ಯೋಗಿ ಆದಿತ್ಯನಾಥ್ 
ದೇಶ

ಮೊಘಲರು ನಮ್ಮ ನಾಯಕರುಗಳಾಗಲು ಹೇಗೆ ಸಾಧ್ಯ? ಆಗ್ರಾ ಮ್ಯೂಸಿಯಂಗೆ ಛತ್ರಪತಿ ಶಿವಾಜಿ ಹೆಸರು: ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಐತಿಹಾಸಿಕ ಆಗ್ರಾ ನಗರದಲ್ಲಿ ನಿರ್ಮಾಣವಾಗುತ್ತಿರುವ ಮೊಘಲ್ ಮ್ಯೂಸಿಯಂಗೆ ಛತ್ರಪತಿ ಶಿವಾಜಿ ಮಹಾರಾಜ್ ಹೆಸರು ಇಡುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. 

ಲಕ್ನೋ: ಉತ್ತರ ಪ್ರದೇಶದ ಐತಿಹಾಸಿಕ ಆಗ್ರಾ ನಗರದಲ್ಲಿ ನಿರ್ಮಾಣವಾಗುತ್ತಿರುವ ಮೊಘಲ್ ಮ್ಯೂಸಿಯಂಗೆ ಛತ್ರಪತಿ ಶಿವಾಜಿ ಮಹಾರಾಜ್ ಹೆಸರು ಇಡುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. 

ಮೊಘಲರ ಕಾಲದ ಆಡಳಿತದ ವಸ್ತುಗಳನ್ನು ಪ್ರದರ್ಶನಕ್ಕೆ ಇಡುವ ಈ ಮ್ಯೂಸಿಯಂಗೆ 'ಮೊಘಲ್ ಮ್ಯೂಸಿಯಂ' ಎಂದೇ ಹೆಸರಿಡಲು ಉದ್ದೇಶಿಸಲಾಗಿತ್ತು. ಆದರೆ ಯೋಗಿ, ಹೆಸರು ಬದಲಿಸುವುದಾಗಿ ತಿಳಿಸಿದ್ದಾರೆ.

ನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಿದ ಅವರು, 'ಮೊಘಲರು ನಮ್ಮ ಹೀರೋಗಳಾಗಲು ಹೇಗೆ ಸಾಧ್ಯ?' ಎಂದು ಪ್ರಶ್ನಿಸಿದರು. ಮಾನಸಿಕ ದಾಸ್ಯತನ ಎನಿಸುವ ಯಾವುದೇ ಸಂಗತಿಗಳನ್ನಾದರೂ ತಮ್ಮ ಸರ್ಕಾರ ತೆಗೆದುಹಾಕಲಿದೆ ಎಂದು ಹೇಳಿದರು.

ಯೋಗಿ ಆದಿತ್ಯನಾಥ್ ಸರ್ಕಾರದಡಿ ಉತ್ತರ ಪ್ರದೇಶದ ಅನೇಕ ಪ್ರದೇಶಗಳ ಹೆಸರುಗಳನ್ನು ಬದಲಿಸಲಾಗಿದೆ. ಅಲಹಾಬಾದ್ ಈಗ ಪ್ರಯಾಗ್ ರಾಜ್ ಆಗಿ ಬದಲಾಗಿದೆ. ಉತ್ತರ ಪ್ರದೇಶದಲ್ಲಿ ದಾಸ್ಯ ಮನೋಭಾವದ ಸಂಕೇತಕ್ಕೆ ಜಾಗವಿಲ್ಲ ಎಂದು ಯೋಗಿ ಹೇಳಿದ್ದಾರೆ.

'ಆಗ್ರಾದಲ್ಲಿ ನಿರ್ಮಾಣ ಹಂತದಲ್ಲಿರುವ ವಸ್ತು ಸಂಗ್ರಹಾಲಯಕ್ಕೆ ಛತ್ರಪತಿ ಶಿವಾಜಿ ಮಹಾರಾಜ್ ಹೆಸರು ನಾಮಕರಣ ಮಾಡಲಾಗುವುದು. ನಿಮ್ಮ ಹೊಸ ಉತ್ತರ ಪ್ರದೇಶದಲ್ಲಿ ಮಾನಸಿಕ ಗುಲಾಮಗಿರಿಯ ಸಂಕೇತಗಳಿಗೆ ಯಾವುದೇ ಜಾಗವಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

SCROLL FOR NEXT