ಲಡಾಕ್ ನಲ್ಲಿ ಹಾರಾಟ ನಡೆಸುತ್ತಿರುವ ಸುಖೊಯ್ ಸು-30ಎಂಕೆಐ ಯುದ್ಧ ವಿಮಾನ 
ದೇಶ

'ಲಡಾಕ್ ಲಡಾಯಿ': ಎಲ್ ಎಸಿಯ 5 ಕೇಂದ್ರಗಳಲ್ಲಿ ಸಾಧ್ಯವಾಗುತ್ತಿಲ್ಲ ಭಾರತೀಯ ಸೇನೆ ನಿಯೋಜನೆ!

ಗಾಲ್ವಾನ್ ಕಣಿವೆಯ ಗಸ್ತು ಕೇಂದ್ರ 14 ರಿಂದ ಚೀನಾದ ಸೇನಾ ಪಡೆ ಹಿಂದೆ ಸರಿದ ನಂತರ ಹೆಚ್ಚಿನ ಬದಲಾವಣೆಯಾಗಿಲ್ಲವಾದ್ದರಿಂದ ವಾಸ್ತವ ಗಡಿ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಉದ್ವಿಗ್ನ ಪರಿಸ್ಥಿತಿ ಹಾಗೆಯೇ ಮುಂದುವರಿದಿದೆ.

ನವದೆಹಲಿ: ಗಾಲ್ವಾನ್ ಕಣಿವೆಯ ಗಸ್ತು ಕೇಂದ್ರ 14 ರಿಂದ ಚೀನಾದ ಸೇನಾ ಪಡೆ ಹಿಂದೆ ಸರಿದ ನಂತರ ಹೆಚ್ಚಿನ ಬದಲಾವಣೆಯಾಗಿಲ್ಲವಾದ್ದರಿಂದ ವಾಸ್ತವ ಗಡಿ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಉದ್ವಿಗ್ನ ಪರಿಸ್ಥಿತಿ ಹಾಗೆಯೇ ಮುಂದುವರಿದಿದೆ.

ಸೇನಾಪಡೆಯನ್ನು ಹಿಂತೆಗೆದುಕೊಳ್ಳುವುದಾಗಿ ಒಪ್ಪಂದ ಮಾಡಿಕೊಂಡಿದ್ದರೂ ಕೂಡ ಗೊಗ್ರಾ ಹಾಟ್ ಸ್ಪ್ರಿಂಗ್ ಮತ್ತು ಫಿಂಗರ್ 4 ರಿಂದ ಚೀನಾ ಸೇನೆ ಕೇವಲ ಒಂದು ಭಾಗದ ಪಡೆಯನ್ನು ಮಾತ್ರ ಹಿಂತೆಗೆದುಕೊಂಡಿದೆ, ಡೆಪ್ಸಾಂಗ್ ನಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಚೀನಾ ಸೇನಾಪಡೆ ಡೆಪ್ಸಾಂಗ್ ನ ವೈ ಜಂಕ್ಷನ್ ನಲ್ಲಿ ಬೀಡು ಬಿಟ್ಟಿದ್ದು ಭಾರತ ಸೇನಾಪಡೆಯನ್ನು ಪಾಯಿಂಟ್ಸ್ 10,11,11ಎ,12 ಮತ್ತು 13ರಲ್ಲಿ ತಡೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಪ್ರತಿ ಕೇಂದ್ರಗಳ ಮಧ್ಯೆ 15ರಿಂದ 20 ಕಿಲೋ ಮೀಟರ್ ಅಂತರವಿದೆ. 80ರಿಂದ 100 ಚದರ ಕಿಲೋ ಮೀಟರ್ ಇರುವ ಪ್ರದೇಶಕ್ಕೆ ಭಾರತೀಯ ಸೈನಿಕರು ತಲುಪಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ.

ಫಿಂಗರ್ 4 ಬಗ್ಗೆ ಸ್ಪಷ್ಟನೆ ನೀಡಿರುವ ಸೇನಾ ಮೂಲಗಳು, ಪಾಂಗೊಂಗ್ ಟ್ಸೊನ ಉತ್ತರ ತೀರದಿಂದ ಫಿಂಗರ್ 8ರವರೆಗೆ ಗಸ್ತು ನಿಯೋಜಿಸಲಾಗಿದೆ ಮತ್ತು ಚೀನಾದ ಪಡೆ ಫಿಂಗರ್ 4ರ ಹತ್ತಿರ ಬರುತ್ತದೆ. ಆದರೆ ಅಲ್ಲಿ ಪ್ರದೇಶವನ್ನು ವಶಪಡಿಸಿಕೊಳ್ಳಲು ಯಾರೂ ಪ್ರಯತ್ನ ನಡೆಸುತ್ತಿಲ್ಲ. ನಾವು ಎಲ್ಲಾ 5 ಪಾಯಿಂಟ್ ಗಳಲ್ಲಿ ಗಸ್ತು ತಿರುಗುತ್ತಿದ್ದೆವು, ಅದಕ್ಕೆ ಈಗ ಚೀನಾ ತಡೆಯೊಡ್ಡುತ್ತಿದೆ, ಡೆಪ್ಸಾಂಗ್ ಅತಿ ಪ್ರಮುಖ ಕೇಂದ್ರವಾಗಿದ್ದು ಭಾರತ, ಚೀನಾ ಪಡೆಯನ್ನು ಹಿಂದೆ ಕಳುಹಿಸಲು ಪ್ರಯತ್ನಿಸುತ್ತಿದೆ ಎಂದು ಮೂಲಗಳು ಹೇಳುತ್ತವೆ.

ಚೀನಾ ಸರ್ಕಾರದ ದ್ವಂದ್ವ ನಿಲುವಿನಿಂದಾಗಿ ಅಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. "ಮ್ಯಾಕ್ ಮಹೊನ್ ರೇಖೆಯನ್ನು ಆಧರಿಸಿ ಚೀನಿಯರು ಮ್ಯಾನ್ಮಾರ್‌ನೊಂದಿಗಿನ ತಮ್ಮ ಗಡಿ ಸಮಸ್ಯೆಯನ್ನು ಬಗೆಹರಿಸಿಕೊಂಡಿದ್ದಾರೆ. ಆದರೆ ಭಾರತದ ವಿಚಾರದಲ್ಲಿ ತಿರಸ್ಕರಿಸಿದ್ದಾರೆ. ಸಿಕ್ಕಿಂ ಕಡೆಗೆ ಡೋಕ್ಲಂನ 1890ರ ಒಪ್ಪಂದವನ್ನು ಉಲ್ಲೇಖಿಸುತ್ತಾರೆ, ಆದರೆ ಟಿಬೆಟ್ ಮತ್ತು ಬ್ರಿಟಿಷ್ ಭಾರತದ ನಡುವಿನ ಒಪ್ಪಂದದ ಬಗ್ಗೆ ಕಡೆಗಣಿಸುತ್ತದೆ ಎಂದು ರಕ್ಷಣಾ ವಿಶ್ಲೇಷಕ ಮೇ.ಜನರಲ್ (ನಿವೃತ್ತ)ಎಸ್ ಬಿ ಅಸ್ತಾನಾ ಹೇಳುತ್ತಾರೆ.

ಚೀನಾ 1993ರಿಂದ ಭಾರತದೊಂದಿಗೆ ಎಲ್ಲಾ ವಿಶ್ವಾಸಾರ್ಹ ಕ್ರಮಗಳನ್ನು ಉಲ್ಲಂಘಿಸಿದೆ. ಮೇ ಮೊದಲ ವಾರದಲ್ಲಿ ಫಿಂಗರ್ 4 ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಉಲ್ಲಂಘನೆಯಾಗಿದೆ. ತನ್ನ ಆಕ್ರಮಣಕಾರಿ ಕ್ರಮಗಳಿಂದ ಚೀನಾ ಗಡಿ ವಾಸ್ತವ ರೇಖೆಯಲ್ಲಿ ಒಪ್ಪಂದವನ್ನು ಮುರಿಯಲು ಪ್ರಯತ್ನಿಸಿದೆ.

ಭಾರತ-ಚೀನಾ ಗಡಿಯಲ್ಲಿನ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳವಾಗುತ್ತಿದೆ,ಮಿಲಿಟರಿ ಪ್ರಚೋದನೆಗಳನ್ನು ಕೊನೆಗೊಳಿಸಲು ಮತ್ತು ಭಾರತದೊಂದಿಗೆ ರಾಜತಾಂತ್ರಿಕ ಸಂವಾದದಲ್ಲಿ ತೊಡಗಿಸಿಕೊಳ್ಳಲು ಚೀನಾವನ್ನು ಒತ್ತಾಯಿಸುತ್ತಿರುವುದಾಗಿ ಭಾರತ ಮೂಲದ ಅಮೆರಿಕ ಕಾಂಗ್ರೆಸ್ಸಿಗ ರಾಜಾ ಕೃಷ್ಣಮೂರ್ತಿ ಹೇಳುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT