ಪ್ರಧಾನಿ ಮೋದಿ 
ದೇಶ

ಪ್ರಧಾನಿಯಿಂದ ಎಲ್‌ಪಿಜಿ ಪೈಪ್‌ಲೈನ್ ಉದ್ಘಾಟನೆ: ಬಿಹಾರ, ಪೂರ್ವ ಭಾರತದ ಅಭಿವೃದ್ಧಿಗೆ ಬದ್ಧವಿರುವುದಾಗಿ ಪುನರುಚ್ಛಾರ

ದುರ್ಗಾಪುರ-ಬಂಕಾ ವಿಭಾಗದ ಎಲ್ ಪಿಜಿ ಪೈಪ್ ಲೈನ್ ಅನ್ನು ಭಾನುವಾರ ಉದ್ಘಾಟಿಸಿರುವ ಪ್ರಧಾನಿ ನರೇಂದ್ರ ಮೋದಿ, ಪೂರ್ವ ಭಾರತ ಮತ್ತು ಬರುವ ಅಕ್ಟೋಬರ್-ನವೆಂಬರ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಬಿಹಾರದ ಅಭಿವೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. 

ಪಾಟ್ನಾ: ದುರ್ಗಾಪುರ-ಬಂಕಾ ವಿಭಾಗದ ಎಲ್ ಪಿಜಿ ಪೈಪ್ ಲೈನ್ ಅನ್ನು ಭಾನುವಾರ ಉದ್ಘಾಟಿಸಿರುವ ಪ್ರಧಾನಿ ನರೇಂದ್ರ ಮೋದಿ, ಪೂರ್ವ ಭಾರತ ಮತ್ತು ಬರುವ ಅಕ್ಟೋಬರ್-ನವೆಂಬರ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಬಿಹಾರದ ಅಭಿವೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. 

ಎಲ್ ಪಿ ಜಿ ಪೈಪ್ ಲೈನ್ ,  ಬಂಕಾ ಹಾಗೂ ಪೂರ್ವ ಚಂಪಾರಣ್ ನಲ್ಲಿ ಎರಡು ಎಲ್ ಪಿಜಿ ಬಾಟ್ಲಿಂಗ್ ಸ್ಥಾವರಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರಧಾನಿ, ಬಿಹಾರ ಮತ್ತು ಪೂರ್ವ ಭಾರತದ ಅಭಿವೃದ್ಧಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.  

ಬಿಹಾರ ಮತ್ತು ಪೂರ್ವ ಭಾಗದ ಪ್ರದೇಶಗಳು ಅಭಿವೃದ್ಧಿ ಹೊಂದದ ಹೊರತು ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲು ಸಾಧ್ಯವಿಲ್ಲ ಎಂದು ತಾವು ಬಹಳ ಹಿಂದಿನಿಂದಲೂ ಹೇಳುತ್ತಾ ಬಂದಿರುವುದಾಗಿ ಅವರು ಹೇಳಿದ್ದಾರೆ. 

ಕೊರೊನವೈರಸ್ ಸಾಂಕ್ರಾಮಿಕ ರೋಗದ ಸಮಯದಲ್ಲಿ ಅನೇಕ ತೊಂದರೆಗಳು ಎದುರಾದರೂ ನಿಗದಿತ ಸಮಯದಲ್ಲಿ ಇಂದು ಉದ್ಘಾಟಿಸಿದ ಎಲ್ ಪಿಜಿ ಯೋಜನೆಗಳು ಪೂರ್ಣಗೊಂಡಿವೆ. ಕೋಟ್ಯಂತರ ರೂ ವೆಚ್ಚದ ಈ ಯೋಜನೆಗಳು ಅಭಿವೃದ್ಧಿಯ ವೇಗವನ್ನು ಹೆಚ್ಚಿಸಲು ಖಂಡಿತವಾಗಿಯೂ ನೆರವಾಗುತ್ತವೆ. ಎಲ್ ಪಿಜಿ ಯೋಜನೆಗಗಳು ಪೂರ್ಣಗೊಂಡ ನಂತರ ಬಿಹಾರ ಅಭಿವೃದ್ಧಿಯಾಗಲಿದ್ದು ಮತ್ತು ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ ಎಂದು ಮೋದಿ ಹೇಳಿದ್ದಾರೆ.

ಎಲ್ ಪಿಜಿ ಯೋಜನೆಗಳು ಪೂರ್ಣಗೊಂಡ ನಂತರ ಬಿಹಾರದಲ್ಲಿ ಅನಿಲ ಆಧಾರಿತ ಆರ್ಥಿಕತೆ ವೃದ್ಧಿಸಲಿದೆ. ಕರೋನಾ ಸಾಂಕ್ರಾಮಿಕ ಸಮಯದಲ್ಲೂ  ಬಿಹಾರದಲ್ಲಿ ಅಭಿವೃದ್ಧಿಯ ವೇಗ ಅಡೆತಡೆಯಿಲ್ಲದೆ ಮುಂದುವರಿದಿದೆ. ಸಂಕಷ್ಟದ ಈ ಹಂತದಲ್ಲಿ ರಾಜ್ಯದ ಜನರು ದುಡಿದಿರುವುದು ಇದು ನಿಜಕ್ಕೂ ಶ್ಲಾಘನೀಯ ಎಂದು ಪ್ರಧಾನಿ ಹೇಳಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT