ಲೋಕಸಭೆ 
ದೇಶ

ಲೋಕಸಭೆಯಲ್ಲಿ ಕೋಲಾಹಲ, ಮುಂಗಾರು ಅಧಿವೇಶನ ನಾಳೆಯೇ ಕೊನೆಗೊಳ್ಳುವ ಸಾಧ್ಯತೆ

ಸಂಸದರಲ್ಲಿ ಕೊರೋನಾ ವೈರಸ್ ಹರಡುವ ಆತಂಕದ ಮಧ್ಯೆಯೇ ಆರಂಭವಾದ ಸಂಸತ್ ಮುಂಗಾರು ಅಧಿವೇಶನ ಈಗ ಪ್ರತಿಪಕ್ಷಗಳ ಕೋಲಾಹಲದಿಂದಾಗಿ ಬುಧವಾರವೇ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಸಂಸದರಲ್ಲಿ ಕೊರೋನಾ ವೈರಸ್ ಹರಡುವ ಆತಂಕದ ಮಧ್ಯೆಯೇ ಆರಂಭವಾದ ಸಂಸತ್ ಮುಂಗಾರು ಅಧಿವೇಶನ ಈಗ ಪ್ರತಿಪಕ್ಷಗಳ ಕೋಲಾಹಲದಿಂದಾಗಿ ಬುಧವಾರವೇ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ನಾಳೆ ರಾಜ್ಯಸಭೆಯಲ್ಲಿ ಐದು ಮಸೂದೆಗಳು ಅಂಗೀಕಾರಗೊಂಜ ನಂತರ ರಾಜ್ಯಸಭಾ ಕಲಾಪ ಅನಿರ್ಧಾಷ್ಟಾವಧಿಗೆ ಮುಂದೂಡಿಕೆಯಾಗಲಿದೆ ಎಂದು ಮಂಗಳವಾರ ಮೂಲಗಳು ತಿಳಿಸಿವೆ.

ಇನ್ನು ಲೋಕಸಭೆ ನಾಳೆ ಮಧ್ಯಾಹ್ನ 3 ಗಂಟೆಗೆ ಆರಂಭವಾಗುತ್ತಿದ್ದು, ಶೂನ್ಯ ಅವಧಿಯ ನಂತರ ಸಂಜೆ 5 ರ ಸುಮಾರಿಗೆ ಅನಿರ್ಧಿಷ್ಟಾವಧಿಗೆ ಮುಂದೂಡಲಾಗುವುದು ಎಂದು ಅವರು ಹೇಳಿದ್ದಾರೆ.

ಸೆಪ್ಟೆಂಬರ್ 14 ರಿಂದ ಪ್ರಾರಂಭವಾದ ಮುಂಗಾರು ಅಧಿವೇಶನವು ಉಭಯ ಸದನಗಳಲ್ಲಿ ಹಲವಾರು ಮಸೂದೆಗಳನ್ನು ಅಂಗೀಕರಿಸಿತು. ಇದರಲ್ಲಿ ಇತ್ತೀಚೆಗೆ ಹೊರಡಿಸಲಾದ ಸುಗ್ರೀವಾಜ್ಞೆಗಳು ಸೇರಿವೆ. ಪ್ರಸಕ್ತ ಅಧಿವೇಶನ ಅಕ್ಟೋಬರ್ 1ಕ್ಕೆ ಅಂತ್ಯಗೊಳ್ಳಬೇಕಿತ್ತು. ಆದರೆ ಕೊರೋನಾ ಆತಂಕ ಮತ್ತು ಪ್ರತಿಪಕ್ಷಗಳ ಗದ್ದಲ, ಧರಣಿಯಿಂದಾಗಿ ನಾಳೆಯೇ ಅಂತ್ಯಗೊಳ್ಳುವ ಸಾಧ್ಯತೆ ಇದೆ.

ಕಳೆದ ಕೆಲವು ದಿನಗಳಲ್ಲಿ ಕೇಂದ್ರದ ಕೆಲವು ಸಚಿವರು ಸೇರಿದಂತೆ ಹಲವು ಸಂಸದರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಟ್ಟಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 world cup: ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; ಬೆಥೆಲ್ ಶತಕ ವ್ಯರ್ಥ; ಆಂಗ್ಲರ ಮಣಿಸಿದ ಭಾರತ ಫೈನಲ್ಸ್ ಗೆ ಲಗ್ಗೆ

ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ: ಇಬ್ಬರಿಗೆ ಗಾಯ, ಇರಾನ್ ರಾಯಭಾರಿಗೆ ಅಜರ್ ಬೈಜಾನ್ ಸಮನ್ಸ್!

T20 World Cup 2026 ಸೆಮಿಫೈನಲ್: ಸ್ಯಾಮ್ಸನ್ ಮಿಂಚಿನ ಅರ್ಧಶತಕ; ಇಂಗ್ಲೆಂಡ್ ಗೆ ಬೃಹತ್ 254 ರನ್ ಟಾರ್ಗೆಟ್ ನೀಡಿದ ಭಾರತ!

ಮಧ್ಯಪ್ರಾಚ್ಯ ಸಂಘರ್ಷ: ಅಚ್ಚರಿ ಮೂಡಿಸಿದ ಜೈಶಂಕರ್- ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮಾತುಕತೆ

T20 World Cup Semi Final 2026: 19 ವರ್ಷಗಳ ಐತಿಹಾಸಿಕ ದಾಖಲೆ ಮುರಿದ ಸಂಜು-ಇಶಾನ್ ಕಿಶಾನ್! Video

SCROLL FOR NEXT