ರಾಜ್ಯಸಭೆ 
ದೇಶ

8 ಸಂಸದರ ಅಮಾನತು ಪ್ರಶ್ನಿಸಿ ವಿಪಕ್ಷಗಳಿಂದ ಕೋಲಾಹಲ: ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ!

ಟಿಎಂಸಿ ನಾಯಕ ಡೆರೆಕ್ ಒಬ್ರಿಯೆನ್ ಮತ್ತು ಎಎಪಿಯ ಸಂಜಯ್ ಸಿಂಗ್ ಸೇರಿದಂತೆ ಎಂಟು ಸಂಸದರನ್ನು ಅಮಾನತುಗೊಳಿಸಿದ ಬಗ್ಗೆ ವಿರೋಧ ಪಕ್ಷಗಳು ಇಂದು  ಕೋಲಾಹಲ ಎಬ್ಬಿಸಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಸಭೆಯನ್ನು ನಾಳೆಗೆ ಮುಂದೂಡಲಾಯಿತು.

ನವದೆಹಲಿ: ಟಿಎಂಸಿ ನಾಯಕ ಡೆರೆಕ್ ಒಬ್ರಿಯೆನ್ ಮತ್ತು ಎಎಪಿಯ ಸಂಜಯ್ ಸಿಂಗ್ ಸೇರಿದಂತೆ ಎಂಟು ಸಂಸದರನ್ನು ಅಮಾನತುಗೊಳಿಸಿದ ಬಗ್ಗೆ ವಿರೋಧ ಪಕ್ಷಗಳು ಇಂದು  ಕೋಲಾಹಲ ಎಬ್ಬಿಸಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಸಭೆಯನ್ನು ನಾಳೆಗೆ ಮುಂದೂಡಲಾಯಿತು.

ಕಲಾಪದ ವೇಳೆ ಇಂದು ಸಹ ವಿಪಕ್ಷಗಳು ಕೋಲಾಹಲ ಎಬ್ಬಿಸಿದ್ದರಿಂದ ಇಂದಿನ ಕಲಾಪವನ್ನು ಮುಂದೂಡಲಾಗಿದ್ದು ಯಾವುದೇ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳದೆ ಕಲಾಪ ವ್ಯರ್ಥವಾಯಿತು.

ಬೆಳಗ್ಗೆಯಿಂದ ನಾಲ್ಕು ಬಾರಿ ಕಲಾಪವನ್ನು ಮುಂದೂಡಿಕೆ ಮಾಡಲಾಗಿತ್ತು. ಮಧ್ಯಾಹ್ನ 12 ಗಂಟೆಗೆ ಮೇಲ್ಮನೆ ಪುನರಾರಂಭವಾದಾಗಲೂ ವಿಪಕ್ಷಗಳ ಸದಸ್ಯರು ಕಲಾಪದಲ್ಲಿ ಕೋಲಾಹಲ ಎಬ್ಬಿಸಿದವು. ಆಗ ಸಭಾಧ್ಯಕ್ಷರ ಪೀಠದಲ್ಲಿ ಕುಳಿತಿದ್ದ ಸಂಸದರಾದ ಭುವನೇಶ್ವರ ಖಲಿತಾ ಅಮಾನತುಗೊಂಡಿರುವ ಸದಸ್ಯರನ್ನು ಸದನದಿಂದ ಹೊರ ನಡೆಯುವಂತೆ ಸೂಚಿಸಿದರು. ಸದನದಲ್ಲಿ ಕೋರಂ ಇರುವಂತೆ ನೋಡಿಕೊಳ್ಳಲು ಉಳಿದ ಸದಸ್ಯರಿಗೆ ತಿಳಿಸಿದರು. ಆದರೆ ಸದಸ್ಯರು ಹೊರ ನಡೆಯದಿದ್ದರಿಂದ ಕಲಾಪವನ್ನು ಮುಂದೂಡಲಾಯಿತು.

ಕೃಷಿ ಮಸೂದೆ ಅಂಗೀಕಾರದ ವೇಳೆ ಕೋಲಾಹಲ ಸೃಷ್ಟಿಸಿ ಕಲಾಪಕ್ಕೆ ಅಡ್ಡಿ ಪಡಿಸಿದ ಹಿನ್ನಲೆ ಮತ್ತು ಉಪ ಸಭಾಪತಿ ಅವರನ್ನು ಅನುಚಿತವಾಗಿ ನಡೆಸಿಕೊಂಡ ಆರೋಪ ಮತ್ತು ಅಶಿಸ್ತಿನ ವರ್ತನೆ ಮೇರೆಗೆ ರಾಜ್ಯಸಭಾ ಸದಸ್ಯರಾದ ಡೆರೆಕ್ ಒ ಬ್ರಿಯಾನ್, ಸಂಜಯ್ ಸಿಂಗ್, ರಾಜು ಸತವ್, ಕೆ.ಕೆ.ರಾಗೇಶ್, ರಿಪೂನ್ ಬೋರಾ, ಡೋಲಾ ಸೇನ್, ಸೈಯದ್ ನಜೀರ್ ಹುಸೇನ್ ಮತ್ತು ಎಲಮರನ್ ಕರೀಮ್ ಅವರನ್ನು ಒಂದು ವಾರ ಅಮಾನತುಗೊಳಿಸಲಾಗಿತ್ತು. 

ನಿನ್ನೆಯ ಕಲಾಪದ ವೇಳೆ ಸ್ಪೀಕರ್ ಸಮೀಪವೇ ಬಂದು ಡೆರೆಕ್ ಓಬ್ರಿಯೆನ್ ರೂಲ್ ಬುಕ್ ಹರಿದು ಹಾಕಿದ್ದರು. ಕೂಡಲೇ ಭದ್ರತಾ ಸಿಬ್ಬಂದಿಗಳು ಮಧ್ಯ ಪ್ರವೇಶಿಸಿ ಡೆರೆಕ್ ಅವರನ್ನು ತಡೆದಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!