ಉದ್ಧವ್ ಠಾಕ್ರೆ 
ದೇಶ

ಉದ್ಧವ್ ಠಾಕ್ರೆ ವ್ಯಂಗ್ಯಚಿತ್ರ ಶೇರ್ ಮಾಡಿದ್ದಕ್ಕೆ ನೌಕಾ ಪಡೆಯ ನಿವೃತ್ತ ಅಧಿಕಾರಿ ಮೇಲೆ ಹಲ್ಲೆ: ನಾಲ್ವರ ಬಂಧನ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕುರಿತಾದ ಕಾರ್ಟೂನ್ ಒಂದನ್ನು ವಾಟ್ಸಾಪ್‌ನಲ್ಲಿ ಫಾರ್ವರ್ಡ್ ಮಾಡಿದ್ದಕ್ಕಾಗಿ ನೌಕಾ ಪಡೆಯ ನಿವೃತ್ತ ಅಧಿಕಾರಿ ಮೇಲೆ ಶಿವಸೇನಾದ ಕಾರ್ಯಕರ್ತರು ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಮುಂಬೈನಲ್ಲಿ ನಡೆದಿದೆ.

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕುರಿತಾದ ಕಾರ್ಟೂನ್ ಒಂದನ್ನು ವಾಟ್ಸಾಪ್‌ನಲ್ಲಿ ಫಾರ್ವರ್ಡ್ ಮಾಡಿದ್ದಕ್ಕಾಗಿ ನೌಕಾ ಪಡೆಯ ನಿವೃತ್ತ ಅಧಿಕಾರಿ ಮೇಲೆ ಶಿವಸೇನಾದ ಕಾರ್ಯಕರ್ತರು ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಮುಂಬೈನಲ್ಲಿ ನಡೆದಿದೆ.

ಪೂರ್ವ ಕೊಂಡಿವಳಿ ಪ್ರದೇಶದಲ್ಲಿ ನಡೆದ ಈ ಘಟನೆ ಸಂಬಂಧ ಶಿವ ಸೇನೆಯ  ನಾಲ್ವರು ಕಾರ್ಯಕರ್ತನನ್ನು ಬಂಧಿಸಲಾಗಿದೆ. ಉದ್ಧವ್ ಠಾಕ್ರೆ ಅವರನ್ನು ಅಣಕಿಸುವಂತಹ ಕಾರ್ಟೂನ್ ಒಂದನ್ನು ಹಂಚಿಕೊಂಡಿದ್ದಕ್ಕಾಗಿ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ನೌಕಾಪಡೆಯ ನಿವೃತ್ತ ಅಧಿಕಾರಿ ಮದನ್ ಶರ್ಮಾ ಸಮ್ತಾ ನಗರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ತಮಗೆ ಬಂದಿದ್ದ ವಾಟ್ಸಾಪ್ ಸಂದೇಶದಲ್ಲಿದ್ದ ಕಾರ್ಟೂನ್ ಒಂದನ್ನು 62 ವರ್ಷದ ಮದನ್ ಶರ್ಮಾ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಹಂಚಿಕೊಂಡಿದ್ದರು,  ತಮ್ಮ ನಿವಾಸದಿಂದ ಹೊರಗೆ ಬರುತ್ತಿದ್ದಂತೆಯೇ ಶಿವಸೇನೆ ಕಾರ್ಯಕರ್ತರು ಅವರನ್ನು ಅಟ್ಟಾಡಿಸಿ ಹೊಡೆದಿದ್ದಾರೆ. ಮದನ್ ಶರ್ಮಾ ಅವರ ಕೊರಳಪಟ್ಟಿ ಹಿಡಿದೆಳೆದು ಮುಖದ ಮೇಲೆ ಬಾರಿಸುವ ದೃಶ್ಯಗಳು ಸಿಸಿಟಿವಿ ವಿಡಿಯೋದಲ್ಲಿ ದಾಖಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT