ಮಹಿಳೆಯರ ವಿರುದ್ಧದ ಅಪರಾಧ: ಆಪರೇಷನ್ ದುರಾಚಾರಿಯನ್ನು ಪ್ರಾರಂಭಿಸಿದ ಯೋಗಿ ಸರ್ಕಾರ 
ದೇಶ

ಮಹಿಳೆಯರ ವಿರುದ್ಧದ ಅಪರಾಧ: ಯೋಗಿ ಸರ್ಕಾರದಿಂದ 'ಆಪರೇಷನ್ ದುರಾಚಾರಿ' ಪ್ರಾರಂಭ

ಮಹಿಳೆಯರಿಗೆ ಲೈಂಗಿಕ ಕಿರುಕುಳ, ಅವರೆಡೆಗೆ ದೌರ್ಜನ್ಯ ನಡೆಸುವವರು ಚುಡಾಯಿಸುವವರ ವಿರುದ್ಧ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಆಪರೇಷನ್ ದುರಾಚಾರಿಯನ್ನು ಪ್ರಾರಂಭಿಸಿದೆ. 

ಲಖನೌ: ಮಹಿಳೆಯರಿಗೆ ಲೈಂಗಿಕ ಕಿರುಕುಳ, ಅವರೆಡೆಗೆ ದೌರ್ಜನ್ಯ ನಡೆಸುವವರು ಚುಡಾಯಿಸುವವರ ವಿರುದ್ಧ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಆಪರೇಷನ್ ದುರಾಚಾರಿಯನ್ನು ಪ್ರಾರಂಭಿಸಿದೆ. 

ಸಿಎಎಯನ್ನು ವಿರೋಧಿಸಿ ಪ್ರತಿಭಟಿಸಿ, ಸಾರ್ವಜನಿಕ ಆಸ್ತಿಗಳನ್ನು ಹಾನಿ ಮಾಡುವವರ ಹೆಸರನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರಕಟಿಸಿದಂತೆಯೇ, ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವ, ಚುಡಾಯಿಸುವ ಪುಂಡರ ಹೆಸರನ್ನು ಫೋಟೋ ಸಹಿತ ಸಾರ್ವಜನಿಕ ಸ್ಥಳಗಳಲ್ಲಿ ಪ್ರಕಟಿಸುವುದಾಗಿ ಉತ್ತರ ಪ್ರದೇಶ ಸರ್ಕಾರ ಘೋಷಿಸಿದೆ. 

ಈ ನಿಟ್ಟಿನಲ್ಲಿ ಈಗಾಗಲೇ ಸಿಎಂ ಯೋಗಿ ಆದಿತ್ಯನಾಥ್ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಮಹಿಳಾ ಪೊಲೀಸರಿಗೂ ಸಹ ಆಪರೇಷನ್ ದುರಾಚಾರಿಯಡಿಯಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳನ್ನು ನಿಯಂತ್ರಿಸುವುದಕ್ಕೆ ಯೋಗಿ ಸರ್ಕಾರ ಸೂಚಿಸಿದೆ. 

ಲಖನೌ ಐಜಿ ಲಕ್ಷ್ಮಿ ಸಿಂಗ್ ಆಪರೇಷನ್ ಶಕ್ತಿಯನ್ನು ಮುನ್ನಡೆಸುತ್ತಿದ್ದು ಮಹಿಳೆಯರ ವಿರುದ್ಧ ದೌರ್ಜನ್ಯ ಎಸಗಿದ 2200 ಕ್ರಿಮಿನಲ್ ಗಳನ್ನು ಹೆಡೆಮುರಿಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT