ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19 ಲಸಿಕೆ ಪ್ರಯೋಗಕ್ಕೆ ನೇಮಕಾತಿ ರದ್ದುಪಡಿಸುವಂತೆ ಸೆರಂ ಇನ್ಸ್ ಟಿಟ್ಯೂಗೆ ಡಿಸಿಜಿಐ ಆದೇಶ

ಅಸ್ಟ್ರಾಝೆನಕಾ ಫಾರ್ಮಾ ಕಂಪೆನಿ ಕೋವಿಡ್-19 ಲಸಿಕೆಯ ಪ್ರಯೋಗವನ್ನು ಬೇರೆ ದೇಶಗಳಲ್ಲಿ ನಿಲ್ಲಿಸಿರುವುದರಿಂದ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಜೊತೆ ಕೋವಿಡ್-19ನ ಎರಡು ಮತ್ತು ಮೂರನೇ ಹಂತದ ಪ್ರಯೋಗಕ್ಕೆ ನೇಮಕಾತಿಯನ್ನು ಮುಂದಿನ ಆದೇಶದವರೆಗೆ ರದ್ದುಗೊಳಿಸುವಂತೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಸೇರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾಗೆ ಆದೇಶ ನೀಡಿದೆ

ನವದೆಹಲಿ: ಅಸ್ಟ್ರಾಝೆನಕಾ ಫಾರ್ಮಾ ಕಂಪೆನಿ ಕೋವಿಡ್-19 ಲಸಿಕೆಯ ಪ್ರಯೋಗವನ್ನು ಬೇರೆ ದೇಶಗಳಲ್ಲಿ ನಿಲ್ಲಿಸಿರುವುದರಿಂದ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಜೊತೆ ಕೋವಿಡ್-19ನ ಎರಡು ಮತ್ತು ಮೂರನೇ ಹಂತದ ಪ್ರಯೋಗಕ್ಕೆ ನೇಮಕಾತಿಯನ್ನು ಮುಂದಿನ ಆದೇಶದವರೆಗೆ ರದ್ದುಗೊಳಿಸುವಂತೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಸೇರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾಗೆ ಆದೇಶ ನೀಡಿದೆ.

ಆದೇಶದ ಪ್ರತಿ ಪಿಟಿಐ ಸುದ್ದಿಸಂಸ್ಥೆಗೆ ಲಭ್ಯವಾಗಿದ್ದು, ಅದರಲ್ಲಿ ಡಿಸಿಜಿಐನ ಡಾ ವಿ ಜಿ ಸೊಮನಿ ಸೇರಂ ಇನ್ಸ್ ಟಿಟ್ಯೂಟ್ ಗೆ ಆದೇಶ ನೀಡಿ ಪ್ರಯೋಗದ ಭಾಗವಾಗಿ ಈಗಾಗಲೇ ಪ್ರಯೋಗ ನಡೆಸಿರುವ ಲಸಿಕೆಯ ಸುರಕ್ಷತೆ ಬಗ್ಗೆ ನಿಗಾವಹಿಸುವಂತೆ, ಮತ್ತು ಕಂಪೆನಿ ಏನೇನು ಯೋಜನೆ ಹಾಕಿಕೊಂಡಿದೆ ಎಂಬುದನ್ನು ತಿಳಿಸುವಂತೆ ವರದಿ ಸಲ್ಲಿಸಬೇಕೆಂದು ಹೇಳಿದೆ.

ಪ್ರಯೋಗದಲ್ಲಿ ಮುಂದಿನ ದಿನಗಳಲ್ಲಿ ಮಾಡಿಕೊಳ್ಳುವ ನೇಮಕಾತಿಗೆ ಮುನ್ನ ಡಿಸಿಜಿಐಯಿಂದ ಅನುಮತಿ ಪಡೆಯಲು ಮತ್ತು ಇಂಗ್ಲೆಂಡಿನ ದತ್ತಾಂಶ ಮತ್ತು ಸುರಕ್ಷತೆ ನಿರ್ವಹಣೆ ಮಂಡಳಿಯಿಂದ ಅನುಮೋದನೆ ಪಡೆದಿರುವ ಬಗ್ಗೆ ಅನುಮತಿ ಸಲ್ಲಿಸುವಂತೆ ಕೂಡ ಸೊಮನಿ ಆದೇಶ ನೀಡಿದ್ದಾರೆ.

ಕೇಂದ್ರ ಡ್ರಗ್ ನಿಯಂತ್ರಣ ಪ್ರಾಧಿಕಾರ ಕಳೆದ ಸೆಪ್ಟೆಂಬರ್ 9ರಂದು ಸೆರಂ ಇನ್ಸ್ ಟಿಟ್ಯೂಟ್ ಗೆ ಶೋಕಾಸ್ ನೊಟೀಸ್ ನೀಡಿ, ಅಸ್ಟ್ರಾಝೆನಕಾ ಲಸಿಕೆಯ ಪ್ರಾಯೋಗಿಕ ಪರೀಕ್ಷೆಯನ್ನು ನಿಲ್ಲಿಸಿರುವ ಹಿನ್ನೆಲೆಯಲ್ಲಿ ಸೆರಂ ಇನ್ಸ್ ಟಿಟ್ಯೂಟ್ ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿತ್ತು.

ಬ್ರಿಟನ್-ಸ್ವೀಡನ್ ಮೂಲದ ಬಯೊ ಫಾರ್ಮಕ್ಯುಟಿಕಲ್ ಕಂಪೆನಿ ಅಸ್ಟ್ರಾಝೆನಕಾ ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಜೊತೆ ಸೇರಿಕೊಂಡು ಲಸಿಕೆ ಅಭಿವೃದ್ಧಿಪಡಿಸುತ್ತಿತ್ತು. ಅವುಗಳ ಜೊತೆ ಪುಣೆ ಮೂಲದ ಸೆರಂ ಇನ್ಸ್ ಟಿಟ್ಯೂಟ್ ಸಹಭಾಗಿತ್ವ ಹೊಂದಿದೆ. ಶೋಕಾಸ್ ನೊಟೀಸ್ ಬಂದ ನಂತರ ಲಸಿಕೆ ಪ್ರಯೋಗವನ್ನು ಸ್ಥಗಿತಗೊಳಿಸುವುದಾಗಿ ಕಂಪೆನಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT