ರಾಹುಲ್ ಗಾಂಧಿ 
ದೇಶ

ಆಪತ್ಕಾಲದಲ್ಲಿ ಲಾಭ ಮಾಡಿಕೊಳ್ಳುವ ಹುನ್ನಾರ: ಪಿಎಂ ಕೇರ್ಸ್ ಕುರಿತು ರಾಹುಲ್ ಗಾಂಧಿ ಗಂಭೀರ ಆರೋಪ

 ಕೋವಿಡ್ -19 ಬಿಕ್ಕಟ್ಟಿನ ಹಂತದಲ್ಲಿ ನೀಡಿದ ಭರವಸೆಗಳು ಹುಸಿಯಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಧವಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ಕೋವಿಡ್ -19 ಬಿಕ್ಕಟ್ಟಿನ ಹಂತದಲ್ಲಿ ನೀಡಿದ ಭರವಸೆಗಳು ಹುಸಿಯಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಧವಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

"21 ದಿನಗಳಲ್ಲಿ ಕೊರೋನಾವನ್ನು ನಿರ್ನಾಮ ಮಾಡುವ ಬಗ್ಗೆ ಗಾಳಿಯಲ್ಲಿ ಕೋಟೆಗಳನ್ನು ಕಟ್ಟುವುದು, ಜನರ ರಕ್ಷಣೆಗಾಗಿ ಆರೋಗ್ಯ ಸೆತು ಅಪ್ಲಿಕೇಶನ್, 20 ಲಕ್ಷ ಕೋಟಿ ಪ್ಯಾಕೇಜ್, ಯಾರೂ ನಮ್ಮ ಗಡಿಗಳನ್ನು ಅತಿಕ್ರಮಿಸಿಲ್ಲ, ಪರಿಸ್ಥಿತಿ ನಿಯಂತ್ರಣದಲ್ಲಿದೆ...."  ವಯನಾಡ್ ಸಂಸದರು ಕೇಂದ್ರದ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿದ್ದಾರೆ.

ಕಾಂಗ್ರೆಸ್ ನಾಯಕ ತನ್ನ ಟ್ವೀಟ್ ಮೂಲಕ, ಕೇಂದ್ರ ಸರ್ಕಾರ ಸುಳ್ಳುಗಳ ಸರಮಾಲೆ ಹೆಣೆದಿದೆ ಎಂದಿದ್ದಾರೆ ಹಾಗೆಯೇ "ಒಂದು ಸತ್ಯವೂ ಇದೆ: 'ಆಪ್ಡಾ ಮಿ ಅವ್ಸರ್' (ವಿಪತ್ತಿನಲ್ಲಿ ಅವಕಾಶ) ಪಿಎಂ ಕೇರ್ಸ್." ಎಂದೂ ಕುಟುಕಿದ್ದಾರೆ.

ಭಾರತದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗ ಕಾಣಿಸಿಕೊಂಡ ನಂತರ ಪ್ರಧಾನಮಂತ್ರಿಗಳ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪರಿಹಾರ (PM CARES) ನಿಧಿಯನ್ನು ಮಾರ್ಚ್ 2020 ರಲ್ಲಿ ರಚಿಸಲಾಯಿತು. ಈ ನಿಧಿಯು ಕೋವಿಡ್ -19 ವಿರುದ್ಧದ ಹೋರಾಟವನ್ನು ಬಲಪಡಿಸುವ, ಗುಣಮಟ್ಟದ ಚಿಕಿತ್ಸೆಯನ್ನು ಒದಗಿಸುವ ಮತ್ತು ರೋಗದ ಪರಿಸ್ಥಿತಿಯ ವಿರುದ್ಧ ಹೋರಾಡಲು ಸಂಶೋಧನೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. 

 ಪಿಎಂ ಕೇರ್ಸ್ ಫಂಡ್ ಸ್ಥಾಪನೆಗೆ ಕಾಂಗ್ರೆಸ್ ವಿರುದ್ಧವಾಗಿದೆ ಮತ್ತು ಈ ಹಿಂದೆ ನಿಧಿಗೆ ದೇಣಿಗೆ ಕೊಟ್ಟ ದಾನಿಗಳ ಹೆಸರನ್ನು ಬಹಿರಂಗಪಡಿಸದ ಕಾರಣ ಕೇಂದ್ರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ವಾಗ್ದಾಳಿ ನಡೆಸಿತ್ತು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT