ತಮಿಳಿನ ನಟ ಸೂರ್ಯ 
ದೇಶ

'ನೀಟ್ ಹೇಳಿಕೆ': ನಟ ಸೂರ್ಯ ವಿರುದ್ಧ ನ್ಯಾಯಾಂಗ ನಿಂದನೆ ತನಿಖೆ ನಡೆಸಲು ಮದ್ರಾಸ್ ಹೈಕೋರ್ಟ್ ಜಡ್ಜ್ ಒತ್ತಾಯ

ಕೋವಿಡ್-19 ಸಾಂಕ್ರಾಮಿಕದ ಮಧ್ಯೆ ನೀಟ್ ಪರೀಕ್ಷೆ ನಡೆಸುವ ವಿಚಾರದಲ್ಲಿ ನ್ಯಾಯಾಲಯದ ಆದೇಶದ ಬಗ್ಗೆ ನೀಡಿದ್ದ ಹೇಳಿಕೆ ಸಂಬಂಧ ತಮಿಳಿನ ಖ್ಯಾತ ನಟ ಸೂರ್ಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕೆಂದು ಮದ್ರಾಸ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅಮ್ರೇಶ್ವರ್ ಪ್ರತಾಪ್ ಸಹಿ ಅವರಿಗೆ ನ್ಯಾಯಾಧೀಶರಾದ ಎಸ್ ಎಂ ಸುಬ್ರಹ್ಮಣ್ಯಂ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಚೆನ್ನೈ: ಕೋವಿಡ್-19 ಸಾಂಕ್ರಾಮಿಕದ ಮಧ್ಯೆ ನೀಟ್ ಪರೀಕ್ಷೆ ನಡೆಸುವ ವಿಚಾರದಲ್ಲಿ ನ್ಯಾಯಾಲಯದ ಆದೇಶದ ಬಗ್ಗೆ ನೀಡಿದ್ದ ಹೇಳಿಕೆ ಸಂಬಂಧ ತಮಿಳಿನ ಖ್ಯಾತ ನಟ ಸೂರ್ಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕೆಂದು ಮದ್ರಾಸ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅಮ್ರೇಶ್ವರ್ ಪ್ರತಾಪ್ ಸಹಿ ಅವರಿಗೆ ನ್ಯಾಯಾಧೀಶರಾದ ಎಸ್ ಎಂ ಸುಬ್ರಹ್ಮಣ್ಯಂ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ನಿನ್ನೆ ನಟ ಸೂರ್ಯ ಹೇಳಿಕೆಯೊಂದನ್ನು ನೀಡಿ, ತಮಿಳು ನಾಡಿನಲ್ಲಿ ಮೂವರು ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡ ಕುಟುಂಬಗಳ ವಿದ್ಯಾರ್ಥಿಗಳ ಕನಸುಗಳನ್ನು ಕಿತ್ತು ಹಾಕುತ್ತಿರುವ ನೀಟ್ ಪರೀಕ್ಷೆಯನ್ನು ಶಾಶ್ವತವಾಗಿ ರದ್ದುಗೊಳಿಸಿ ಎಂದು ಸರ್ಕಾರವನ್ನು ಒತ್ತಾಯಪಡಿಸಿದ್ದರು. ನೀಟ್ ಪರೀಕ್ಷೆಯನ್ನು ತೆಗೆದುಹಾಕುವ ಸಂಬಂಧ ಇದಕ್ಕೆ ಸಂಬಂಧಪಟ್ಟವರೆಲ್ಲರೂ ಧ್ವನಿಯೆತ್ತಬೇಕು ಎಂದು ನಟ ಒತ್ತಾಯಿಸಿದ್ದರು.

ಈ ಹೇಳಿಕೆ ವೇಳೆ ನಟ ಸೂರ್ಯ, ನ್ಯಾಯಾಲಯದ ಕಾರ್ಯವೈಖರಿ ಬಗ್ಗೆ ಕೂಡ ಮಾತನಾಡಿದ್ದು, ಕೋವಿಡ್-19 ಸಾಂಕ್ರಾಮಿಕ ರೋಗದ ಭಯದಲ್ಲಿ ನ್ಯಾಯಾಲಯಗಳು ವರ್ಚುವಲ್ ವಿಚಾರಣೆ ಮೂಲಕ ನ್ಯಾಯ ವಿಲೇವಾರಿ ಮಾಡುತ್ತಿವೆ, ಆದರೆ ವಿದ್ಯಾರ್ಥಿಗಳಿಗೆ ಮಾತ್ರ ಯಾವುದೇ ಭಯವಿಲ್ಲದೆ ನೀಟ್ ಪರೀಕ್ಷೆಯನ್ನು ಪರೀಕ್ಷಾ ಕೇಂದ್ರಗಳಿಗೆ ಹೋಗಿ ಬರೆಯಿರಿ ಎಂದು ಹೇಳುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ನ್ಯಾಯಾಧೀಶ ಎಸ್ ಎಂ ಸುಬ್ರಹ್ಮಣ್ಯಮ್, ನಟ ಸೂರ್ಯ ಅವರ ಹೇಳಿಕೆಯನ್ನು ನೋಡಿದರೆ, ನ್ಯಾಯಾಧೀಶರು ತಮ್ಮ ಸ್ವಂತ ಜೀವದ ಭಯದಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯದಾನ ಮಾಡುತ್ತಾರೆ,ವಿದ್ಯಾರ್ಥಿಗಳಿಗೆ ಯಾವುದೇ ಭಯವಿಲ್ಲದೆ ನೀಟ್ ಪರೀಕ್ಷೆ ಬರೆಯಿರಿ ಎಂದು ಆದೇಶ ನೀಡುವ ಮೂಲಕ ಮಾನವೀಯತೆ, ನೈತಿಕತೆ ತೋರಿಸುತ್ತಿಲ್ಲ ಎಂಬ ಮನೋಭಾವ ಹೊಂದಿದ್ದಾರೆ ಎಂಬರ್ಥ ನೀಡುತ್ತದೆ. ಇದು ನನ್ನ ಅಭಿಪ್ರಾಯದಲ್ಲಿ ನ್ಯಾಯಾಂಗ ನಿಂದನೆಯಾಗಿದ್ದು, ಈ ದೇಶದ ನ್ಯಾಯಾಂಗ ವ್ಯವಸ್ಥೆ ಮತ್ತು ನ್ಯಾಯಾಧೀಶರ ಮೇಲೆ ನಂಬಿಕೆ, ಗೌರವ ನಟ ಸೂರ್ಯ ಅವರಿಗಿಲ್ಲ ಎಂಬುದನ್ನು ತೋರಿಸುತ್ತದೆ. ಇದರಿಂದ ಸಾರ್ವಜನಿಕರಿಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ, ವಿಶ್ವಾಸ, ಗೌರವ ಹೊರಟುಹೋಗುತ್ತದೆ ಎಂದು ನ್ಯಾಯಾಧೀಶ ಸುಬ್ರಹ್ಮಣ್ಯಂ ಆರೋಪಿಸಿದ್ದಾರೆ.

ಕೋವಿಡ್-19 ಹಿನ್ನೆಲೆಯಲ್ಲಿ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡುವಂತೆ ವಿದ್ಯಾರ್ಥಿಗಳ ಸಮೂಹ ಮಾಡಿಕೊಂಡಿದ್ದ ಮನವಿಯನ್ನು ಕಳೆದ ಆಗಸ್ಟ್ 17ರಂದು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?