ರಾಹುಲ್ ಗಾಂಧಿ 
ದೇಶ

'ಪ್ರಧಾನಿ ಮೋದಿ ನವಿಲುಗಳ ಜೊತೆ ಬ್ಯುಸಿಯಾಗಿದ್ದಾರೆ, ನಿಮ್ಮ ಜೀವನವನ್ನು ನೀವೇ ಕಾಪಾಡಿಕೊಳ್ಳಿ':ರಾಹುಲ್ ಗಾಂಧಿ 

ಕೋವಿಡ್-19 ನಿರ್ವಹಣೆ, ಆರ್ಥಿಕ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿರಂತರವಾಗಿ ಟೀಕಿಸುತ್ತಾ ಬಂದಿದ್ದಾರೆ.

ನವದೆಹಲಿ: ಕೋವಿಡ್-19 ನಿರ್ವಹಣೆ, ಆರ್ಥಿಕ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿರಂತರವಾಗಿ ಟೀಕಿಸುತ್ತಾ ಬಂದಿದ್ದಾರೆ.

ಮತ್ತೆ ಪ್ರಧಾನಿ ಮೋದಿಯವರ ವಿರುದ್ಧ ಟೀಕಾಪ್ರಹಾರ ಮುಂದುವರಿಸಿರುವ ರಾಹುಲ್ ಗಾಂಧಿ, ಮೋದಿಯವರು ನವಿಲುಗಳ ಜೊತೆ ಬ್ಯುಸಿಯಾಗಿದ್ದಾರೆ, ಹೀಗಾಗಿ ದೇಶದ ಜನರು ನಿಮ್ಮ ಜೀವನವನ್ನು ನೀವೇ ನೋಡಿಕೊಳ್ಳಬೇಕು, ನಿಮ್ಮ ಜಾಗ್ರತೆಯಲ್ಲಿ ನೀವಿರಿ ಎಂದು ಹೆಚ್ಚಾಗುತ್ತಿರುವ ಕೊರೋನಾ ಪ್ರಕರಣದ ಬಗ್ಗೆ ಪ್ರಧಾನಿಯವರ ಕಾಲೆಳೆದಿದ್ದಾರೆ.

ಈ ವಾರ ಭಾರತದಲ್ಲಿ ಕೋವಿಡ್-19 ಪ್ರಕರಣಗಳು 50 ಲಕ್ಷ ಗಡಿ ದಾಟಬಹುದು. ಸಕ್ರಿಯ ಕೇಸುಗಳೇ 10 ಲಕ್ಷವಾಗಬಹುದು. ಒಬ್ಬ ಮನುಷ್ಯನ ಅಹಂಕಾರದ ಕೊಡುಗೆಯೇ ಸರಿಯಾದ ಯೋಜನೆ ಹಾಕಿಕೊಳ್ಳದೆ ಲಾಕ್ ಡೌನ್ ಹೇರಿಕೆ ಮಾಡಿದ್ದು, ಇದರಿಂದ ದೇಶದೆಲ್ಲೆಡೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಸ್ವಾವಲಂಬಿಗಳಾಗಿ, ಆತ್ಮ ನಿರ್ಭರರಾಗಿ ಎಂದು ಪ್ರಧಾನಿಯವರು ಹೇಳುತ್ತಾರೆ. ಅದರರ್ಥ ನಿಮ್ಮ ಜೀವನವನ್ನು ನೀವೇ ನೋಡಿಕೊಳ್ಳಿ ಎಂದು, ಯಾಕೆಂದರೆ ಪ್ರಧಾನಿಯವರು ತಮ್ಮ ನವಿಲುಗಳ ಜೊತೆ ಬ್ಯುಸಿಯಾಗಿದ್ದಾರೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಕಳೆದ ತಿಂಗಳು ಪ್ರಧಾನಿಯವರು ತಮ್ಮ ಕಚೇರಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ವಿಡಿಯೊವನ್ನು ಉಲ್ಲೇಖಿಸಿರುವ ರಾಹುಲ್ ಗಾಂಧಿ, ಪ್ರಧಾನಿಯವರು ತಮ್ಮ ನವಿಲುಗಳ ಜೊತೆ ಸಮಯ ಕಳೆಯುತ್ತಿದ್ದಾರೆ. ಅವರಿಗೆ ದೇಶದ ನಾಗರಿಕರ ಬಗ್ಗೆ ಚಿಂತೆಯಿಲ್ಲ ಎಂದು ಟೀಕಿಸಿದ್ದರು.

ರಾಹುಲ್ ಗಾಂಧಿ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ಭಾಗದಲ್ಲಿ ಅನುಪಸ್ಥಿತರಿರುತ್ತಾರೆ, ಅವರು ತಮ್ಮ ತಾಯಿ ಸೋನಿಯಾ ಗಾಂಧಿಯವರನ್ನು ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT