ದೇಶ

ಲೋಕಸಭೆಯಲ್ಲಿ ಕೋಲಾಹಲ, ಮುಂಗಾರು ಅಧಿವೇಶನ ನಾಳೆಯೇ ಕೊನೆಗೊಳ್ಳುವ ಸಾಧ್ಯತೆ

Lingaraj Badiger

ನವದೆಹಲಿ: ಸಂಸದರಲ್ಲಿ ಕೊರೋನಾ ವೈರಸ್ ಹರಡುವ ಆತಂಕದ ಮಧ್ಯೆಯೇ ಆರಂಭವಾದ ಸಂಸತ್ ಮುಂಗಾರು ಅಧಿವೇಶನ ಈಗ ಪ್ರತಿಪಕ್ಷಗಳ ಕೋಲಾಹಲದಿಂದಾಗಿ ಬುಧವಾರವೇ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ನಾಳೆ ರಾಜ್ಯಸಭೆಯಲ್ಲಿ ಐದು ಮಸೂದೆಗಳು ಅಂಗೀಕಾರಗೊಂಜ ನಂತರ ರಾಜ್ಯಸಭಾ ಕಲಾಪ ಅನಿರ್ಧಾಷ್ಟಾವಧಿಗೆ ಮುಂದೂಡಿಕೆಯಾಗಲಿದೆ ಎಂದು ಮಂಗಳವಾರ ಮೂಲಗಳು ತಿಳಿಸಿವೆ.

ಇನ್ನು ಲೋಕಸಭೆ ನಾಳೆ ಮಧ್ಯಾಹ್ನ 3 ಗಂಟೆಗೆ ಆರಂಭವಾಗುತ್ತಿದ್ದು, ಶೂನ್ಯ ಅವಧಿಯ ನಂತರ ಸಂಜೆ 5 ರ ಸುಮಾರಿಗೆ ಅನಿರ್ಧಿಷ್ಟಾವಧಿಗೆ ಮುಂದೂಡಲಾಗುವುದು ಎಂದು ಅವರು ಹೇಳಿದ್ದಾರೆ.

ಸೆಪ್ಟೆಂಬರ್ 14 ರಿಂದ ಪ್ರಾರಂಭವಾದ ಮುಂಗಾರು ಅಧಿವೇಶನವು ಉಭಯ ಸದನಗಳಲ್ಲಿ ಹಲವಾರು ಮಸೂದೆಗಳನ್ನು ಅಂಗೀಕರಿಸಿತು. ಇದರಲ್ಲಿ ಇತ್ತೀಚೆಗೆ ಹೊರಡಿಸಲಾದ ಸುಗ್ರೀವಾಜ್ಞೆಗಳು ಸೇರಿವೆ. ಪ್ರಸಕ್ತ ಅಧಿವೇಶನ ಅಕ್ಟೋಬರ್ 1ಕ್ಕೆ ಅಂತ್ಯಗೊಳ್ಳಬೇಕಿತ್ತು. ಆದರೆ ಕೊರೋನಾ ಆತಂಕ ಮತ್ತು ಪ್ರತಿಪಕ್ಷಗಳ ಗದ್ದಲ, ಧರಣಿಯಿಂದಾಗಿ ನಾಳೆಯೇ ಅಂತ್ಯಗೊಳ್ಳುವ ಸಾಧ್ಯತೆ ಇದೆ.

ಕಳೆದ ಕೆಲವು ದಿನಗಳಲ್ಲಿ ಕೇಂದ್ರದ ಕೆಲವು ಸಚಿವರು ಸೇರಿದಂತೆ ಹಲವು ಸಂಸದರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಟ್ಟಿದೆ. 

SCROLL FOR NEXT