ದೇಶ

ಬೆಂಗಳೂರು ಮೂಲದ ಐಟಿ ಕಂಪನಿ ಮೇಲ್ ನಿಂದ ಎನ್ಐಸಿ ಕಂಪ್ಯೂಟರ್‌ಗಳ ಮೇಲೆ ಸೈಬರ್ ದಾಳಿ!

ಭಾರಿ ಭದ್ರತಾ ವೈಫಲ್ಯದಲ್ಲಿ , ದೇಶದಲ್ಲಿ ನಿರ್ಣಾಯಕ ಸೈಬರ್-ಮೂಲಸೌಕರ್ಯ ಭದ್ರತಾ  ಜವಾಬ್ದಾರಿಯನ್ನು ಹೊಂದಿರುವ ಸರ್ಕಾರದ ನೋಡಲ್ ಏಜೆನ್ಸಿಯಾದ ನ್ಯಾಷನಲ್ ಇನ್ಫಾರ್ಮ್ಯಾಟಿಕ್ಸ್ ಸೆಂಟರ್ (ಎನ್‌ಐಸಿ) ಯ ಸುಮಾರು 100 ಕಂಪ್ಯೂಟರ್‌ಗಳ ಮೇಲೆ ಮಾಲ್‌ವೇರ್ ಸೈಬರ್  ದಾಳಿ ನಡೆದಿದೆ.

ನವದೆಹಲಿ: ಭಾರಿ ಭದ್ರತಾ ವೈಫಲ್ಯದಲ್ಲಿ, ದೇಶದಲ್ಲಿ ನಿರ್ಣಾಯಕ ಸೈಬರ್-ಮೂಲಸೌಕರ್ಯ ಭದ್ರತಾ  ಜವಾಬ್ದಾರಿಯನ್ನು ಹೊಂದಿರುವ ಸರ್ಕಾರದ ನೋಡಲ್ ಏಜೆನ್ಸಿಯಾದ ನ್ಯಾಷನಲ್ ಇನ್ಫಾರ್ಮ್ಯಾಟಿಕ್ಸ್ ಸೆಂಟರ್ (ಎನ್‌ಐಸಿ) ಯ ಸುಮಾರು 100 ಕಂಪ್ಯೂಟರ್‌ಗಳ ಮೇಲೆ ಮಾಲ್‌ವೇರ್ ಸೈಬರ್  ದಾಳಿ ನಡೆದಿದೆ.

ದೆಹಲಿ ಪೊಲೀಸರ ವಿಶೇಷ ಸೆಲ್ ಈ ಬಗ್ಗೆ ತನಿಖೆ ಆರಂಭಿಸಿದೆ. ಈ ಸಂಬಂಧ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಪ್ರಕರಣ ದಾಖಲಿಸಿದೆ.

ಪ್ರಾಥಮಿಕ ತನಿಖೆಯಿಂದ ಬೆಂಗಳೂರಿನ ಸಂಸ್ಥೆಯೊಂದರ ಇಮೇಲ್ ಮಾಲ್‌ವೇರ್ ಅನ್ನು ರಚಿಸಿದೆ ಎಂದು ಶಂಕಿಸಲಾಗಿದೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ (ಮೀಟಿವೈ) ಉದ್ಯೋಗಿಯೊಬ್ಬರು ತಮ್ಮ ದೂರಿನಲ್ಲಿ ತಮ್ಮ ಇಮೇಲ್ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ ಮತ್ತು ಸೈಬರ್ ದಾಳಿ ಶಂಕೆ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ. 

ಅವರ ಕಂಪ್ಯೂಟರ್ ಮಾತ್ರವಲ್ಲ, ಇನ್ನೂ ಹಲವಾರು ಜನರ ಕಂಪ್ಯೂಟರ್ ಗಳು ಇದೇ ಬಗೆಯ ದಾಳಿಗೆ ಒಳಗಾಗಿದೆ. ಪ್ರಾಥಮಿಕ ತನಿಖೆಯ ಸಮಯದಲ್ಲಿ, ಈ ಹಲವಾರು ಸಿಸ್ಟಮ್ ಗಳು ಮಾಲ್‌ವೇರ್ ದಾಳಿ ಎಂದು ಶಂಕಿಸಲಾಗಿರುವ ಇಮೇಲ್ ಅನ್ನು ಸ್ವೀಕರಿಸಿರುವುದು ಕಂಡುಬಂದಿದೆ. ಬಳಕೆದಾರರು ಇಮೇಲ್ ಅನ್ನು ಕ್ಲಿಕ್ ಮಾಡಿದಾಗ, ಅವರ ಸಿಸ್ಟಮ್ ಗಳ ಮೇಲೆ ಇದು ಒಅರಿಣಾಮ ಬೀರುತ್ತದೆ. ಈ ಸಮಸ್ಯೆಯ ಮೂಲವನ್ನು  ಬೆಂಗಳೂರಿನ ಐಟಿ ಕಂಪನಿಯೊಂದರ ಜತೆ ಸಂಪರ್ಕಿಸಲಾಗಿದೆ. 

ಮೂಲಗಳ ಪ್ರಕಾರ, ಎನ್‌ಐಸಿಯ ಸೈಬರ್ ಹಬ್‌ನಲ್ಲಿರುವ ಕಂಪ್ಯೂಟರ್‌ಗಳು ಭಾರತದ ಭದ್ರತೆ, ನಾಗರಿಕರು ಮತ್ತು ಸರ್ಕಾರದ ಪ್ರಮುಖ ಕಾರ್ಯಕಾರಿಣಿಗಳು, ಪ್ರಧಾನಿ, ರಾಷ್ಟ್ರೀಯ ಭದ್ರತಾ ಸಲಹೆಗಾರ, ಗೃಹ ಸಚಿವರು ಸೇರಿದಂತೆ ಪ್ರಮುಖ ಮಾಹಿತಿ ಮತ್ತು ದತ್ತಾಂಶಗಳನ್ನು ಒಳಗೊಂಡಿವೆ. ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಇ-ಆಡಳಿತ ಯೋಜನೆಗಳ ಅನುಷ್ಠಾನಕ್ಕೆ ಎನ್‌ಐಸಿ ಸಹಾಯ ಮಾಡುತ್ತದೆ, ಸರ್ಕಾರಿ ಇಲಾಖೆಗಳಿಗೆ ಸಲಹೆಯನ್ನು ನೀಡುತ್ತದೆ ಮತ್ತು ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಸಾಮರ್ಥ್ಯವನ್ನು ಹೆಚ್ಚಿಸುವ ಜವಾಬ್ದಾರಿಯನ್ನು ಹೊಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT