ಅಪಘಾತ ಸಂಭವಿಸಿದ ಸ್ಥಳ 
ದೇಶ

ಬಿಕನೆರ್-ಜೈಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸೇನಾಧಿಕಾರಿಗಳ ಸಾವು

ಬಿಕನೆರ್-ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸೇನಾಧಿಕಾರಿಗಳು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. 

ಬಿಕನೆರ್: ಬಿಕನೆರ್-ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸೇನಾಧಿಕಾರಿಗಳು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. 

ಅಪಘಾತದಲ್ಲಿ ಮೃತಪಟ್ಟ ಸೇನಾಧಿಕಾರಿಗಳನ್ನು ಕರ್ನಲ್ ಮನೀಶ್ ಸಿಂಗ್ ಚೌಹಾಣ್ ಹಾಗೂ ಮೇಜರ್ ನೀರಜ್ ಶರ್ಮಾ ಎಂದು ಗುರ್ತಿಸಲಾಗಿದೆ. 

ಬಿಕನೆರ್-ಜೈಪುರ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ವಾಹನದಲ್ಲಿ ಕರ್ನಲ್ ಮನೀಶ್ ಸಿಂಗ್ ಚೌಹಾಣ್ ಹಾಗೂ ಮೇಜರ್ ನೀರಜ್ ಹಾಗೂ ಇತರೆ ಸೇನಾ ಸಿಬ್ಬಂದಿಗಳು ವಾಹನದಲ್ಲಿ ಚಲಿಸುತ್ತಿದ್ದ ಸಂದರ್ಭದಲ್ಲಿ ವಾಹನದ ಟೈಯರ್ ಸ್ಫೋಟಗೊಂಡಿವೆ. ಪರಿಣಾಮ ಅಪಘಾತ ಸಂಭವಿಸಿ ಇಬ್ಬರು ಸೇನಾಧಿಕಾರಿಗಳು ಗಂಭೀರವಾಗಿ ಗಾಯಗೊಂಡು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ರಾಜಸ್ಥಾನ ರಾಜ್ಯದ ರಕ್ಷಣಾ ವಕ್ತಾರರು ಮಾಹಿತಿ ನೀಡಿದ್ದಾರೆ. 

ಘಟನೆಯಲ್ಲಿ ವಾಹನದಲ್ಲಿದ್ದ ಕೆಲ ಸೇನಾ ಸಿಬ್ಬಂದಿಗಳೂ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿರುವ ಅಧಿಕಾರಿಗಳು ಇದೀಗ ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT