ರಾಹುಲ್ ಗಾಂಧಿ 
ದೇಶ

ಚೀನಾ ಆತಿಕ್ರಮಣ ಮಾಡಿದ ಭೂಮಿ ಹಿಂಪಡೆಯುವಿರಾ? ಅಥವಾ 'ದೇವರ ಆಟ'ಎಂದು ಸುಮ್ಮನಾಗುವಿರಾ: ಕೇಂದ್ರಕ್ಕೆ ರಾಹುಲ್ ಗಾಂಧಿ ಪ್ರಶ್ನೆ

'ಚೀನಾ ಅತಿಕ್ರಮಣ ಮಾಡಿರುವ ಭೂಮಿಯನ್ನು' ಹಿಂಪಡೆಯಲು ಯಾವುದೇ ಯೋಜನೆ ರೂಪಿಸುತ್ತಿದ್ದೀರಾ ಅಥವಾ ಅದನ್ನೂ 'ದೇವರ ಆಟ' ಎಂದು ಸುಮ್ಮನಿರುವಿರಾ? ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ನವದೆಹಲಿ: 'ಚೀನಾ ಅತಿಕ್ರಮಣ ಮಾಡಿರುವ ಭೂಮಿಯನ್ನು' ಹಿಂಪಡೆಯಲು ಯಾವುದೇ ಯೋಜನೆ ರೂಪಿಸುತ್ತಿದ್ದೀರಾ ಅಥವಾ ಅದನ್ನೂ 'ದೇವರ ಆಟ' ಎಂದು ಸುಮ್ಮನಿರುವಿರಾ? ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

"ಚೀನಿಯರು ನಮ್ಮ ಭೂಮಿಯನ್ನು ಕಬಳಿಸಿದ್ದಾರೆ.ಅದನ್ನು ಮರಳಿ ಪಡೆಯಲು ಭಾರತ ಸರ್ಕಾರ ಏನು ತಯಾರಿ ನಡೆಸಿದೆ? ಅಥವಾ ಇದನ್ನೂ' ದೇವರ ಆಟ' ಎಂದು ಕೈಬಿಡುತ್ತೀರಾ?" ಕಾಂಗ್ರೆಸ್ ನಾಯಕ ಟ್ವೀಟ್  ನಲ್ಲಿ ಪ್ರಶ್ನಿಸಿದ್ದಾರೆ.

ಭಾರತವು ಇತ್ತೀಚೆಗೆ ಪ್ಯಾಂಗೊಂಗ್ ಸರೋವರದ ದಕ್ಷಿಣ ದಂಡೆಯ ಸಮೀಪ ಎತ್ತರದ ಶಿಖರದ ಮೇಲೆ ಹಿಡಿತ ಸಾಧಿಸುವ ಮೂಲಕ ಚೀನಾವನ್ನು ಕಟ್ಟಿಹಾಕಿದೆ. . ಲಡಾಖ್‌ನ ಚುಶುಲ್ ಬಳಿಯ ದಕ್ಷಿಣದ ದಂಡೆಯ ಪಾಂಗೊಂಗ್ ತ್ಸೊ ಬಳಿಯ ಭಾರತೀಯ ಪ್ರದೇಶಗಳಿಗೆ ಅತಿಕ್ರಮಣ ಮಾಡಲು ಚೀನಾದ ಸೈನಿಕರು ಮಾಡಿದ ಪ್ರಯತ್ನವನ್ನುಇದರ ಮೂಲಕ ತಡೆಹಿಡಿಯಲಾಗಿದೆ.

ಗಲ್ವಾನ್ ಕಣಿವೆ, ಬಿಸಿನೀರ ಬುಗ್ಗೆಯ ಪ್ರದೇಶ ಹಾಗೂ ಕೊಂಗ್ರಂಗ್ನಾಲಾ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಚೀನಾ ಸೈನ್ಯವು ನಡೆಸಿದ ಗಡಿ ಉಲ್ಲಂಘನೆಯ ಬಗ್ಗೆ ಭಾರತ ಮತ್ತು ಚೀನಾ ಏಪ್ರಿಲ್-ಮೇ ತಿಂಗಳಿನಿಂದ ಪರಸ್ಪರ ಭಿನ್ನಾಭಿಪ್ರಾಯವನ್ನು ಹೊಂದಿವೆ. ಜೂನ್‌ನಲ್ಲಿ ಗಲ್ವಾನ್ ಕಣಿವೆಯಲ್ಲಿ ಚೀನಾದ ಸೈನ್ಯದೊಂದಿಗೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ನಂತರ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ.

ಕಳೆದ ಶುಕ್ರವಾರ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಸ್ಕೋದಲ್ಲಿ ನಡೆದ ಎಸ್‌ಸಿಒ ಚರ್ಚೆಯ ಹೊರತಾಗಿ  ಚೀನಾದ  ವಿದೇಶಾಂಗ ಸಚಿವ ಜನರಲ್ ವೀ ಫೆಂಗ್‌ ಜತೆ ಚರ್ಚಿಸಿ ಎಲ್‌ಎಸಿಯ ಉದ್ದಕ್ಕೂ ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಿಸಲು ಚೀನಾದ ಸೈನ್ಯದ ಪ್ರಯತ್ನಗಳು ದ್ವಿಪಕ್ಷೀಯ ಒಪ್ಪಂದಗಳನ್ನು ಉಲ್ಲಂಘಿಸುತ್ತಿವೆ ಎನ್ನುವುದನ್ನು ಸಿಂಗ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT