ರಾಜ್ಯಸಭೆ 
ದೇಶ

8 ಸಂಸದರ ಅಮಾನತು ಪ್ರಶ್ನಿಸಿ ವಿಪಕ್ಷಗಳಿಂದ ಕೋಲಾಹಲ: ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ!

ಟಿಎಂಸಿ ನಾಯಕ ಡೆರೆಕ್ ಒಬ್ರಿಯೆನ್ ಮತ್ತು ಎಎಪಿಯ ಸಂಜಯ್ ಸಿಂಗ್ ಸೇರಿದಂತೆ ಎಂಟು ಸಂಸದರನ್ನು ಅಮಾನತುಗೊಳಿಸಿದ ಬಗ್ಗೆ ವಿರೋಧ ಪಕ್ಷಗಳು ಇಂದು  ಕೋಲಾಹಲ ಎಬ್ಬಿಸಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಸಭೆಯನ್ನು ನಾಳೆಗೆ ಮುಂದೂಡಲಾಯಿತು.

ನವದೆಹಲಿ: ಟಿಎಂಸಿ ನಾಯಕ ಡೆರೆಕ್ ಒಬ್ರಿಯೆನ್ ಮತ್ತು ಎಎಪಿಯ ಸಂಜಯ್ ಸಿಂಗ್ ಸೇರಿದಂತೆ ಎಂಟು ಸಂಸದರನ್ನು ಅಮಾನತುಗೊಳಿಸಿದ ಬಗ್ಗೆ ವಿರೋಧ ಪಕ್ಷಗಳು ಇಂದು  ಕೋಲಾಹಲ ಎಬ್ಬಿಸಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಸಭೆಯನ್ನು ನಾಳೆಗೆ ಮುಂದೂಡಲಾಯಿತು.

ಕಲಾಪದ ವೇಳೆ ಇಂದು ಸಹ ವಿಪಕ್ಷಗಳು ಕೋಲಾಹಲ ಎಬ್ಬಿಸಿದ್ದರಿಂದ ಇಂದಿನ ಕಲಾಪವನ್ನು ಮುಂದೂಡಲಾಗಿದ್ದು ಯಾವುದೇ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳದೆ ಕಲಾಪ ವ್ಯರ್ಥವಾಯಿತು.

ಬೆಳಗ್ಗೆಯಿಂದ ನಾಲ್ಕು ಬಾರಿ ಕಲಾಪವನ್ನು ಮುಂದೂಡಿಕೆ ಮಾಡಲಾಗಿತ್ತು. ಮಧ್ಯಾಹ್ನ 12 ಗಂಟೆಗೆ ಮೇಲ್ಮನೆ ಪುನರಾರಂಭವಾದಾಗಲೂ ವಿಪಕ್ಷಗಳ ಸದಸ್ಯರು ಕಲಾಪದಲ್ಲಿ ಕೋಲಾಹಲ ಎಬ್ಬಿಸಿದವು. ಆಗ ಸಭಾಧ್ಯಕ್ಷರ ಪೀಠದಲ್ಲಿ ಕುಳಿತಿದ್ದ ಸಂಸದರಾದ ಭುವನೇಶ್ವರ ಖಲಿತಾ ಅಮಾನತುಗೊಂಡಿರುವ ಸದಸ್ಯರನ್ನು ಸದನದಿಂದ ಹೊರ ನಡೆಯುವಂತೆ ಸೂಚಿಸಿದರು. ಸದನದಲ್ಲಿ ಕೋರಂ ಇರುವಂತೆ ನೋಡಿಕೊಳ್ಳಲು ಉಳಿದ ಸದಸ್ಯರಿಗೆ ತಿಳಿಸಿದರು. ಆದರೆ ಸದಸ್ಯರು ಹೊರ ನಡೆಯದಿದ್ದರಿಂದ ಕಲಾಪವನ್ನು ಮುಂದೂಡಲಾಯಿತು.

ಕೃಷಿ ಮಸೂದೆ ಅಂಗೀಕಾರದ ವೇಳೆ ಕೋಲಾಹಲ ಸೃಷ್ಟಿಸಿ ಕಲಾಪಕ್ಕೆ ಅಡ್ಡಿ ಪಡಿಸಿದ ಹಿನ್ನಲೆ ಮತ್ತು ಉಪ ಸಭಾಪತಿ ಅವರನ್ನು ಅನುಚಿತವಾಗಿ ನಡೆಸಿಕೊಂಡ ಆರೋಪ ಮತ್ತು ಅಶಿಸ್ತಿನ ವರ್ತನೆ ಮೇರೆಗೆ ರಾಜ್ಯಸಭಾ ಸದಸ್ಯರಾದ ಡೆರೆಕ್ ಒ ಬ್ರಿಯಾನ್, ಸಂಜಯ್ ಸಿಂಗ್, ರಾಜು ಸತವ್, ಕೆ.ಕೆ.ರಾಗೇಶ್, ರಿಪೂನ್ ಬೋರಾ, ಡೋಲಾ ಸೇನ್, ಸೈಯದ್ ನಜೀರ್ ಹುಸೇನ್ ಮತ್ತು ಎಲಮರನ್ ಕರೀಮ್ ಅವರನ್ನು ಒಂದು ವಾರ ಅಮಾನತುಗೊಳಿಸಲಾಗಿತ್ತು. 

ನಿನ್ನೆಯ ಕಲಾಪದ ವೇಳೆ ಸ್ಪೀಕರ್ ಸಮೀಪವೇ ಬಂದು ಡೆರೆಕ್ ಓಬ್ರಿಯೆನ್ ರೂಲ್ ಬುಕ್ ಹರಿದು ಹಾಕಿದ್ದರು. ಕೂಡಲೇ ಭದ್ರತಾ ಸಿಬ್ಬಂದಿಗಳು ಮಧ್ಯ ಪ್ರವೇಶಿಸಿ ಡೆರೆಕ್ ಅವರನ್ನು ತಡೆದಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT