ಉಮರ್ ಖಾಲಿದ್ 
ದೇಶ

ದೆಹಲಿ ಗಲಭೆ ಪ್ರಕರಣ: ಜೆಎನ್ ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನ 

ದೆಹಲಿ ಗಲಭೆ ಪ್ರಕರಣದಲ್ಲಿ ಜೆಎನ್ ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನಕ್ಕೊಳಗಾಗಿದ್ದಾರೆ. 

ನವದೆಹಲಿ: ದೆಹಲಿಯಲ್ಲಿ ನಡೆದ ಸಿಎಎ ವಿರೋಧಿ ಗಲಭೆ ಪ್ರಕರಣದಲ್ಲಿ ಜೆಎನ್ ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನಕ್ಕೊಳಗಾಗಿದ್ದಾರೆ. 

ಭಾನುವಾರ ತಡ ರಾತ್ರಿ ಬಂಧನ ಮಾಡಲಾಗಿದೆ. ದೆಹಲಿ ಪೊಲೀಸ್ ಅಪರಾಧ ವಿಭಾಗದ ಅಧಿಕಾರಿಗಳು ಉಮರ್ ಖಾಲಿದ್ ನ್ನು ಕೆಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು. 

ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಲ್ಲಿಸಿದ್ದ ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ಉಮರ್ ಖಾಲೀದ್, ಸಿಪಿಐ(ಎಂ) ನಾಯಕ ಸೀತಾರಾಮ್ ಯೆಚೂರಿ ಸ್ವರಾಜ್ ಅಭಿಯಾನ್ ನಾಯಕ ಯೋಗೇಂದ್ರ ಯಾದವ್, ಅರ್ಥಶಾಸ್ತ್ರಜ್ಞರಾದ ಜಯತಿ ಘೋಷ್, ದೆಹಲಿ ವಿವಿ ಪ್ರಾಧ್ಯಾಪಕ, ಕಾರ್ಯಕರ್ತ ಅಪೂರ್ವಾನಂದ್ ಹಾಗೂ ಡಾಕ್ಯುಮೆಂಟರಿ ಫಿಲ್ಮ್ ಮೇಕರ್ ರಾಹುಲ್ ರಾಯ್ ಅವರುಗಳನ್ನು ಸಹ ಪಿತೂರಿದಾರರು ಎಂದು ಆರೋಪಿಸಿದ್ದರು. ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆ ಹಾಗೂ ಯುಎಪಿಎ ನ ಪ್ರಕಾರ ಖಾಲೀದ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT