ಶರದ್ ಪವಾರ್-ಉದ್ಧವ್ ಠಾಕ್ರೆ 
ದೇಶ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಶರದ್ ಪವಾರ್ ಮತ್ತಿತರರಿಗೆ ಬೆದರಿಕೆ ಕರೆ: ಕೊಲ್ಕತ್ತಾ ವ್ಯಕ್ತಿ ಬಂಧನ

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಎನ್.ಸಿ.ಪಿ ವರಿಷ್ಠ ಶರದ್ ಪವಾರ್, ಗೃಹ ಸಚಿವ ಅನಿಲ್ ದೇಶ್ ಮುಖ್ ಮತ್ತು ಶಿವಸೇನಾ ವಕ್ತಾರ ಸಂಜಯ್ ರಾವತ್ ಅವರಿಗೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳದ ಜಿಮ್ ತರಬೇತುದಾರನನ್ನು ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಎನ್.ಸಿ.ಪಿ ವರಿಷ್ಠ ಶರದ್ ಪವಾರ್, ಗೃಹ ಸಚಿವ ಅನಿಲ್ ದೇಶ್ ಮುಖ್ ಮತ್ತು ಶಿವಸೇನಾ ವಕ್ತಾರ ಸಂಜಯ್ ರಾವತ್ ಅವರಿಗೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳದ ಜಿಮ್ ತರಬೇತುದಾರನನ್ನು ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ ಪೊಲೀಸರು ಕೊಲ್ಕತ್ತಾ ಪೊಲೀಸರ ಜತೆಗೂಡಿ ನಡೆಸಿದ ಕಾರ್ಯಾಚರಣೆಯಲ್ಲಿ ಕೊಲ್ಕತ್ತಾದ ಪಲಾಶ್ ಬೋಸ್ ಎಂಬುವರನ್ನು ಬಂಧಿಸಿದೆ. ಈತ ಭೂಗದ ಪಾತಕಿ ದಾವೋದ್ ಇಬ್ರಾಹಿಂ ಸಿಂಡಿಕೇಟ್ ಗೆ ಸೇರಿದವನೆಂದು ಹೇಳಲಾಗಿದೆ.
 
ಎಟಿಎಸ್ ನ ಇನ್ಸ್ ಪೆಕ್ಟರ್, ಎನ್ ಕೌಂಟರ್ ಸ್ಪೆಷಲಿಸ್ಟ್, ಕನ್ನಡಿಗ ದಯಾನಾಯಕ್ ನೇತೃತ್ವದ ಪೊಲೀಸ್ ತಂಡ ಪಲಾಶ್ ಬೋಸ್ ಎಂಬುರನ್ನು ಬಂಧಿಸಿದ್ದು, ಇದಕ್ಕೆ ಕೊಲ್ಕತ್ತಾ ಪೊಲೀಸರ ಸಹಕಾರ ಪಡೆದಿದೆ. 

ಬಂಧಿತನಿಂದ ಎರಡು ಮೊಬೈಲ್ ವಶಪಡಿಸಿಕೊಂಡಿದ್ದು, ಒಂದು ಸ್ಥಳೀಯ ಸಿಮ್ ಹೊಂದಿದ್ದು, ಮತ್ತೊಂದು ಅಂತಾರಾಷ್ಟ್ರೀಯ ಸಿಮ್ ಒಳಗೊಂಡಿದೆ. ಬಂಧಿತ ತಾನು ಬೆದರಿಕೆ ಕರೆ ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ. ಈತ ದುಬೈನಲ್ಲಿ 15 ವರ್ಷಗಳ ಕಾಲ ಕೆಲಸ ಮಾಡಿದ್ದು, ವಿಜ್ಞಾನ ಪದವೀಧರನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT