ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ 
ದೇಶ

ಕೋವಿಡ್-19 ಲಸಿಕೆ ತುರ್ತು ಬಳಕೆ ದೃಢೀಕರಣಕ್ಕೆ ಕೇಂದ್ರದ ಚಿಂತನೆ: ಆರೋಗ್ಯ ಸಚಿವ ಹರ್ಷವರ್ಧನ್ 

ಕೋವಿಡ್-19 ಲಸಿಕೆಯ ತುರ್ತು ಬಳಕೆಗೆ ದೃಢೀಕರಣ, ಅಧಿಕಾರ ನೀಡುವುದಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ. 

ನವದೆಹಲಿ: ಕೋವಿಡ್-19 ಲಸಿಕೆಯ ತುರ್ತು ಬಳಕೆಗೆ ದೃಢೀಕರಣ, ಅಧಿಕಾರ ನೀಡುವುದಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ. 

ಸೆ.13 ರಂದು ಸಂಡೇ ಸಂವಾದ್ ಕಾರ್ಯಕ್ರಮದ ಮೂಲಕ ಸಾಮಾಜಿಕ ಜಾಲತಾಣದ ಅನುಯಾಯಿಗಳೊಂದಿಗೆ ಸಂವಾದ ನಡೆಸಿದ ವೇಳೆಯಲ್ಲಿ ಹರ್ಷವರ್ಧನ್ ಈ ಘೋಷಣೆ ಮಾಡಿದ್ದಾರೆ. 

ಕೋವಿಡ್-19 ಗೆ ಸಂಬಂಧಪಟ್ಟಂತೆ ಅತಿ ಹೆಚ್ಚು ಅಪಾಯಕಾರಿ ಸನ್ನಿವೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಹಾಗೂ ಹಿರಿಯ ನಾಗರಿಕರಿಗೆ ಮಾತ್ರ ಅನ್ವಯವಾಗುವಂತೆ ಕೋವಿಡ್-19 ಲಸಿಕೆಯ ತುರ್ತು ಬಳಕೆಗೆ ದೃಢೀಕರಣ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ. 

ಸರ್ಕಾರದ ಈ ಘೋಷಣೆ ಕೋವಿಡ್-19 ಲಸಿಕೆಗಳ ಕ್ಲಿನಿಕಲ್ ಟ್ರಯಲ್ ಗಳು 3 ನೇ ಹಂತ ಮುಕ್ತಾಯಗೊಳ್ಳುವುದಕ್ಕೂ ಮುನ್ನ, ಅವುಗಳ ಫಲಿತಾಂಶವನ್ನು ವಿಶ್ಲೇಷಿಸುವುದಕ್ಕೂ ಮುನ್ನ ನಿರ್ದಿಷ್ಟ ವಿಭಾಗದ ಜನರಿಗೆ ಮಾತ್ರವೇ ನೀಡಲಾಗುವ ಸಾಧ್ಯತೆಗಳಿವೆ ಎಂಬ ಸೂಚನೆಯನ್ನು ನೀಡಿದೆ. 

ಅಮೆರಿಕಾದಲ್ಲಿ ಡೊನಾಲ್ಡ್ ಟ್ರಂಪ್ ಆಡಳಿತ ಈಗಾಗಲೇ ಇದೇ ಮಾದರಿಯ ಕ್ರಮವನ್ನು ಕೈಗೊಂಡಿದೆ. ಈ ಬೆನ್ನಲ್ಲೇ ಭಾರತವೂ ಸಹ ಅಮೆರಿಕ ಮಾದರಿಯನ್ನು ಅನುಸರಿಸಲು ಮುಂದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಸಮಗ್ರ ಚರ್ಚೆ ಹಾಗೂ ಒಮ್ಮತಕ್ಕೆ ಬಂದ ನಂತರವಷ್ಟೇ ಕೋವಿಡ್-19 ಲಸಿಕೆ ತುರ್ತು ಬಳಕೆ ದೃಢೀಕರಣದ ಅಧಿಕೃತ ಆದೇಶ ನೀಡಲಾಗುತ್ತದೆ. ಇದನ್ನು ಔಷಧ ನಿಯಂತ್ರಕವಷ್ಟೇ ಮಾದಲು ಸಾಧ್ಯ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT