ಪ್ರಮಾಣವಚನ ಸ್ವೀಕಾರ ಮಾಡುತ್ತಿರುವ ಹೆಚ್.ಡಿ.ದೇವೇಗೌಡ 
ದೇಶ

ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ

ರಾಜ್ಯಸಭಾ ಸದಸ್ಯರಾಗಿ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಭಾನುವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

ನವದೆಹಲಿ: ರಾಜ್ಯಸಭಾ ಸದಸ್ಯರಾಗಿ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಭಾನುವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

ಇದೇ ಮೊದಲ ಬಾರಿಗೆ ಸಂಸತ್'ನ ಮುಂಗಾರು ಅಧಿವೇಶನ ಭಾನುವಾರ ಕೂಡ ನಡೆಯುತ್ತಿದೆ. ಇದರಂತೆ ಶನಿವಾರ ರಾತ್ರಿಯೇ ದೆಹಲಿಗೆ ತೆರಳಿದ್ದ ದೇವೇಗೌಡ ಅವರು ಇಂದು ಬೆಳಿಗ್ಗೆ 9 ಗಂಟೆಗೆ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರು ದೇವೇಗೌಡ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ರಾಜ್ಯಸಭೆಯಲ್ಲಿ ತೆರವಾದ ನಾಲ್ಕು ಸ್ಥಾನಗಳಿಗಾಗಿ ಜೂನ್ 12ರಂದು ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ 87 ವರ್ಷದ ದೇವೇಗೌಡರು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಬೆಂಬಲದೊಂದಿಗೆ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. 

ಸಂಸತ್ತಿನ ಮೇಲ್ಮನೆಗೆ ನೂತನವಾಗಿ ಆಯ್ಕೆಯಾದ 61 ಸದಸ್ಯರಲ್ಲಿ 45 ಮಂದಿ ಜುಲೈ 22ರಂದು ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅದರೆ ಅನಾರೋಗ್ಯ ಮತ್ತು ಹಿರಿಯ ನಾಗರಿಕರ ಪ್ರಮಾಣಕ್ಕೆ ಕೋವಿಡ್-19 ನಿರ್ಬಂಧಗಳು ಇದ್ದ ಕಾರಣ ಗೌಡರು ದೆಹಲಿಗೆ ತೆರಳಲು ಸಾಧ್ಯವಾಗಿರಲಿಲ್ಲ.

ವೈದ್ಯರ ಸಲಹೆ ಮೇರೆಗೆ ಮಾಜಿ ಪ್ರಧಾನಿ ಆಗ ಪ್ರಮಾಣವಚನ ಸಮಾರಂಭಕ್ಕೆ ಗೈರಾಗಿ, ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಿದ್ದರು. ಇದರಂತೆ ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. 

ದೇವೇಗೌಡರು 24 ವರ್ಷಗಳ ಬಳಿಕ ಎರಡನೇ ಬಾರಿ ರಾಜ್ಯಸಭೆ ಸದಸ್ಯರಾಗುತ್ತಿದ್ಧಾರೆ. 1996ರ ಜೂನ್‍ನಿಂದ 1997ರ ಏಪ್ರಿಲ್‍ವರೆಗೆ ಅವರು ಪ್ರಧಾನಮಂತ್ರಿಯಾಗಿದ್ದ ವೇಳೆ ಅವರು ಮೇಲ್ಮನೆಗೆ ಆಯ್ಕೆಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

CEC 'ಮತ ಕಳ್ಳರ ರಕ್ಷಕ', ಕರ್ನಾಟಕದ ಆಳಂದ ಕ್ಷೇತ್ರದಲ್ಲಿ 6,000 ಮತದಾರರ ಹೆಸರು ಡಿಲೀಟ್: ರಾಹುಲ್ ಗಾಂಧಿ ಆರೋಪ

ಉತ್ತರಾಖಂಡ ಮೇಘಸ್ಫೋಟ: ಚಮೋಲಿ ಜಿಲ್ಲೆಯಲ್ಲಿ ಹತ್ತು ಮಂದಿ ನಾಪತ್ತೆ, ಸಂಪರ್ಕ ಕಳೆದುಕೊಂಡ ಗ್ರಾಮಗಳು

ಉಕ್ರೇನ್ ಯುದ್ಧ ಪರಿಹರಿಸಲು ಸಹಾಯಕ್ಕೆ ಭಾರತ ಸಿದ್ಧವಿದೆ: ಪುಟಿನ್ ಗೆ ಪ್ರಧಾನಿ ಮೋದಿ ಭರವಸೆ

MUDA Scam: ಮುಡಾ ಮಾಜಿ ಅಧಿಕಾರಿ ದಿನೇಶ್ ಕುಮಾರ್ 9 ದಿನ ED ವಶಕ್ಕೆ

ಹಣಕಾಸು ಸ್ವಾತಂತ್ರ್ಯಕ್ಕೆ 7 ಸರಳ ನಿಯಮಗಳು! (ಹಣಕ್ಲಾಸು)

SCROLL FOR NEXT