನಾ ಸೇನಾಪಡೆ ಶಸ್ತ್ರಸಜ್ಜಿತವಾಗಿ ನಿಯೋಜನೆ ಬಗ್ಗೆ ಭಾರತದ ಕಳವಳವನ್ನು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಜೊತೆಗೆ ಸಭೆ ನಡೆಸಿದ ವೇಳೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಭಾರತ-ಚೀನಾ ವಿದೇಶಾಂಗ ಸಚಿವರ ಮಾತುಕತೆ ನಡೆಯುತ್ತಿದ್ದು, ಗಡಿ ವಾಸ್ತವ ರೇಖೆಯಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಚೀನಾದ ಕಡೆಯಿಂದ ನಿಖರ ಸ್ಪಷ್ಟ ವಿವರಣೆ ಸಿಕ್ಕಿಲ್ಲ. ಚೀನಾ ಸೇನಾಪಡೆಯ ಪ್ರಚೋದನಕಾರಿ ವರ್ತನೆ, ಭಾರತ-ಚೀನಾ ಮಧ್ಯೆ ಏರ್ಪಟ್ಟಿದ್ದ ದ್ವಿಪಕ್ಷೀಯ ಒಪ್ಪಂದ ಮತ್ತು ಶಿಷ್ಟಾಚಾರಗಳನ್ನು ಮುರಿದಿದೆ ಎಂದು ಕಂಡುಬರುತ್ತಿದೆ ಎಂದು ಸಭೆಯಲ್ಲಿ ಜೈಶಂಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ. 

ಗಡಿ ವಾಸ್ತವ ರೇಖೆ, ಗಡಿ ವಿಚಾರದ ಕುರಿತಂತೆ ಎರಡೂ ದೇಶಗಳು ಮಾಡಿಕೊಂಡಿದ್ದ ಒಪ್ಪಂದಗಳನ್ನು ಪಾಲಿಸಲು ಮತ್ತು ಯಥಾಸ್ಥಿತಿ ಕಾಯ್ದುಕೊಳ್ಳಲು ಭಾರತ ಚೀನಾ ದೇಶದಿಂದ ನಿರೀಕ್ಷಿಸುತ್ತಿದ್ದು, ಚೀನಾ ಇದಕ್ಕೆ ಸಹಕಾರ ನೀಡುತ್ತಿಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆ ಭಾರತ-ಚೀನಾ ಹೊರಡಿಸಿರುವ ಜಂಟಿ ಹೇಳಿಕೆಯಲ್ಲಿ, ಗಡಿ ವಿವಾದ ಭುಗಿಲೇಳಲು ಬಿಡಬಾರದು, ವಿವಾದ ವ್ಯತ್ಯಾಸಗಳನ್ನು ತರಲು ಎರಡೂ ದೇಶಗಳ ಮಧ್ಯೆ ಅಂತರ ತರಲು ಬಿಡಬಾರದು ಎಂದು ತೀರ್ಮಾನಕ್ಕೆ ಬಂದಿರುವುದಾಗಿ ತಿಳಿದುಬಂದಿದೆ. ಈಗ ಗಡಿಯಲ್ಲಿ ಏನು ಪರಿಸ್ಥಿತಿಯಿದೆ ಅದು ಇಬ್ಬರಿಗೂ ಇಷ್ಟವಿಲ್ಲದ ಸ್ಥಿತಿಯಾಗಿದೆ ಎಂದು ಉಭಯ ನಾಯಕರು ಹೇಳಿರುವುದಾಗಿ ತಿಳಿದುಬಂದಿದೆ.

ಸದ್ಯ ಗಡಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಎರಡೂ ದೇಶಗಳ ಜನರಿಗೆ ಸಮಾಧಾನ, ಖುಷಿ ನೀಡುತ್ತಿಲ್ಲ. ಎರಡೂ ಕಡೆಯ ಸೇನಾಪಡೆಗಳು ಮಾತುಕತೆ ಮುಂದುವರಿಸಿ ತಕ್ಷಣವೇ ಸೈನ್ಯವನ್ನು ಹಿಂತೆಗೆದುಕೊಂಡು ಸರಿಯಾದ ಅಂತರ ಕಾಯ್ದುಕೊಂಡು ಉದ್ವಿಗ್ನ ಪರಿಸ್ಥಿತಿಯನ್ನು ನಿವಾರಿಸಬೇಕು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT