ಪ್ರಧಾನಿ ನರೇಂದ್ರ ಮೋದಿ 
ದೇಶ

ಮಾತೃಭಾಷೆ ಶಾಲೆಗಳಲ್ಲಿ ಬೋಧನಾ ಮಾಧ್ಯಮವಾಗಬೇಕು: ಪ್ರಧಾನಿ ಮೋದಿ

ಶಾಲೆಗಳಲ್ಲಿ ಮಾತೃಭಾಷೆಯನ್ನು ಬೋಧನಾ ಮಾಧ್ಯಮವನ್ನಾಗಿ ಬಳಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಒತ್ತಿ ಹೇಳಿದ್ದಾರೆ.

ನವದೆಹಲಿ: ಶಾಲೆಗಳಲ್ಲಿ ಮಾತೃಭಾಷೆಯನ್ನು ಬೋಧನಾ ಮಾಧ್ಯಮವನ್ನಾಗಿ ಬಳಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಒತ್ತಿ ಹೇಳಿದ್ದಾರೆ.

ಭಾಷೆ ಎಂಬುದು ಜ್ಞಾನವನ್ನು ಅಭಿವ್ಯಕ್ತಿಸುವ ಒಂದು ಮಾರ್ಗವಾಗಿದೆ. ಭಾಷೆ ಎಂದಿಗೂ ವಿಜ್ಞಾನವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವಾಲಯ ಆಯೋಜಿಸಿದ್ದ 'ಶಿಕ್ಷಾ ಪರ್ವ'ದಲ್ಲಿ ಪ್ರಧಾನಿ ಮೋದಿ ಮಾತನಾಡುತ್ತಿದ್ದರು. ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಯಲ್ಲಿ ಸ್ಥಳೀಯ ಭಾಷೆಗಳನ್ನು  ಉತ್ತೇಜಿಸಲಾಗಿದ್ದರೂ, ಅಂತರರಾಷ್ಟ್ರೀಯ ಮಟ್ಟದಲ್ಲಿ ಬಳಸಬಹುದಾದ ಇತರ ಭಾಷೆಗಳನ್ನು ಕಲಿಸಲು ಯಾವುದೇ ನಿಷೇಧವಿಲ್ಲ ಎಂದು ಮೋದಿ ಸ್ಪಷ್ಟಪಡಿಸಿದರು.

ಭಾರತ ತನ್ನ 75 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಿರುವ 2022 ವೇಳೆಗೆ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (ಎನ್‌ಸಿಎಫ್) ಸಿದ್ಧಗೊಳ್ಳಲಿದೆ ಎಂದರು. ಎನ್ಇಪಿ ಘೋಷಿಸಿದ ನಂತರ ಬೋಧನಾ ಮಾಧ್ಯಮ ಯಾವುದು? ಎಂಬ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಭಾಷೆ ಶಿಕ್ಷಣದ ಮಾಧ್ಯಮವಾಗಿದೆ,  ಭಾಷೆಯೇ ಶಿಕ್ಷಣವಲ್ಲ ಎಂಬ ವೈಜ್ಞಾನಿಕ ಸತ್ಯವನ್ನು ಇಲ್ಲಿ ನಾವು ಅರ್ಥಮಾಡಿಕೊಳ್ಳಬೇಕು. ಮಕ್ಕಳು ಸುಲಭವಾಗಿ ಕಲಿಯಬಹುದಾದ ಯಾವುದೇ ಭಾಷೆಯಾಗಿರಲಿ ಅದು ಬೋಧನಾ ಮಾಧ್ಯಮವಾಗಿರಬೇಕು ಎಂದರು. 

ತರಗತಿಗಳಲ್ಲಿ ಹೇಳುವ ವಿಷಯ ಮಕ್ಕಳು ಅರ್ಥಮಾಡಿಕೊಳ್ಳಬಲ್ಲರೆ? ಎಂಬುದನ್ನು ಪರೀಕ್ಷಿಸಲು ನಾನು ಬಯಸುತ್ತೇನೆ. ಅವರು ಅದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾದರೆ, ಈ ಪ್ರಕ್ರಿಯೆ ಹೆಚ್ಚು ಸುಲಭವಾಗಲಿದೆ ಎಂದರು. ಕಲಿಕೆಯ ವಿಷಯಕ್ಕಿಂತ ಮಕ್ಕಳು ಭಾಷೆಯನ್ನು ಅರ್ಥಮಾಡಿಕೊಳ್ಳಲು ಹೆಚ್ಚು  ಶ್ರಮಿಸಬೇಕಾದ ಅಗತ್ಯವಿಲ್ಲ ಎಂದು ಹೇಳಿದರು.

ಶಿಕ್ಷಣದಲ್ಲಿ ಉನ್ನತ ಶ್ರೇಣಿ ಹೊಂದಿರುವ ಎಸ್ಟೋನಿಯಾ, ಐರ್ಲೆಂಡ್, ಫಿನ್ಲ್ಯಾಂಡ್, ಜಪಾನ್, ಪೋಲೆಂಡ್ ಮತ್ತು ದಕ್ಷಿಣ ಕೊರಿಯಾದಲ್ಲಿ ಮಕ್ಕಳಿಗೆ ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ಕಲಿಸಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು. ಮಕ್ಕಳು ಮನೆಯಲ್ಲಿ ಬಳಸುವ ಭಾಷೆಯಲ್ಲಿ ತ್ವರಿತವಾಗಿ ಕಲಿಯಬಲ್ಲರು. ಅನ್ಯ  ಭಾಷೆಯಲ್ಲಿ ಕಲಿಕೆ ಮಕ್ಕಳಲ್ಲಿ ಹೆಚ್ಚು ಒತ್ತಡವನ್ನುಂಟು ಮಾಡುತ್ತದೆ ಎಂದು ಪ್ರಧಾನಿ ನುಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT