ಪ್ರಮಾಣವಚನ ಸ್ವೀಕಾರ ಮಾಡುತ್ತಿರುವ ಹೆಚ್.ಡಿ.ದೇವೇಗೌಡ 
ದೇಶ

ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ

ರಾಜ್ಯಸಭಾ ಸದಸ್ಯರಾಗಿ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಭಾನುವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

ನವದೆಹಲಿ: ರಾಜ್ಯಸಭಾ ಸದಸ್ಯರಾಗಿ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಭಾನುವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

ಇದೇ ಮೊದಲ ಬಾರಿಗೆ ಸಂಸತ್'ನ ಮುಂಗಾರು ಅಧಿವೇಶನ ಭಾನುವಾರ ಕೂಡ ನಡೆಯುತ್ತಿದೆ. ಇದರಂತೆ ಶನಿವಾರ ರಾತ್ರಿಯೇ ದೆಹಲಿಗೆ ತೆರಳಿದ್ದ ದೇವೇಗೌಡ ಅವರು ಇಂದು ಬೆಳಿಗ್ಗೆ 9 ಗಂಟೆಗೆ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರು ದೇವೇಗೌಡ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ರಾಜ್ಯಸಭೆಯಲ್ಲಿ ತೆರವಾದ ನಾಲ್ಕು ಸ್ಥಾನಗಳಿಗಾಗಿ ಜೂನ್ 12ರಂದು ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ 87 ವರ್ಷದ ದೇವೇಗೌಡರು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಬೆಂಬಲದೊಂದಿಗೆ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. 

ಸಂಸತ್ತಿನ ಮೇಲ್ಮನೆಗೆ ನೂತನವಾಗಿ ಆಯ್ಕೆಯಾದ 61 ಸದಸ್ಯರಲ್ಲಿ 45 ಮಂದಿ ಜುಲೈ 22ರಂದು ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅದರೆ ಅನಾರೋಗ್ಯ ಮತ್ತು ಹಿರಿಯ ನಾಗರಿಕರ ಪ್ರಮಾಣಕ್ಕೆ ಕೋವಿಡ್-19 ನಿರ್ಬಂಧಗಳು ಇದ್ದ ಕಾರಣ ಗೌಡರು ದೆಹಲಿಗೆ ತೆರಳಲು ಸಾಧ್ಯವಾಗಿರಲಿಲ್ಲ.

ವೈದ್ಯರ ಸಲಹೆ ಮೇರೆಗೆ ಮಾಜಿ ಪ್ರಧಾನಿ ಆಗ ಪ್ರಮಾಣವಚನ ಸಮಾರಂಭಕ್ಕೆ ಗೈರಾಗಿ, ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಿದ್ದರು. ಇದರಂತೆ ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. 

ದೇವೇಗೌಡರು 24 ವರ್ಷಗಳ ಬಳಿಕ ಎರಡನೇ ಬಾರಿ ರಾಜ್ಯಸಭೆ ಸದಸ್ಯರಾಗುತ್ತಿದ್ಧಾರೆ. 1996ರ ಜೂನ್‍ನಿಂದ 1997ರ ಏಪ್ರಿಲ್‍ವರೆಗೆ ಅವರು ಪ್ರಧಾನಮಂತ್ರಿಯಾಗಿದ್ದ ವೇಳೆ ಅವರು ಮೇಲ್ಮನೆಗೆ ಆಯ್ಕೆಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಶಕದ ಬಳಿಕ ಕೇರಳದಲ್ಲಿ ಕಾಂಗ್ರೆಸ್ ಅಧಿಕಾರ: ದೇವರ ಹೆಸರಿನಲ್ಲಿ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್‌ ಪ್ರಮಾಣವಚನ ಸ್ವೀಕಾರ..!

'Lack Of Knowledge': ಪತ್ರಿಕಾ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಡಚ್ ಪ್ರಧಾನಿ ಹೇಳಿಕೆ ತಿರಸ್ಕರಿಸಿದ ಭಾರತ!

COVID ಬಳಿಕ ವಿಶ್ವಕ್ಕೆ ಮತ್ತೊಂದು ಹೆಮ್ಮಾರಿ ಕಂಟಕ: ಕೆನಡಾದಲ್ಲಿ ಮಾರಣಾಂತಿಕ 'Hantavirus' ಮತ್ತೊಂದು ಸೋಂಕು ದೃಢ, ಹೆಚ್ಚಿದ ಆತಂಕ..!

ಅಧಿಕಾರ ಬದಲಾವಣೆ ಚರ್ಚೆ ಬೆನ್ನಲ್ಲೇ ಡಿಕೆಶಿ ಟೆಂಪಲ್ ರನ್: CM ಗಾದಿ ಕನಸು ಜೀವಂತ..!

94ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ: ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಕೇವಲ 1 ರೂ.ಗೆ ಭೋಜನ ವ್ಯವಸ್ಥೆ..!

SCROLL FOR NEXT