ಉಮರ್ ಖಾಲಿದ್ 
ದೇಶ

ದೆಹಲಿ ಗಲಭೆ ಪ್ರಕರಣ: ಜೆಎನ್ ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನ 

ದೆಹಲಿ ಗಲಭೆ ಪ್ರಕರಣದಲ್ಲಿ ಜೆಎನ್ ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನಕ್ಕೊಳಗಾಗಿದ್ದಾರೆ. 

ನವದೆಹಲಿ: ದೆಹಲಿಯಲ್ಲಿ ನಡೆದ ಸಿಎಎ ವಿರೋಧಿ ಗಲಭೆ ಪ್ರಕರಣದಲ್ಲಿ ಜೆಎನ್ ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನಕ್ಕೊಳಗಾಗಿದ್ದಾರೆ. 

ಭಾನುವಾರ ತಡ ರಾತ್ರಿ ಬಂಧನ ಮಾಡಲಾಗಿದೆ. ದೆಹಲಿ ಪೊಲೀಸ್ ಅಪರಾಧ ವಿಭಾಗದ ಅಧಿಕಾರಿಗಳು ಉಮರ್ ಖಾಲಿದ್ ನ್ನು ಕೆಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು. 

ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಲ್ಲಿಸಿದ್ದ ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ಉಮರ್ ಖಾಲೀದ್, ಸಿಪಿಐ(ಎಂ) ನಾಯಕ ಸೀತಾರಾಮ್ ಯೆಚೂರಿ ಸ್ವರಾಜ್ ಅಭಿಯಾನ್ ನಾಯಕ ಯೋಗೇಂದ್ರ ಯಾದವ್, ಅರ್ಥಶಾಸ್ತ್ರಜ್ಞರಾದ ಜಯತಿ ಘೋಷ್, ದೆಹಲಿ ವಿವಿ ಪ್ರಾಧ್ಯಾಪಕ, ಕಾರ್ಯಕರ್ತ ಅಪೂರ್ವಾನಂದ್ ಹಾಗೂ ಡಾಕ್ಯುಮೆಂಟರಿ ಫಿಲ್ಮ್ ಮೇಕರ್ ರಾಹುಲ್ ರಾಯ್ ಅವರುಗಳನ್ನು ಸಹ ಪಿತೂರಿದಾರರು ಎಂದು ಆರೋಪಿಸಿದ್ದರು. ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆ ಹಾಗೂ ಯುಎಪಿಎ ನ ಪ್ರಕಾರ ಖಾಲೀದ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT