ಮಸೂದೆಯನ್ನು ವಿರೋಧಿಸಿ ಭಾರತೀಯ ಕಿಸಾನ್ ಯೂನಿಯನ್ ಪ್ರತಿಭಟನೆ 
ದೇಶ

ಕೃಷಿ ಕ್ಷೇತ್ರದ ಸುಧಾರಣೆ: ಲೋಕಸಭೆಯಲ್ಲಿ ಅಗತ್ಯ ಸರಕುಗಳ ಕಾಯ್ದೆ ತಿದ್ದುಪಡಿ ಮಸೂದೆ ಅಂಗೀಕಾರ

ಕೃಷಿ ಕ್ಷೇತ್ರದ ಸುಧಾರಣೆಗಾಗಿ ಕೇಂದ್ರ ಸರ್ಕಾರ ಅಗತ್ಯ ಸರಕುಗಳ ಕಾಯ್ದೆಗೆ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ಪಡೆಯುವುದರಲ್ಲಿ ಯಶಸ್ವಿಯಾಗಿದೆ. 

ನವದೆಹಲಿ: ಕೃಷಿ ಕ್ಷೇತ್ರದ ಸುಧಾರಣೆಗಾಗಿ ಕೇಂದ್ರ ಸರ್ಕಾರ ಅಗತ್ಯ ಸರಕುಗಳ ಕಾಯ್ದೆ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ಪಡೆಯುವುದರಲ್ಲಿ ಯಶಸ್ವಿಯಾಗಿದೆ. 

ಬಿಜೆಪಿ ಮಿತ್ರಪಕ್ಷ ಶಿರೋಮಣಿ ಅಕಾಲಿ ದಳವೂ ಸೇರಿದಂತೆ ವಿಪಕ್ಷಗಳ ಪ್ರತಿಭಟನೆಯ ನಡುವೆಯೇ ಕೇಂದ್ರ ಸರ್ಕಾರ ಮಸೂದೆಗೆ ಅಂಗೀಕಾರ ಪಡೆದಿದೆ. 

ತಿದ್ದುಪಡಿ ಕಾಯ್ದೆಯಲ್ಲಿ ಧಾನ್ಯ, ಕಾಳುಗಳು, ಈರುಳ್ಳಿ ಸೇರಿದಂತೆ ಆಹಾರ ಪದಾರ್ಥಗಳ ಮೇಲಿನ ನಿಯಂತ್ರಣವನ್ನು ತೆಗೆದುಹಾಕುವ ಪ್ರಸ್ತಾವನೆ ಇದೆ. ತಿದ್ದುಪಡಿ ಕಾಯ್ದೆಯ ಮೂಲಕ ಕೃಷಿ ಕ್ಷೇತ್ರದ ಸುಧಾರಣೆ ಹಾಗೂ ರೈತರ ಆದಾಯವನ್ನು ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಸರ್ಕಾರ ತಿಳಿಸಿದೆ. 

ಚರ್ಚೆಯಲ್ಲಿ ಮಾತನಾಡಿರುವ ಗ್ರಾಹಕ ವ್ಯವಹಾರಗಳ ರಾಜ್ಯ ಸಚಿವ ರಾವ್ ಸಾಹೇಬ್ ಪಾಟೀಲ್ ದನ್ವೆ ಮಾತನಾಡಿ, ಈ ಕಾಯ್ದೆಯಿಂದ ರೈತರಿಗೆ ಉಪಯೋಗವಾಗುತ್ತದೆ, ಕೃಷಿ ಕ್ಷೇತ್ರದ ಮೂಲಸೌಕರ್ಯವನ್ನು ಉತ್ತೇಜಿಸಲಿದೆ ಎಂದು ಹೇಳಿದ್ದಾರೆ. 

ಈ ಕಾಯ್ದೆಯ ಮೂಲಕ ಖಾಸಗಿ ಹೂಡಿಕೆಯೂ ಕೃಷಿ ಕ್ಷೇತ್ರದಲ್ಲಿ ಹೆಚ್ಚಲಿದ್ದು 2022 ರ ವೇಳೆಗೆ ಭಾರತದ ರೈತರ ಆದಾಯ ದ್ವಿಗುಣಗೊಳಿಸುವ ಸರ್ಕಾರದ ಉದ್ದೇಶಕ್ಕೂ ಈ ಕಾಯ್ದೆ ನೆರವಾಗಲಿದೆ ಎಂದು ಹೇಳಿದ್ದಾರೆ. ಆದರೆ ಈ ಕಾಯ್ದೆಯನ್ನು ವಿಪಕ್ಷಗಳು ರೈತ ವಿರೋಧಿ ಕಾಯ್ದೆಯೆಂದೇ ವಿರೋಧಿಸಿವೆ. 

ಬಿಜೆಪಿ ಮಿತ್ರ ಪಕ್ಷ ಶಿರೋಮಣಿ ಅಕಾಲಿ ದಳದ ನಾಯಕ ಸುಕ್ಬೀರ್ ಸಿಂಗ್ ಬಾದಲ್ ಮಾತನಾಡಿ, ಈ ಸುಗ್ರೀವಾಜ್ಞೆಗಳ ಚರ್ಚೆಯ ವೇಳೆ ಕೇಂದ್ರ ಸಚಿವರೂ ಆಗಿರುವ ಪಕ್ಷದ ಪ್ರತಿನಿಧಿ ಹರ್ಸಿಮ್ರತ್ ಕೌರ್ ಬಾದಲ್ ಈ ಕಾಯ್ದೆಗೆ ಸಂಬಂಧಿಸಿದಂತೆ ಆಕ್ಷೇಪಗಳನ್ನು ಎತ್ತಿದ್ದರು. ಅಷ್ಟೇ ಅಲ್ಲದೇ ಬದಲಾವಣೆಗೆ ಕ್ರಮ ಕೈಗೊಳ್ಳಬೇಕೆಂದೂ ಕೇಳಿದ್ದರು. ಯಾವುದೇ ಬೆಲೆ ತೆರಬೇಕಾಗಿಬಂದರೂ ಪಕ್ಷದ ನಿಲುವನ್ನು ಸಡಿಲಿಸುವುದಿಲ್ಲ ಎಂದು ಬಾದಲ್ ಲೋಕಸಭೆಯಲ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT