ಕಂಗನಾ ರನಾವತ್ 
ದೇಶ

ಕಂಗನಾ ಕಚೇರಿ ಧ್ವಂಸ: ನನಗೆ ಅವಮಾನವಾಗಿದೆ, ಪರಿಹಾರ ಕೊಡಿ-ನಟಿ ಕಂಗನಾ ಬೇಡಿಕೆ

ಮುಂಬೈ ಮಹಾನಗರ ಪಾಲಿಕೆ ನನ್ನ ಕಚೇರಿಯ ಒಂದು ಭಾಗವನ್ನು ನೆಲಸಮ ಮಾಡಿದ್ದು, ಇದರಿಂದ ನನಗೆ ಅವಮಾನ ಆಗಿದೆ ಎಂದಿರುವ ಬಾಲಿವುಡ್​ ನಟಿ ಕಂಗನಾ ರಣಾವುತ್​ ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ.

ಮುಂಬೈ: ಮುಂಬೈ ಮಹಾನಗರ ಪಾಲಿಕೆ ನನ್ನ ಕಚೇರಿಯ ಒಂದು ಭಾಗವನ್ನು ನೆಲಸಮ ಮಾಡಿದ್ದು, ಇದರಿಂದ ನನಗೆ ಅವಮಾನ ಆಗಿದೆ ಎಂದಿರುವ ಬಾಲಿವುಡ್​ ನಟಿ ಕಂಗನಾ ರಣಾವುತ್​ ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ.

ಕೇಂದ್ರ ಸಚಿವ ರಾಮದಾಸ್​ ಅಠಾವಳೆ ಅವರು ಗುರುವಾರ ಮುಂಬೈನಲ್ಲಿ ಕಂಗನಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಬಗ್ಗೆ ಮಾತನಾಡಿರುವ ಸಚಿವರು, ಸುಮಾರು 1 ಗಂಟೆ ಅವರೊಂದಿಗೆ ಮಾತನಾಡಿ. ಮುಂಬೈನಲ್ಲಿ ಇರಲು ಯಾವುದೇ ಭಯವಿಟ್ಟುಕೊಳ್ಳಬೇಡಿ ಎಂದು ಹೇಳಿದ್ದೇನೆ. ಮುಂಬೈ ದೇಶದ ಆರ್ಥಿಕ ರಾಜಧಾನಿ ಮತ್ತು ಇಲ್ಲಿ ವಾಸಿಸಲು ಎಲ್ಲರಿಗೂ ಹಕ್ಕಿದೆ ಎಂದು ಸಚಿವರು, ನಮ್ಮ ಆರ್​ಪಿಐ (ರಿಪಬ್ಲಿಕನ್​ ಪಾರ್ಟಿ ಆಫ್​ ಇಂಡಿಯಾ) ಪಕ್ಷವು ಸದಾ ನಿಮಗೆ ಬೆಂಬಲವಾಗಿರಲಿದೆ ಎಂದು ಹೇಳಿದರು.

ಕಚೇರಿ ನೆಲಸಮ ಘಟನೆಯಿಂದ ಕಂಗನಾಗೆ ಅವಮಾನ ಆಗಿದೆಯಂತೆ. ಕಳೆದ ಜನವರಿಯಲ್ಲಷ್ಟೇ ನಿರ್ಮಿಸಿದ ಅವರ ಕಚೇರಿ ಇದೀಗ ಹಾನಿಯಾಗಿದೆ. ಕಟ್ಟಡ ನಿರ್ಮಾಣಕಾರರು 2-3 ಇಂಚು ಹೆಚ್ಚಿನ ಜಾಗದಲ್ಲಿ ನಿರ್ಮಿಸಿದ್ದಾರೆಂಬುದು ಅವರಿಗೆ ತಿಳಿದಿರಲಿಲ್ಲವಂತೆ. ಅಕ್ರಮ ಭಾಗವನ್ನು ಮಾತ್ರ ಬಿಎಂಸಿ ನೆಲಸಮ ಮಾಡಬೇಕಿತ್ತು. ಆದರೆ, ಕಚೇರಿ ಒಳಗಿನ ಗೋಡೆ ಮತ್ತು ಫರ್ನಿಚರ್​ಗಳಿಗೂ ಹಾನಿಯಾಗಿವೆ. ಈ ಬಗ್ಗೆ ಕಂಗನಾ ನ್ಯಾಯಾಲಯ ಮೆಟ್ಟಿಲೇರಲಿದ್ದು, ಪರಿಹಾರಕ್ಕಾಗಿ ಬೇಡಿಕೆ ಇಡಲಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ