ಸಂಸತ್ ಭವನ ಆವರಣದಲ್ಲಿ ಮಾತನಾಡಿದ ಪ್ರಧಾನಿ ಮೋದಿ 
ದೇಶ

ಗಡಿ ಕಾಯುತ್ತಿರುವ ಯೋಧರ ಬೆಂಬಲಕ್ಕೆ ದೇಶ ಇದೆ ಎಂದು ಎಲ್ಲಾ ಸಂಸದರು ಒಕ್ಕೊರಲಿನಿಂದ ಸಂದೇಶ ರವಾನಿಸುತ್ತಿದ್ದೇವೆ:ಪ್ರಧಾನಿ ಮೋದಿ 

ಸಂಸತ್ತಿನ ಮುಂಗಾರು ಅಧಿವೇಶನ ಕೊರೋನಾ ವೈರಸ್ ಭೀತಿ ಮಧ್ಯೆ ಸೋಮವಾರ ಆರಂಭವಾಗುತ್ತಿದೆ. ಇಂದು ಬೆಳಗ್ಗೆ ಸಂಸತ್ ಭವನಕ್ಕೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಕೊರೋನಾ ವೈರಸ್ ಭೀತಿ ಮಧ್ಯೆ ಸೋಮವಾರ ಆರಂಭವಾಗುತ್ತಿದೆ. ಇಂದು ಬೆಳಗ್ಗೆ ಸಂಸತ್ ಭವನಕ್ಕೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಈ ಸಂಕಷ್ಟ ಪರಿಸ್ಥಿತಿ ಮಧ್ಯೆ ಸಂಸತ್ತಿನ ಮುಂಗಾರು ಅಧಿವೇಶನ ಇಂದು ಆರಂಭವಾಗುತ್ತಿದೆ. ಕೊರೋನಾ ಮಧ್ಯೆಯೇ ನಾವು ನಮ್ಮ ಕರ್ತವ್ಯ ನಿರ್ವಹಿಸಬೇಕಿದೆ. ಸಂಸದರು ಕೊರೋನಾ ಮಧ್ಯೆ ಕರ್ತವ್ಯ ನಿರ್ವಹಣೆಯ ದಾರಿ ಹಿಡಿದಿದ್ದಾರೆ. ಅವರಿಗೆಲ್ಲರಿಗೂ ನಾನು ಅಭಿನಂದನೆ ಮತ್ತು ಕೃತಜ್ಞತೆ ಹೇಳುತ್ತೇನೆ. ಈ ಬಾರಿ ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ಒಂದೇ ದಿನ ಬೇರೆ ಬೇರೆ ಸಮಯಗಳಲ್ಲಿ ನಡೆಯುತ್ತಿದೆ. ಶನಿವಾರ ಮತ್ತು ಭಾನುವಾರಗಳಂದು ಸಹ ನಡೆಯುತ್ತಿದ್ದು ಎಲ್ಲಾ ಸಂಸದರು ಅದಕ್ಕೆ ಬದ್ಧರಾಗಿದ್ದಾರೆ ಎಂದರು.

ಹಲವು ವಿಷಯಗಳ ಬಗ್ಗೆ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಈ ಬಾರಿ ಚರ್ಚಿಸಲಾಗುತ್ತಿದೆ, ಉತ್ತಮವಾದ ವಿಷಯಗಳ ಬಗ್ಗೆ ಹೆಚ್ಚೆಚ್ಚು ಚರ್ಚೆ ನಡೆದರೆ ಹೊರಬರುವ ಫಲಿತಾಂಶ ಉತ್ತಮವಾಗಿರುತ್ತದೆ. ಕಲಾಪವನ್ನು ಸಂಸದರು ಸದ್ವಿನಿಯೋಗ ಮಾಡಿಕೊಳ್ಳಲಿ ಎಂದು ನಾನು ಕೇಳಿಕೊಳ್ಳುತ್ತೇನೆ ಎಂದರು.

ಎಲ್ಲಿಯವರೆಗೆ ಕೊರೋನಾಗೆ ಲಸಿಕೆ ಬರುವುದಿಲ್ಲವೋ ಅಲ್ಲಿಯವರೆಗೆ ನಿರ್ಲಕ್ಷ್ಯ ಸಲ್ಲದು. ಆದಷ್ಟು ಬೇಗನೆ ಜಗತ್ತಿನ ಯಾವ ಮೂಲೆಗಳಿಂದಲಾದರೂ ಲಸಿಕೆ ಕಂಡುಹಿಡಿದು ಅದು ಶೀಘ್ರವೇ ಮಾರುಕಟ್ಟೆಗೆ ಬಿಡುಗಡೆಯಾಗಲಿ ಎಂದು ನಾವು ಬಯಸುತ್ತಿದ್ದೇವೆ. ಈ ಮೂಲಕ ನಮ್ಮ ವಿಜ್ಞಾನಿಗಳು, ನಾವು ಜನರನ್ನು ಸಂಕಷ್ಟದಿಂದ ಆಚೆ ತರುವಲ್ಲಿ ಯಶಸ್ವಿಯಾಗಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಎಂದರು.

ದೇಶ ಸೈನಿಕರ ಬೆಂಬಲಕ್ಕಿದೆ: ಭಾರತ-ಚೀನಾ ಗಡಿಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ, ಸೇನೆ ನಿಯೋಜನೆ ಮಧ್ಯೆ ಮಾತನಾಡಿದ ಪ್ರಧಾನಿ, ಈ ಪರಿಸ್ಥಿತಿಯಲ್ಲಿ ನಾವು ನಿಸ್ಸಂದೇಹವಾಗಿ, ನಿಸ್ಸಂದಿಗ್ಧವಾಗಿ ನಮ್ಮ ಗಡಿಯನ್ನು ಕಾಯುತ್ತಿರುವ ಸೈನಿಕರ ಪರವಾಗಿ ಬೆಂಬಲಕ್ಕೆಇದ್ದೇವೆ.ಈ ಸಂದರ್ಭದಲ್ಲಿ ಎಲ್ಲಾ ಸಂಸದರು ಒಕ್ಕೊರಲಿನಲ್ಲಿ ನಾವು ನಿಮ್ಮೊಂದಿಗಿದ್ದೇವೆ ಎಂಬ ಸಂದೇಶವನ್ನು ಸೈನಿಕರಿಗೆ ರವಾನಿಸುತ್ತಿದ್ದೇವೆ ಎಂದು ಪ್ರಧಾನಿ ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT