ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ 
ದೇಶ

ನೂತನ ಕೃಷಿ ಮಸೂದೆಗಳ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಲು ಪಂಜಾಬ್ ಸರ್ಕಾರ ನಿರ್ಧಾರ

ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿರುವ ನೂತನ ಕೃಷಿ ಸಂಬಂಧಿತ ಮಸೂದೆಗಳ ವಿರುದ್ಧ  ಪಂಜಾಬ್ ಸರ್ಕಾರ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದೆ.

ಚಂಢೀಗಢ:  ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿರುವ ನೂತನ ಕೃಷಿ ಸಂಬಂಧಿತ ಮಸೂದೆಗಳ ವಿರುದ್ಧ  ಪಂಜಾಬ್ ಸರ್ಕಾರ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದೆ.

ಕೇಂದ್ರ ಸರ್ಕಾರದ ನೂತನ ರೈತ ವಿರೋಧಿ,ಅಸಂವಿಧಾನಿಕ ಕಾಯ್ದೆಗೆ ಸಂಬಂಧಿಸಿದಂತೆ ಬಿಜೆಪಿ, ಶಿರೋಮಣಿ ಅಕಾಲಿ ದಳ ಸೇರಿದಂತೆ ಅದರ ಮೈತ್ರಿ ಪಕ್ಷಗಳನ್ನು ಕೋರ್ಟಿಗೆ ಎಳೆಯುವುದಾಗಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಭಾನುವಾರ ಹೇಳಿದ್ದಾರೆ.

ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ದೊರೆತ ನೆಲದ ಕಾನೂನಾಗಿ ಜಾರಿಗೆ ಬಂದ ಕೂಡಲೇ ಕೋರ್ಟ್ ಮೆಟ್ಟಿಲೇರಿ ಕಠಿಣ ಶಾಸನಗಳ ವಿರುದ್ಧ ಹೋರಾಡುವುದಾಗಿ ಅವರು ತಿಳಿಸಿದ್ದಾರೆ.

ಪ್ರತಿಪಕ್ಷಗಳ ವಿರೋಧ ಮತ್ತು ಸದನದಲ್ಲಿ ಅಸಮರ್ಪಕ ಸಂಖ್ಯೆಯ ಹೊರತಾಗಿಯೂ, ಕೃಷಿ ಕ್ಷೇತ್ರದ ನಿಯಂತ್ರಣವನ್ನು ನಿರ್ಭಯವಾಗಿ ಆಕ್ರಮಿಸಿಕೊಂಡಿರುವ ವಿವಾದಾತ್ಮಕ ಮತ್ತು ಕೆಟ್ಟ ಮಸೂದೆಗಳನ್ನು ಅಂಗೀಕರಿಸುವ  ಹಿಂದಿನ ತಾರ್ಕಿಕತೆಯನ್ನು ಅಮರಿಂದರ್ ಪ್ರಶ್ನಿಸಿದ್ದಾರೆ.

ಆಡಳಿತಾತ್ಮಕ ರಾಷ್ಟ್ರೀಯ ಪ್ರಜಾಪ್ರಭುತ್ವ ಒಕ್ಕೂಟವನ್ನು (ಎನ್‌ಡಿಎ) ವಿಭಜಿಸಿರುವ ಈ ನಿರ್ಣಾಯಕ ವಿಷಯದ ಮೇಲೆ ಸದನ ಮತಗಳ ವಿಭಜನೆಗೆ ಏಕೆ ಹೋಗಲಿಲ್ಲ ಎಂದು ಅವರು ಕೇಳಿದ್ದು, ರೈತರೊಂದಿಗೆ ನಾವಿದ್ದು, ಅವರ ಹಿತಸಕ್ತಿ ಕಾಪಾಡಲು ಏನೆಲ್ಲಾ ಮಾಡಬೇಕೋ ಅದೆಲ್ಲಾವನ್ನು ಮಾಡುತ್ತೇವೆ. ಈ ಕಾಯ್ದೆಯಿಂದ ರೈತರ ಮೇಲೆ ಆಗುವ ಪರಿಣಾಮದ ಬಗ್ಗೆ ಬಿಜೆಪಿ ಮತ್ತು ಅದರ ಅಂಗಪಕ್ಷಗಳಿಗೆ ಸ್ಪಷ್ಟ ಕಾಳಜಿ ಇಲ್ಲ ಎಂದು ಅಮರೀಂದರ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್- ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ, ಇದು ನಾನು ನಿಲ್ಲಿಸಿದ 10 ನೇ ಯುದ್ಧ- ಟ್ರಂಪ್

ಸಂಪುಟ ಸಭೆಯಲ್ಲೂ ಸದ್ದು ಮಾಡಿದ ದಾವಣಗೆರೆ ದಂಗಲ್: ಮುಸ್ಲಿಂ ನಾಯಕರ ವಿರುದ್ಧ ಕ್ರಮಕ್ಕೆ ಸಚಿವರೇ ಆಕ್ಷೇಪ !

ಲೋಕಸಭೆಯ ಸ್ಥಾನಗಳು 850ಕ್ಕೆ ಏರಿಕೆಯಿಂದ ಏನು ಲಾಭ?: ಅಮಿತ್ ಶಾ ಹೇಳಿದ್ದಿಷ್ಟು...

ರಾಮ-ಲಕ್ಷ್ಮಣರು ಕದ್ದು ಹಣ್ಣು ತಿಂದರು, ಅದಕ್ಕೆ ಯುದ್ಧ ಆಯ್ತು: ನಗೆಪಾಟಲಿಗೀಡಾದ ಪ್ರಕಾಶ್ ರಾಜ್, Video

ದೇವಸ್ಥಾನಗಳಲ್ಲಿರುವ ಟನ್ ಗಟ್ಟಲೆ ಚಿನ್ನವನ್ನು ಹೊರತೆಗೆದು ಸಾರ್ವಜನಿಕ ಉದ್ದೇಶಕ್ಕೆ ಬಳಸಬೇಕು- ಫಾದರ್ ಪೌಲ್ ಥೆಲಕ್ಕಟ್

SCROLL FOR NEXT