ಶ್ರೀನಗರ-ಲಡಾಕ್ ಹೆದ್ದಾರಿಯಲ್ಲಿ ಭಾರತೀಯ ಯೋಧ 
ದೇಶ

ಜಮ್ಮು-ಕಾಶ್ಮೀರ:ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ 

ಕಳೆದ ರಾತ್ರಿ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ 5 ವಲಯಗಳಲ್ಲಿ ಗಡಿ ನಿಯಂತ್ರಣ ರೇಖೆಯ ಫಾರ್ವರ್ಡ್ ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆ ಭಾರೀ ಗುಂಡಿನ ಮಳೆಗರೆದಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು: ಕಳೆದ ರಾತ್ರಿ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ 5 ವಲಯಗಳಲ್ಲಿ ಗಡಿ ನಿಯಂತ್ರಣ ರೇಖೆಯ ಫಾರ್ವರ್ಡ್ ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆ ಭಾರೀ ಗುಂಡಿನ ಮಳೆಗರೆದಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೆ ಭಾರತೀಯ ಸೇನೆ ದಿಟ್ಟವಾಗಿ ಪ್ರತಿಕ್ರಿಯೆ ನೀಡಿದೆ ಎಂದು ತಿಳಿದುಬಂದಿದೆ. ಪಾಕಿಸ್ತಾನ ಸೇನೆ ಗುಂಡು ಮತ್ತು ಶಸ್ತ್ರಾಸ್ತ್ರಗಳೊಂದಿಗೆ ಗಡಿ ನಿಯಂತ್ರಣ ರೇಖೆ ನಿಯಮ ಉಲ್ಲಂಘಿಸಿ ಹಲವು ಕಡೆಗಳಲ್ಲಿ ದಾಳಿ ನಡೆಸಿದೆ ಎಂದು ಜಮ್ಮು ಮೂಲದ ರಕ್ಷಣಾ ಇಲಾಖೆ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ತಿಳಿಸಿದ್ದಾರೆ.

ನಿನ್ನೆ ಸಾಯಂಕಾಲ ಪಾಕಿಸ್ತಾನ ಸೇನೆ ಬಾಲಾಕೋಟ್ ವಲಯದ ಮೇಲೆ ಗುರಿಯಾಗಿಟ್ಟುಕೊಂಡು ದಾಳಿ ಮಾಡಲು ಸಂಚು ರೂಪಿಸಿತ್ತು. ಈ ವರದಿ ಬರುವವರೆಗೂ ಸ್ಥಳದಲ್ಲಿ ಗುಂಡಿನ ಚಕಮಕಿ ಮುಂದುವರಿದಿದೆ ಎಂದು ತಿಳಿದುಬಂದಿದೆ. ಕಳೆದ ಸೆಪ್ಟೆಂಬರ್ 2ರಂದು ಪಾಕಿಸ್ತಾನ ಸೇನೆ ರಜೌರಿ ಜಿಲ್ಲೆಯ ಕೇರಿ ವಲಯದಲ್ಲಿ ಉಲ್ಲಂಘನೆ ಮಾಡಿ ಬಂದು ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಕಿರಿಯ ಅಧಿಕಾರಿ ಹುತಾತ್ಮರಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT