ಅಜಿತ್ ದೋವಲ್ 
ದೇಶ

ಪಾಕಿಸ್ತಾನ ನಕ್ಷೆಯಲ್ಲಿ ಜಮ್ಮು-ಕಾಶ್ಮೀರ: ಶಾಂಘೈ ಸಹಕಾರ ಸಭೆಯನ್ನು ಬಹಿಷ್ಕರಿಸಿದ ಭಾರತದ ಎನ್ಎಸ್ಎ ದೋವಲ್! 

ಶಾಂಘೈ ಸಹಕಾರ ಸಭೆಯಲ್ಲಿ ಜಮ್ಮು-ಕಾಶ್ಮೀರವನ್ನೊಳಗೊಂಡ ಪಾಕ್ ನಕ್ಷೆಯನ್ನು ಪ್ರದರ್ಶಿಸಿದ್ದನ್ನು ಪ್ರತಿಭಟಿಸಿ ಎನ್ಎಸ್ಎ ಅಜಿತ್ ದೋವಲ್ ಸಭೆಯನ್ನು ಬಹಿಷ್ಕರಿಸಿ ಹೊರನಡೆದಿದ್ದಾರೆ. 

ನವದೆಹಲಿ: ಶಾಂಘೈ ಸಹಕಾರ ಸಭೆಯಲ್ಲಿ ಜಮ್ಮು-ಕಾಶ್ಮೀರವನ್ನೊಳಗೊಂಡ ಪಾಕ್ ನಕ್ಷೆಯನ್ನು ಪ್ರದರ್ಶಿಸಿದ್ದನ್ನು ಪ್ರತಿಭಟಿಸಿ ಎನ್ಎಸ್ಎ ಅಜಿತ್ ದೋವಲ್ ಸಭೆಯನ್ನು ಬಹಿಷ್ಕರಿಸಿ ಹೊರನಡೆದಿದ್ದಾರೆ. ಸಭೆಯನ್ನು ಆಯೋಜಿಸಿದ್ದ ರಷ್ಯಾದ ಸಲಹೆ-ಸೂಚನೆಗಳನ್ನು ಧಿಕ್ಕರಿಸಿ ಪಾಕಿಸ್ತಾನ ವಿವಾದಾತ್ಮಕ ನಕ್ಷೆಯನ್ನು ಪ್ರದರ್ಶಿಸಿತ್ತು. 

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಇಲಾಖೆ ವಕ್ತಾರ ಅನುರಾಗ್ ಶ್ರೀವಾಸ್ತವ, "ಪಾಕಿಸ್ತಾನದ ಎನ್ಎಸ್ಎ ಡಾ. ಮೊಯೀದ್ ಯೂಸೂಫ್ ಅವರು ಭಾಗಿಯಾಗಿದ್ದ ವರ್ಚ್ಯುಯಲ್ ಸಭೆಯ ಹಿಂಬದಿಯಲ್ಲಿ ಜಮ್ಮು-ಕಾಶ್ಮೀರ, ಗುಜರಾತ್ ನ ಜುನಾಗಢ್ ನ್ನೊಳಗೊಂಡ ನಕ್ಷೆಯನ್ನು ತೋರಿಸಲಾಗಿತ್ತು ಇದನ್ನು ಗಮನಿಸಿದ  ಎನ್ಎಸ್ಎ ಅಜಿತ್ ದೋವಲ್ ಅವರು ಸಭೆಯನ್ನು ಬಹಿಷ್ಕರಿಸಿ ಹೊರನಡೆದಿದ್ದಾರೆ" ಎಂದು ತಿಳಿಸಿದ್ದಾರೆ. 

ಈ ರೀತಿಯ ನಕ್ಷೆಯನ್ನು ತೋರಿಸುವ ಮೂಲಕ ಪಾಕಿಸ್ತಾನ ಅತಿಥೆಯ ರಾಷ್ಟ್ರದ ನಿಬಂಧನೆಗಳನ್ನು ಉಲ್ಲಂಘಿಸಿ ರಷ್ಯಾಗೆ ಅವಮಾನ ಮಾಡಿದೆ, ಈ ಬಗ್ಗೆ ರಷ್ಯಾ ಎನ್ಎಸ್ಎ ಜೊತೆ ಮಾತನಾಡಿ ಅಜಿತ್ ದೋವಲ್ ಅವರು ಸಭೆ ಬಹಿಷ್ಕರಿಸಿದ್ದಾರೆಂದು ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ. 

ಆದರೆ ಪಾಕಿಸ್ತಾನದ ಆಡಳಿತಾರೂಢ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ತನ್ನ ನಡೆಯನ್ನು ಸಮರ್ಥಿಸಿಕೊಂಡಿದ್ದು, ತನ್ನ ಹೊಸ ರಾಜಕೀಯ ನಕ್ಷೆ ವಿಚಾರದಲ್ಲಿ ಎಸ್ ಸಿಒದಿಂದ ಸಂಪೂರ್ಣ ಒಪ್ಪಿಗೆ ಇತ್ತು ಎಂದು ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಹಿಳಾ ವಿಶ್ವಕಪ್ 2025: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 53 ರನ್‌ಗಳ ಭರ್ಜರಿ ಜಯ, ಸೆಮಿಫೈನಲ್‌ಗೆ INDIA ಲಗ್ಗೆ!

ವೆಸ್ಟ್ ಬ್ಯಾಂಕ್ ವಶಪಡಿಸಿಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೇ ಅಮೆರಿಕದ ಬೆಂಬಲ ಕಳಕೊಳ್ಳಬೇಕಾಗುತ್ತೆ: ಇಸ್ರೇಲ್‌ಗೆ ಟ್ರಂಪ್ ಕಟು ಎಚ್ಚರಿಕೆ

ರಕ್ಷಣಾ ವಲಯಕ್ಕೆ 79,000 ಕೋಟಿ ರೂ. ಮೌಲ್ಯದ ಉಪಕರಣಗಳ ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ!

ಹೊಸ ಸಿಜೆಐ ನೇಮಕಕ್ಕೆ ಪ್ರಕ್ರಿಯೆ ಆರಂಭ: ಯಾರಾಗಲಿದ್ದಾರೆ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ?

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಎರಡ್ಮೂರು ದಿನಗಳಲ್ಲಿ AAI ವರದಿ ಸಲ್ಲಿಕೆ- ಎಂ.ಬಿ ಪಾಟೀಲ್

SCROLL FOR NEXT