ಸಂಸದ ತೇಜಸ್ವಿ ಸೂರ್ಯ 
ದೇಶ

ರಾಷ್ಟ್ರೀಯತಾವಾದಿ ವಿಷಯಗಳಿಗೆ ಟ್ವಿಟರ್, ಫೇಸ್‌ಬುಕ್ ನಿಂದ ಅನಿಯಂತ್ರಿತ ಕತ್ತರಿ ಪ್ರಯೋಗ: ತೇಜಸ್ವಿ ಸೂರ್ಯ ಆರೋಪ

ಬಳಕೆದಾರರು ಪೋಸ್ಟ್ ಮಾಡಿದ ರಾಷ್ಟ್ರೀಯತಾವಾದಿ ವಿಷಯಗಳನ್ನು ಟ್ವೀಟರ್, ಫೇಸ್ ಬುಕ್ ಅನಿಯಂತ್ರಿತವಾಗಿ ಕತ್ತರಿ ಪ್ರಯೋಗ ಮಾಡುತ್ತಿವೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಮಧ್ಯಪ್ರವೇಶ ಬಯಸಿದ್ದಾರೆ.

ನವದೆಹಲಿ: ಬಳಕೆದಾರರು ಪೋಸ್ಟ್ ಮಾಡಿದ ರಾಷ್ಟ್ರೀಯತಾವಾದಿ ವಿಷಯಗಳನ್ನು ಟ್ವೀಟರ್, ಫೇಸ್ ಬುಕ್ ಅನಿಯಂತ್ರಿತವಾಗಿ ಕತ್ತರಿ ಪ್ರಯೋಗ ಮಾಡುತ್ತಿವೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದಾರೆ.

ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ತೇಜಸ್ವಿ ಸೂರ್ಯ, ಮೂರನೇ ವ್ಯಕ್ತಿ ಬಳಕೆದಾರರು ಪೋಸ್ಟ್ ಮಾಡುವ ವಿಶೇಷವಾಗಿ ರಾಷ್ಟ್ರೀಯತವಾದಿ ಅಂಶಗಳನ್ನು ಟ್ವೀಟರ್ ಮತ್ತು ಫೇಸ್ ಬುಕ್ ಅನಿಯಂತ್ರಿತವಾಗಿ ಸೆನ್ಸಾರ್ ಮಾಡುತ್ತಿರುವ ಬಗ್ಗೆ ಹಲವು ದಿನಗಳಿಂದ ಅನೇಕ ವಿಶ್ವಾಸಾರ್ಹ ಆರೋಪಗಳಿವೆ ಎಂದರು.

ಇದು ಮಾತನಾಡುವ ಸ್ವಾತಂತ್ರಕ್ಕೆ ಕಾರಣ ರಹಿತ ನಿರ್ಬಂಧ ಮಾತ್ರವಲ್ಲದೇ, ಚುನಾವಣಾ ಸಂದರ್ಭದಲ್ಲಿ ಕಾನೂನುಬಾಹಿರ ಮಧ್ಯಪ್ರವೇಶಕ್ಕೂ ಕಾರಣವಾಗಿದ್ದು, ಮಹತ್ವದ ಸಾಂವಿಧಾನಿಕ ಸವಾಲನ್ನು ಒಡ್ಡುತ್ತದೆ ಎಂದು ಹೇಳಿದರು.

ಐಟಿ ಕಾಯ್ದೆ 2000 ರ ಅಡಿಯಲ್ಲಿ ಮಧ್ಯವರ್ತಿಗಳೆಂದು ಫೇಸ್ ಬುಕ್, ಟ್ವೀಟರ್ ನಂತಹ ಸಾಮಾಜಿಕ ಮಾಧ್ಯಮಗಳು ಹೇಳಿಕೊಳ್ಳುತ್ತಿವೆ, ಮಧ್ಯವರ್ತಿಗಳ ಪಾತ್ರವು ಮೂರನೇ ವ್ಯಕ್ತಿಯ ಬಳಕೆದಾರರ ಡೇಟಾವನ್ನು ಸಂಸ್ಕರಿಸಲು, ಸಂಗ್ರಹಿಸಲು ಮತ್ತು ರವಾನಿಸಲು ಸೀಮಿತವಾಗಿದೆ. ಆದರೆ,  ಬಳಕೆದಾರರ ವಿಷಯದ ಮೇಲೆ ಹಸ್ತಕ್ಷೇಪವನ್ನು ಒಳಗೊಂಡಿರುವುದಿಲ್ಲ. ಆದ್ದರಿಂದ,  ಕಾಯ್ದೆಯ ಸೆಕ್ಷನ್ 79  ಮಧ್ಯವರ್ತಿಗಳಿಗೆ ಹೊಣೆಗಾರಿಕೆಯಿಂದ ವಿನಾಯಿತಿ ನೀಡಲಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT