ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ 
ದೇಶ

ಕೋವಿಡ್-19 ಲಸಿಕೆ ತುರ್ತು ಬಳಕೆ ದೃಢೀಕರಣಕ್ಕೆ ಕೇಂದ್ರದ ಚಿಂತನೆ: ಆರೋಗ್ಯ ಸಚಿವ ಹರ್ಷವರ್ಧನ್ 

ಕೋವಿಡ್-19 ಲಸಿಕೆಯ ತುರ್ತು ಬಳಕೆಗೆ ದೃಢೀಕರಣ, ಅಧಿಕಾರ ನೀಡುವುದಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ. 

ನವದೆಹಲಿ: ಕೋವಿಡ್-19 ಲಸಿಕೆಯ ತುರ್ತು ಬಳಕೆಗೆ ದೃಢೀಕರಣ, ಅಧಿಕಾರ ನೀಡುವುದಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ. 

ಸೆ.13 ರಂದು ಸಂಡೇ ಸಂವಾದ್ ಕಾರ್ಯಕ್ರಮದ ಮೂಲಕ ಸಾಮಾಜಿಕ ಜಾಲತಾಣದ ಅನುಯಾಯಿಗಳೊಂದಿಗೆ ಸಂವಾದ ನಡೆಸಿದ ವೇಳೆಯಲ್ಲಿ ಹರ್ಷವರ್ಧನ್ ಈ ಘೋಷಣೆ ಮಾಡಿದ್ದಾರೆ. 

ಕೋವಿಡ್-19 ಗೆ ಸಂಬಂಧಪಟ್ಟಂತೆ ಅತಿ ಹೆಚ್ಚು ಅಪಾಯಕಾರಿ ಸನ್ನಿವೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಹಾಗೂ ಹಿರಿಯ ನಾಗರಿಕರಿಗೆ ಮಾತ್ರ ಅನ್ವಯವಾಗುವಂತೆ ಕೋವಿಡ್-19 ಲಸಿಕೆಯ ತುರ್ತು ಬಳಕೆಗೆ ದೃಢೀಕರಣ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ. 

ಸರ್ಕಾರದ ಈ ಘೋಷಣೆ ಕೋವಿಡ್-19 ಲಸಿಕೆಗಳ ಕ್ಲಿನಿಕಲ್ ಟ್ರಯಲ್ ಗಳು 3 ನೇ ಹಂತ ಮುಕ್ತಾಯಗೊಳ್ಳುವುದಕ್ಕೂ ಮುನ್ನ, ಅವುಗಳ ಫಲಿತಾಂಶವನ್ನು ವಿಶ್ಲೇಷಿಸುವುದಕ್ಕೂ ಮುನ್ನ ನಿರ್ದಿಷ್ಟ ವಿಭಾಗದ ಜನರಿಗೆ ಮಾತ್ರವೇ ನೀಡಲಾಗುವ ಸಾಧ್ಯತೆಗಳಿವೆ ಎಂಬ ಸೂಚನೆಯನ್ನು ನೀಡಿದೆ. 

ಅಮೆರಿಕಾದಲ್ಲಿ ಡೊನಾಲ್ಡ್ ಟ್ರಂಪ್ ಆಡಳಿತ ಈಗಾಗಲೇ ಇದೇ ಮಾದರಿಯ ಕ್ರಮವನ್ನು ಕೈಗೊಂಡಿದೆ. ಈ ಬೆನ್ನಲ್ಲೇ ಭಾರತವೂ ಸಹ ಅಮೆರಿಕ ಮಾದರಿಯನ್ನು ಅನುಸರಿಸಲು ಮುಂದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಸಮಗ್ರ ಚರ್ಚೆ ಹಾಗೂ ಒಮ್ಮತಕ್ಕೆ ಬಂದ ನಂತರವಷ್ಟೇ ಕೋವಿಡ್-19 ಲಸಿಕೆ ತುರ್ತು ಬಳಕೆ ದೃಢೀಕರಣದ ಅಧಿಕೃತ ಆದೇಶ ನೀಡಲಾಗುತ್ತದೆ. ಇದನ್ನು ಔಷಧ ನಿಯಂತ್ರಕವಷ್ಟೇ ಮಾದಲು ಸಾಧ್ಯ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT