IAF Helicopter 
ದೇಶ

ಎಲ್ ಎಸಿ ಬಳಿ ವಾಯುನೆಲೆಗಳು, ವಾಯು ರಕ್ಷಣಾ ಸ್ಥಾನ, ಹೆಲಿಪೋರ್ಟ್ ಗಳನ್ನು ದ್ವಿಗುಣಗೊಳಿಸುತ್ತಿರುವ ಚೀನಾ: ವರದಿ

2017ರಲ್ಲಿ ಡೊಕ್ಲಾಮ ವಿವಾದ ಸಂಭವಿಸಿದ ನಂತರ ವಾಸ್ತವ ನಿಯಂತ್ರಣ ರೇಖೆ ಬಳಿ ಐದು ಹೆಲಿಪೋರ್ಟ್ ಗಳು, ಐದು ಶಾಶ್ವತ ವಾಯು ರಕ್ಷಣಾ ಸ್ಥಾನಗಳು, ಮೂರು ವಾಯುನೆಲೆಗೆಳು ಸೇರಿದಂತೆ ಕನಿಷ್ಠ 13 ಹೊಸ ಮಿಲಿಟರಿ ಸ್ಥಾನಗಳ ನಿರ್ಮಾಣ ಕಾರ್ಯವನ್ನು ಚೀನಾ ಆರಂಭಿಸಿದೆ ಎಂದು ಜಾಗತಿಕ ಭದ್ರತಾ ಕನ್ಸಲ್ ಟೆನ್ಸಿ ಸ್ಟಾರ್ಟ್ ಫಾರ್ ತಿಳಿಸಿದೆ.

ನವದೆಹಲಿ: 2017ರಲ್ಲಿ ಡೊಕ್ಲಾಮ ವಿವಾದ ಸಂಭವಿಸಿದ ನಂತರ ವಾಸ್ತವ ನಿಯಂತ್ರಣ ರೇಖೆ ಬಳಿ ಐದು ಹೆಲಿಪೋರ್ಟ್ ಗಳು, ಐದು ಶಾಶ್ವತ ವಾಯು ರಕ್ಷಣಾ ಸ್ಥಾನಗಳು, ಮೂರು ವಾಯುನೆಲೆಗೆಳು ಸೇರಿದಂತೆ ಕನಿಷ್ಠ 13 ಹೊಸ ಮಿಲಿಟರಿ ಸ್ಥಾನಗಳ ನಿರ್ಮಾಣ ಕಾರ್ಯವನ್ನು ಚೀನಾ ಆರಂಭಿಸಿದೆ ಎಂದು ಜಾಗತಿಕ ಭದ್ರತಾ ಕನ್ಸಲ್ ಟೆನ್ಸಿ ಸ್ಟಾರ್ಟ್ ಫಾರ್ ತಿಳಿಸಿದೆ.

ಪೂರ್ವ ಲಡಾಖ್ ನಲ್ಲಿ ಮೇ ತಿಂಗಳ ಆರಂಭದಲ್ಲಿ ಗಡಿ ವಿವಾದ ತಲೆದೋರಿದ ಬಳಿಕ ನಾಲ್ಕು ಹೊಸ ಹೆಲಿಪೋರ್ಟ್ ಗಳ ನಿರ್ಮಾಣವನ್ನು ಪ್ರಾರಂಭಿಸಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

2017 ರ ಡೋಕ್ಲಾಮ್ ಬಿಕ್ಕಟ್ಟು ಚೀನಾದ ಕಾರ್ಯತಂತ್ರದ ಉದ್ದೇಶಗಳನ್ನು ಬದಲಿಸಿದಂತೆ ತೋರುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ  ಒಟ್ಟು ವಾಯುನೆಲೆಗಳು, ವಾಯು ರಕ್ಷಣಾ ಸ್ಥಾನಗಳು ಮತ್ತು ಹೆಲಿಪೋರ್ಟ್‌ಗಳನ್ನು  ದ್ವಿಗುಣಗೊಳಿಸುತ್ತಿದೆ ಎಂದು ತಿಳಿಸಲಾಗಿದೆ.

ಭದ್ರತಾ ತಜ್ಞ ಸಿಮ್ ಟ್ಯಾಕ್ ಬರೆದಿರುವ ವರದಿ ಇಂದು ಬಿಡುಗಡೆಯಾಗಿದ್ದು, ಇತ್ತೀಚಿನ ವಿವಾದಗಳು ಉಭಯ ದೇಶಗಳ ನಡುವೆ ಪ್ರಾದೇಶಿಕ ಉದ್ವಿಗ್ನತೆಯನ್ನು ಹೆಚ್ಚಿಸುತ್ತಿದ್ದಂತೆ ಕಾಣುತ್ತಿದ್ದು, ಚೀನಾದ ಈ ನಿರ್ಮಾಣ ಕಾರ್ಯವು ಭವಿಷ್ಯದ ಮಿಲಿಟರಿ ಸಾಮರ್ಥ್ಯವನ್ನು ಯೋಜಿಸಿದಂತೆ ಕಾಣುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಭಾರತವು ಇತ್ತೀಚಿಗೆ ರಫೆಲ್ ಯುದ್ಧ ವಿಮಾನವನ್ನು ಖರೀದಿಸಿರುವುದರಿಂದ ಸ್ವಲ್ಪ ನಿರಾಳವಾದಂತೆ ಕಾಣುತ್ತಿದೆ. ಆದರೆ, ಸ್ವದೇಶಿ ಉತ್ಪಾದನೆ ಮತ್ತು ವಿದೇಶಿ ಸ್ವಾಧೀನಗಳು ನಿಜವಾಗಿಯೂ ಭಾರತದ ವಾಯುಪಡೆ ಸಾಮರ್ಥ್ಯವನ್ನು ಬಲಪಡಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ