ಸುರಂಗಗಳ ಮೂಲಕ ಭಾರತಕ್ಕೆ ಭಯೋತ್ಪಾದಕರು ಶಸ್ತ್ರಾಸ್ತ್ರಗಳನ್ನು ನುಗ್ಗಿಸುತ್ತಿದೆ ಪಾಕಿಸ್ತಾನ! 
ದೇಶ

ಸುರಂಗಗಳ ಮೂಲಕ ಭಾರತಕ್ಕೆ ಭಯೋತ್ಪಾದಕರು ಶಸ್ತ್ರಾಸ್ತ್ರಗಳನ್ನು ನುಗ್ಗಿಸುತ್ತಿದೆ ಪಾಕಿಸ್ತಾನ! 

ಸುರಂಗಗಳ ಮೂಲಕ ಪಾಕಿಸ್ತಾನ ಭಾರತಕ್ಕೆ ಭಯೋತ್ಪಾದಕರನ್ನು ನುಗ್ಗಿಸುತ್ತಿರುವ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. 

ಶ್ರೀನಗರ: ಸುರಂಗಗಳ ಮೂಲಕ ಪಾಕಿಸ್ತಾನ ಭಾರತಕ್ಕೆ ಭಯೋತ್ಪಾದಕರನ್ನು ನುಗ್ಗಿಸುತ್ತಿರುವ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. 

ಗಡಿ ಭಾಗದಲ್ಲಿ ಸುರಂಗ ಕೊರೆದು, ಅಲ್ಲಿಂದ ಭಯೋತ್ಪಾದಕರನ್ನು ಒಳಕ್ಕೆ ನುಗ್ಗಿಸಿ ಡ್ರೋಣ್ ಗಳ ಮೂಲಕ ಅವರಿಗೆ ಶಸ್ತ್ರಾಸ್ತ್ರ ಪೂರೈಕೆ ಮಾಡಲಾಗುತ್ತಿದೆ ಎಂದು ಜಮ್ಮು-ಕಾಶ್ಮೀರದ ಡಿಜಿಪಿ ದಿಲ್ಬಾಗ್ ಸಿಂಗ್ ಹೇಳಿದ್ದಾರೆ. ಆದಾಗ್ಯೂ ನುಸುಳುವಿಕೆಯನ್ನು ತಡೆಗಟ್ಟುವ ಗ್ರಿಡ್ ಸಕ್ರಿಯವಾಗಿದ್ದು, ಪಾಕಿಸ್ತಾನದ ದುಷ್ಕೃತ್ಯವನ್ನು ತಡೆಗಟ್ಟಲು ಅಗತ್ಯವಿರುವ ಸುರಂಗ ಕೊರೆಯುವುದನ್ನು ತಡೆಯುವ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ಅಂತಾರಾಷ್ಟ್ರೀಯ ಗಡಿಯ ಕೆಳಗೆ ಸುರಂಗ ಕೊರೆಯುವುದು ಭಯೋತ್ಪಾದಕರನ್ನು ಒಳಗೆ ನುಗ್ಗಿಸಲು ಪಾಕಿಸ್ತಾನದ ದುಷ್ಕೃತ್ಯದ ಯೋಜನೆಯಾಗಿದೆ, ಇತ್ತೀಚೆಗಷ್ಟೇ 170 ಮೀಟರ್ ಟನ್ ನ್ನು ಗಲರ್ ಗ್ರಾಮದಲ್ಲಿ ಅಂತಾರಾಷ್ಟ್ರೀಯ ಗಡಿಯಾದ್ಯಂತ ಕಂಡುಬಂದಿದೆ. 20-25 ಅಡಿ ಆಳದ ಸುರಂಗ ಪಾಕಿಸ್ತಾನದಿಂದ ಬಂದಿರುವುದು ಕಂಡುಬಂದಿದೆ. 

2013-14 ರಲ್ಲಿ ಚನ್ಯಾರಿಯಲ್ಲಿ ಇದೇ ಮಾದರಿಯ ಟನಲ್ ಕಂಡುಬಂದಿತ್ತು. ಈಗ ನಾಗ್ರೋಟಾ ಎನ್ ಕೌಂಟರ್ ನಂತರ ನಿರ್ದಿಷ್ಟ ಒಳನುಸುಳುವಿಕೆ ಟನಲ್ ಮೂಲಕ ನಡೆದಿದೆ ಎಂದು ತಿಳಿದುಬಂದಿದೆ. ಉಳಿದ ಟನಲ್ ಗಳಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಡಿಜಿಪಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT