ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು 
ದೇಶ

ಶಿಕ್ಷಣ ಸಂಸ್ಥೆಗಳ ಸಂಸ್ಕೃತಿಯಲ್ಲಿ ಉತ್ಕೃಷ್ಟತೆಯ ಅನ್ವೇಷಣೆ ಬೇರೂರಿರಬೇಕು: ಉಪರಾಷ್ಟ್ರಪತಿ ವೆಂಕಯ್ಯನಾಯ್ಡು

ಉತ್ಕೃಷ್ಟತೆಯ ಅನ್ವೇಷಣೆ ಶಿಕ್ಷಣ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿರಬೇಕು ಮತ್ತು ಅದನ್ನು ಶಿಕ್ಷಣ ಸಂಸ್ಥೆಗಳ ಸಂಸ್ಕೃತಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಪ್ರತಿಪಾದಿಸಿದ್ದಾರೆ.

ನವದೆಹಲಿ: ಉತ್ಕೃಷ್ಟತೆಯ ಅನ್ವೇಷಣೆ ಶಿಕ್ಷಣ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿರಬೇಕು ಮತ್ತು ಅದನ್ನು ಶಿಕ್ಷಣ ಸಂಸ್ಥೆಗಳ ಸಂಸ್ಕೃತಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಪ್ರತಿಪಾದಿಸಿದ್ದಾರೆ.

ರಾಮಕೃಷ್ಣ ಮಠದ ಹೈದರಾಬಾದ್‌ನ ವಿವೇಕಾನಂದ ಮಾನವ ಶ್ರೇಷ್ಠತಾ ಸಂಸ್ಥೆ (ವಿಐಎಚ್‍ಇ)ಯ 21ನೇ ಸ್ಥಾಪನಾ ದಿನಾಚರಣೆಯ ವರ್ಚ್ಯುವಲ್‍ ಸಭೆಯಲ್ಲಿ ಪಾಲ್ಗ್ಗೊಂಡು ಭಾಷಣ ಮಾಡಿದ ಅವರು, 'ಒಂದು ರಾಷ್ಟ್ರವಾಗಿ ನಮ್ಮ ಪ್ರಯಣದ ಈ ಮಹತ್ವದ ಹಂತದಲ್ಲಿ, ಉತ್ಕೃಷ್ಟತೆ ಅಗತ್ಯವಾಗಿದೆ. ಸಾಧಾರಣವಾಗಿ  ಮುಂದುವರೆಯುವುದು ಇನ್ನು ಮುಂದೆ ಒಂದು ಆಯ್ಕೆಯಾಗುವುದಿಲ್ಲ. ಉತ್ಕೃಷ್ಟತೆಯ ಕೃಷಿಯಲ್ಲಿ ಶಿಸ್ತು, ದೃಢವಿಶ್ವಾಸ ಮತ್ತು ಏಕಾಗ್ರತೆ ಅತಿ ಪ್ರಮುಖವಾಗಿದೆ. ಶಿಕ್ಷಣ ಸಂಸ್ಥೆಗಳು ಶ್ರೇಷ್ಠತೆಯ ಪರಿಕಲ್ಪನೆಯನ್ನು ಅಳವಡಿಸಿಕೊಳ್ಳಬೇಕು. ಪ್ರಪಂಚ ಸಾಗುತ್ತಿರುವ ಈ ಸನ್ನಿವೇಶದಲ್ಲಿ ಇದು ಕಡ್ಡಾಯವೂ ಆಗಿದೆ.  ಸಾಧಾರಣ ಮಟ್ಟದಲ್ಲಿ ಸಾಗಿದರೆ ಅದು ದೀರ್ಘಕಾಲ ಉಳಿಯುವುದಿಲ್ಲ ಎಂದು ವೆಂಕಯ್ಯನಾಯ್ಡು ಹೇಳಿದ್ದಾರೆ.

1893 ರಲ್ಲಿ ಸ್ವಾಮಿ ವಿವೇಕಾನಂದರು ಷಿಕಾಗೋ ಧರ್ಮ ಸಂಸತ್‍ನಲ್ಲಿ ಮಾಡಿದ ಭಾಷಣವನ್ನು ಉಲ್ಲೇಖಿಸಿದ ಉಪರಾಷ್ಟ್ರಪತಿಯವರು, ಧರ್ಮ, ಆಧ್ಯಾತ್ಮಿಕತೆ, ರಾಷ್ಟ್ರೀಯತೆ, ಶಿಕ್ಷಣ, ತತ್ವಶಾಸ್ತ್ರ, ಸಾಮಾಜಿಕ ಸುಧಾರಣೆ, ಬಡತನ ನಿವಾರಣೆ ಮತ್ತು ಸಾರ್ವಜನಿಕ ಸಬಲೀಕರಣದ ಕುರಿತಾದ ಅವರ  ಅಭಿಪ್ರಾಯಗಳು ತಮ್ಮ ಮೇಲೆ ಪ್ರಭಾವ ಬೀರಿವೆ ಎಂದು ಹೇಳಿದ್ದಾರೆ ಎಂಬುದಾಗಿ ಅಧಿಕೃತ ಪ್ರಕಟಣೆ ತಿಳಿಸಿದೆ.

21 ನೇ ಶತಮಾನದ ಸವಾಲುಗಳನ್ನು ಎದುರಿಸಲು ಶಿಕ್ಷಣ ವ್ಯವಸ್ಥೆಯಲ್ಲಿ ಈಗಿನಿಂದಲೇ ಆಮೂಲಾಗ್ರ ಬದಲಾವಣೆಯ ಅವಶ್ಯಕತೆಯಿದೆ ಎಂದು ವೆಂಕಯ್ಯನಾಯ್ಡು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಎಚ್ಚರಿಕೆಗೆ ತಲೆಬಾಗದ ಇರಾನ್​: ಸೌದಿ ನೆಲೆಯಲ್ಲಿ ಕ್ಷಿಪಣಿ ದಾಳಿ; ಅಮೆರಿಕಾದ 5 ಟ್ಯಾಂಕರ್ ವಿಮಾನಗಳಿಗೆ ಹಾನಿ..!

West Asia conflict effect: LPG ಕೊರತೆ ತೀವ್ರ; ಮನೆಗಳಲ್ಲಿ PNG, ಹೋಟೆಲ್ ಗಳು ಕಲ್ಲಿದ್ದಲು ಬಳಕೆ ಮಾಡುವಂತೆ ಕೇಂದ್ರ ಸರ್ಕಾರ ಸಲಹೆ

ಒಡಿಶಾ 'ಕೈ' ಶಾಸಕರಿಗೆ' ಟ್ರಬಲ್ ಶೂಟರ್ ಡಿಕೆಶಿ ಆತಿಥ್ಯ: 'ಆಪರೇಷನ್ ಕಮಲ' ತಡೆಗೆ ಕೈಗೊಂಡ ಮುನ್ನೆಚ್ಚರಿಕಾ ಕ್ರಮ; ಕಾಂಗ್ರೆಸ್ ಸಮರ್ಥನೆ

ಒಂದೇ ಸೂರಿನಡಿ ರಾಮ್-ರಹೀಮ್: ದ್ವೇಷ ಹರಡುವವರ ಮಧ್ಯೆ ಮುಸ್ಲಿಮರಿಗಾಗಿ ‘ಇಫ್ತಾರ್ ಕೂಟ’ ಆಯೋಜಿಸುತ್ತಿರುವ ಹಿಂದೂ ಮಹಿಳೆ..!

Strait of Hormuz: 'ಹೌದು.. ನಮ್ಮ ಆಪ್ತ ರಾಷ್ಟ್ರ'... ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ!

SCROLL FOR NEXT