ಎಎಸ್ ಪಿ ಅರುಣ್ ಕುಮಾರ್ 
ದೇಶ

ಕುಟುಂಬದ ವಿರೋಧದ ನಡುವೆ ಮದುವೆ: ಪುತ್ರಿ,ಅಳಿಯನ ಮೇಲೆ ಗುಂಡು ಹಾರಿಸಿದ ಪಾಪಿ ತಂದೆ 

ಕುಟುಂಬದ ವಿರೋಧದ ನಡುವೆ ಮದುವೆಯಾದ ದಂಪತಿ ಮೇಲೆ ಹುಡುಗಿಯ ತಂದೆಯೇ ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶ ರಾಜ್ಯದ ರಾಂಪುರ ಜಿಲ್ಲೆಯ ಸೈದಾನಗರದಲ್ಲಿ ನಡೆದಿದೆ. ಆದರೆ, ಅವರಿಬ್ಬರೂ ಗಾಯಗಳಿಂದಾಗಿ ಬದುಕಿಳಿದಿದ್ದಾರೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.

ರಾಂಪುರ: ಕುಟುಂಬದ ವಿರೋಧದ ನಡುವೆ ಮದುವೆಯಾದ ದಂಪತಿ ಮೇಲೆ ಹುಡುಗಿಯ ತಂದೆಯೇ ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶ ರಾಜ್ಯದ ರಾಂಪುರ ಜಿಲ್ಲೆಯ ಸೈದಾನಗರದಲ್ಲಿ ನಡೆದಿದೆ. ಆದರೆ, ಅವರಿಬ್ಬರೂ ಗಾಯಗಳಿಂದಾಗಿ ಬದುಕಿಳಿದಿದ್ದಾರೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಬಗ್ಗೆ ಮಾಹಿತಿ ನೀಡಿದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್, ಪ್ರಶಾಂತ್ ಕುಮಾರ್ ಎಂಬವರು ಉತ್ತರ ಖಂಡ್ ರಾಜ್ಯದ ಕಾಶಿಪುರ್ ನ ಮಹಿಳೆಯನ್ನು ಈ ತಿಂಗಳ ಆರಂಭದಲ್ಲಿ ವಿವಾಹವಾಗಿದ್ದಾರೆ.ಪ್ರಾಥಮಿಕ ಮಾಹಿತಿ ಪ್ರಕಾರ, ಹುಡುಗಿಯ ತಂದೆ ದಂಪತಿ ಮೇಲೆ ಗುಂಡು ಹಾರಿಸಿದ್ದಾರೆ.

ಜಿಲ್ಲಾ ಆಸ್ಪತ್ರೆಯಿಂದ ಉನ್ನತ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ಯುವಂತೆ ವೈದ್ಯರು ಶಿಫಾರಸು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.ಈ ಪ್ರಕರಣ ಸಂಬಂಧ ಎಫ್ ಐಆರ್ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ವಿಚಾರಣೆ ನಡೆಸುತ್ತಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.

ತಮ್ಮ ತಂದೆಯೇ ಗುಂಡು ಹಾರಿಸಿದ್ದಾಗಿ ಸಂತ್ರಸ್ಥೆ ಕಾಮಿನಿ ಗೌತಮ್  ಹೇಳಿಕೆಯಲ್ಲಿ ತಿಳಿಸಿದ್ದಾರೆ.ಹುಡುಗಿಯ ಕುಟುಂಬದವರ ಒಪ್ಪಿಗೆ ಇಲ್ಲದೆ ಮದುವೆಯಾಗಿದ್ದಾಗಿ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT