ಕೃಷಿ ಮಸೂದೆ: ಕೇಂದ್ರ ಸರ್ಕಾರವನ್ನು ಟಾರ್ಗೆಟ್ ಮಾಡಿದ ಕೇಜ್ರಿವಾಲ್ 
ದೇಶ

ಕೃಷಿ ಮಸೂದೆ: ಕೇಂದ್ರ ಸರ್ಕಾರವನ್ನು ಟಾರ್ಗೆಟ್ ಮಾಡಿದ ಕೇಜ್ರಿವಾಲ್

ಕೃಷಿ ಮಸೂದೆಗೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದ್ದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹ ಮಸೂದೆಯನ್ನು ಖಂಡಿಸಿದ್ದಾರೆ. 

ನವದೆಹಲಿ: ಕೃಷಿ ಮಸೂದೆಗೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದ್ದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹ ಮಸೂದೆಯನ್ನು ಖಂಡಿಸಿದ್ದಾರೆ. ಕೃಷಿ ಮಸೂದೆಯನ್ನು ಅಪಾಯಕಾರಿ ಎಂದು ಹೇಳಿರುವ ಕೇಜ್ರಿವಾಲ್, ರಾಜ್ಯಸಭೆಯಲ್ಲಿ ಮತಗಳನ್ನು ವಿಭಾಗಿಸದೇ ಮಸೂದೆ ಅಂಗೀಕಾರ ಮಾಡಿರುವುದನ್ನು ಖಂಡಿಸಿದ್ದಾರೆ. 

ಇದೇ ವೇಳೆ ದುರ್ವರ್ತನೆ ತೋರಿ ಅಮಾನತುಗೊಂಡು, ಪ್ರತಿಭಟನೆ ನಡೆಸುತ್ತಿರುವ ಸಂಸದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕೇಜ್ರಿವಾಲ್, ಪ್ರತಿಭಟನಾ ನಿರತ 8 ಸಂಸದರು ಬಿಸಿಲು, ಸೊಳ್ಳೆಗಳ ಕಾಟವನ್ನು ಲೆಕ್ಕಿಸದೇ ರೈತರಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಅವರು ತಮಗಾಗಿ ಏನನ್ನೂ ಕೇಳುತ್ತಿಲ್ಲ. ದೇಶದ ರೈತರಿಗಾಗಿ ಹೋರಾಡುತ್ತಿದ್ದಾರೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. 

ದೇಶಾದ್ಯಂತ ಇರುವ ರೈತರು ಈ ಮಸೂದೆ ತಮ್ಮನ್ನು ಅಂತ್ಯಗೊಳಿಸಲಿದೆ ಎಂದು ಹೇಳುತ್ತಿದ್ದಾರೆ. ಇಂತಹ ಅಪಾಯಕಾರಿ ಮಸೂದೆಯನ್ನು ಮತಕ್ಕೆ ಹಾಕದೇ ಅಂಗೀಕರಿಸಲಾಗಿದೆ. ಹಾಗಾದಲ್ಲಿ ಸಂಸತ್, ಚುನಾವಣೆಗಳಿಗೆ ಅರ್ಥವೇನು ಉಳಿಯಲಿದೆ? ಚುನಾವಣೆಗೆ ಏನು ಅರ್ಥ? ಸಂಸತ್ ಅಧಿವೇಶನವನ್ನು ಏಕೆ ಕರೆದಿರಿ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. 

ಮನೀಷ್ ಸಿಸೋಡಿಯಾ ಕೇಂದ್ರ ಸರ್ಕಾರವನ್ನು ಬ್ರಿಟೀಷ್ ಸರ್ಕಾರಕ್ಕೆ ಹೋಲಿಕೆ ಮಾಡಿದ್ದಾರೆ. ರೈತರು, ಕಾರ್ಮಿಕರ ಮೇಲೆ ದೌರ್ಜನ್ಯ ಎಸಗುತ್ತಿದ್ದರು, ನಂತರ ಸ್ವಾತಂತ್ರ್ಯ ಹೋರಾಟಗಾರರಾದ ಗಾಂಧಿ ಹಾಗೂ ಇನ್ನಿತರ ನಾಯಕರಿಗೆ ಟೀ ತೆಗೆದುಕೊಂಡು ಹೋಗಿ ಕೊಡುತ್ತಿದ್ದರು. ಇದೇ ಮಾದರಿಯಲ್ಲಿ ಕೇಂದ್ರ ಸರ್ಕಾರವೂ ಮಾಡುತ್ತಿದೆ ಎಂದು ಸಿಸೊಡಿಯಾ ಹೇಳಿದ್ದಾರೆ. 

ರಾಜ್ಯಸಭೆ ಉಪಾಧ್ಯಕ್ಷ ಹರಿವಂಶ್ ಪ್ರತಿಭಟನಾ ನಿರತ ಸಂಸದರಿಗೆ ಟೀ ನೀಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ಸಂಜಯ್ ಸಿಂಗ್, ನಿಮ್ಮ ಟೀಯನ್ನು ವಿನಮ್ರವಾಗಿ ವಾಪಸ್ ನೀಡುತ್ತೇನೆ, ನೀವು ರೈತರ ಫಸಲನ್ನು ವಾಪಸ್ ನೀಡಿ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT