ಪ್ರಧಾನಿ ಮೋದಿ, ಸುರೇಶ್ ಅಂಗಡಿ 
ದೇಶ

ಕೇಂದ್ರ ಸಚಿವ ಸುರೇಶ್ ಅಂಗಡಿ ಹಠಾತ್ ನಿಧನಕ್ಕೆ ಪ್ರಧಾನಿ ಮೋದಿ, ಬಿಎಸ್ ವೈ, ಸಿದ್ದು ಸೇರಿದಂತೆ ಹಲವು ಗಣ್ಯರ ಸಂತಾಪ

ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ಸುರೇಶ್ ಅಂಗಡಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದ್ದಾರೆ.

ನವದೆಹಲಿ: ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ಸುರೇಶ್ ಅಂಗಡಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದ್ದಾರೆ.

ನಿಷ್ಟಾವಂತ ಕಾರ್ಯಕರ್ತರಾಗಿದ್ದ ಸುರೇಶ್ ಅಂಗಡಿ, ಕರ್ನಾಟಕದಲ್ಲಿ ಬಿಜೆಪಿ ಪ್ರಾಬಲ್ಯ ಮೆರೆಯುವಲ್ಲಿ ಶ್ರಮ ವಹಿಸಿದ್ದರು. ಅವರು ದಕ್ಷ ಸಂಸದ ಹಾಗೂ ಪರಿಣಾಮಕಾರಿ ಸಚಿವರಾಗಿದ್ದರು. ಅವರ ನಿಧನದಿಂದ ತುಂಬಾ ದು:ಖವಾಗಿದ್ದು, ಅವರ ಕುಟುಂಬ ಹಾಗೂ ಸ್ನೇಹಿತರಿಗೆ ಸಂತಾಪ ಸೂಚಿಸುವುದಾಗಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಹಿರಿಯ ನಾಯಕರು, ಕೇಂದ್ರ ರೈಲ್ವೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಇದನ್ನು ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಸಭ್ಯ, ಸೌಮ್ಯ ಸ್ವಭಾವದವರಾಗಿ, ಜನಪ್ರಿಯ ನಾಯಕರಾಗಿದ್ದ ಸುರೇಶ್ ಅಂಗಡಿಯವಾರ ನಿಧನ, ಪಕ್ಷಕ್ಕೆ, ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಬಹುದೊಡ್ಡ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಸ್ನೇಹಜೀವಿಯಾಗಿದ್ದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನಿಧನ ಆಘಾತಕಾರಿಯಾದದ್ದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸುರೇಶ್ ಅಂಗಡಿ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT