ಹರ್ಸಿಮ್ರತ್ ಕೌರ್ ಬಾದಲ್ 
ದೇಶ

ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆ ಕೇವಲ ನಾಟಕ: ಕಾಂಗ್ರೆಸ್ 

ಶಿರೋಮಣಿ ಅಕಾಲಿ ದಳ ನಾಯಕಿ ಹರ್ಸಿಮ್ರತ್ ಕೌರ್ ಬಾದಲ್ ಅವರು ಕೇಂದ್ರ ಸಚಿವ ಸಂಪುಟದಿಂದ ರಾಜೀನಾಮೆ ನೀಡಿದ್ದು ಕೇವಲ ನಾಟಕೀಯವಾಗಿದ್ದು, ಅವರಿಗೆ ನಿಜವಾಗಿಯೂ ರೈತರ ಪರ ಕಾಳಜಿಯಿದ್ದರೆ ಕೇಂದ್ರ ಸಂಪುಟ ರೈತ ಸಂಬಂಧಿ ವಿಧೇಯಕ ತರುವಾಗ ಏಕೆ ಅವರು ವಿರೋಧಿಸಿರಲಿಲ್ಲ ಎಂದು ಪ್ರಶ್ನಿಸಿದೆ.

ನವದೆಹಲಿ: ಶಿರೋಮಣಿ ಅಕಾಲಿ ದಳ ನಾಯಕಿ ಹರ್ಸಿಮ್ರತ್ ಕೌರ್ ಬಾದಲ್ ಅವರು ಕೇಂದ್ರ ಸಚಿವ ಸಂಪುಟದಿಂದ ರಾಜೀನಾಮೆ ನೀಡಿದ್ದು ಕೇವಲ ನಾಟಕೀಯವಾಗಿದ್ದು, ಅವರಿಗೆ ನಿಜವಾಗಿಯೂ ರೈತರ ಪರ ಕಾಳಜಿಯಿದ್ದರೆ ಕೇಂದ್ರ ಸಂಪುಟ ರೈತ ಸಂಬಂಧಿ ವಿಧೇಯಕ ತರುವಾಗ ಏಕೆ ಅವರು ವಿರೋಧಿಸಿರಲಿಲ್ಲ ಎಂದು ಪ್ರಶ್ನಿಸಿದೆ.

ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹರ್ಸಿಮ್ರತ್ ಕೌರ್ ಅವರ ರಾಜೀನಾಮೆಯನ್ನು ಕೇವಲ ನಾಟಕೀಯ ಎಂದು ಕರೆದಿದ್ದು, ಇದು ಬಹಳ ತಡವಾಗಿ ತೆಗೆದುಕೊಂಡ ಅತಿ ಸಣ್ಣ ನಿರ್ಧಾರವಾಗಿದೆ ಎಂದು ಹೇಳಿದ್ದಾರೆ.

ಶಿರೋಮಣಿ ಅಕಾಲಿ ದಳ ಹೆಣೆದಿರುವ ನಾಟಕೀಯ ಸರಣಿಯಲ್ಲಿ ಹರ್ಸಿಮ್ರತ್ ಕೌರ್ ಅವರ ರಾಜೀನಾಮೆ ಮತ್ತೊಂದು ಪ್ರಹಸನವಷ್ಟೆ. ಅವರು ರಾಜೀನಾಮೆ ಕೊಟ್ಟಿದ್ದಾರೆ ಹೊರತು ಎನ್ ಡಿಎ ಮೈತ್ರಿಕೂಟದಿಂದ ಹೊರಬಂದಿಲ್ಲ. ಇದು ರೈತರ ಬಗ್ಗೆ ಅವರಿಗಿರುವ ಕಾಳಜಿಯಲ್ಲ, ಬದಲಾಗಿ ತಮ್ಮ ರಾಜಕೀಯ ಅದೃಷ್ಟವನ್ನು ಕಾಪಾಡಿಕೊಳ್ಳಲು, ಇದು ಶಿರೋಮಣಿ ಅಕಾಲಿದಳದ ಅತಿ ಸಣ್ಣ ಮತ್ತು ತಡವಾದ ನಿರ್ಧಾರ ಎಂದು ಅಮರಿಂದರ್ ಸಿಂಗ್ ಟೀಕಿಸಿದ್ದಾರೆ.

ಕಾಂಗ್ರೆಸ್ ನ ಪ್ರಧಾನ ವಕ್ತಾರ ರಂದೀಪ್ ಸುರ್ಜೆವಾಲಾ, ರೈತ ವಿರೋಧಿ ಶಾಸನ, ವಿಧೇಯಕ ಹೆಸರಿನಲ್ಲಿ ಕೇಂದ್ರ ಸಂಪುಟದಿಂದ ಹೊರಬಂದಿರುವ ಹರ್ಸಿಮ್ರತ್ ಕೌರ್ ಬಾದಲ್ ಅವರು ಇನ್ನೂ ಏಕೆ ಎನ್ ಡಿಎ ಮೈತ್ರಿಕೂಟದಲ್ಲಿದ್ದಾರೆ. ಲೋಕಸಭಾ ಸದಸ್ಯೆ ಸ್ಥಾನಕ್ಕೆ ಅವರೇಕೆ ರಾಜೀನಾಮೆ ನೀಡಿಲ್ಲ ಎಂದು ಕೇಳಿದ್ದಾರೆ. 

ನಿಜವಾಗಿಯೂ ರೈತರ ಪರ ಕಾಳಜಿ ಹೊಂದಿದ್ದರೆ ಅಕಾಲಿ ದಳ ಈ ಹೊತ್ತಿನಲ್ಲಿ ಸತ್ಯದ ಪರವಾಗಿ ನಿಲ್ಲಬೇಕು, ಕೇಂದ್ರ ಸಂಪುಟ ಅನುಮೋದನೆ ನೀಡುವಾಗ ಹರ್ಸಿಮ್ರತ್ ಕೌರ್ ಅವರು ರೈತ ವಿರೋಧಿ ವಿಧೇಯಕವನ್ನು ವಿರೋಧಿಸಿರಲಿಲ್ಲವೇಕೆ ಎಂದು ಕೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT