ಕೃಷಿ ಮಸೂದೆ ವಿರೋಧಿಸಿ ರೈತರ ಪ್ರತಿಭಟನೆ 
ದೇಶ

ಕೃಷಿ ಮಸೂದೆಗೆ ಮಹಾ ವಿಕಾಸ್ ಅಗಾಡಿ ವಿರೋಧ, ರಾಜ್ಯದಲ್ಲಿ ಜಾರಿ ಅಸಂಭವ: ಕಾಂಗ್ರೆಸ್

ಕಾಂಗ್ರೆಸ್ ಜೊತೆಗೆ ಮಹಾರಾಷ್ಟ್ರ ವಿಕಾಸ್ ಅಗಾಡಿ ಸಹ ಕೇಂದ್ರದ ಕೃಷಿ ಮಸೂದೆಗಳನ್ನು ವಿರೋಧಿಸುತ್ತಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯ ಸಚಿವ ಬಾಲಾಸಾಹೇಬ್ ಥೋರತ್ ಅವರು ಶುಕ್ರವಾರ ಹೇಳಿದ್ದಾರೆ.

ಮುಂಬೈ: ಕಾಂಗ್ರೆಸ್ ಜೊತೆಗೆ ಮಹಾರಾಷ್ಟ್ರ ವಿಕಾಸ್ ಅಗಾಡಿ ಸಹ ಕೇಂದ್ರದ ಕೃಷಿ ಮಸೂದೆಗಳನ್ನು ವಿರೋಧಿಸುತ್ತಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯ ಸಚಿವ ಬಾಲಾಸಾಹೇಬ್ ಥೋರತ್ ಅವರು ಶುಕ್ರವಾರ ಹೇಳಿದ್ದಾರೆ.

"ಸಂಸತ್ತು ಅಂಗೀಕರಿಸಿದ ಕೃಷಿ ಮಸೂದೆಗಳನ್ನು ನಾವು ವಿರೋಧಿಸುತ್ತೇವೆ. ಮಹಾರಾಷ್ಟ್ರ ವಿಕಾಸ್ ಅಗಾಡಿ ಕೂಡ ಇದಕ್ಕೆ ವಿರುದ್ಧವಾಗಿದೆ. ಇದನ್ನು ರಾಜ್ಯದಲ್ಲಿ ಜಾರಿಗೊಳಿಸದಿರಲು ನಾವು ನಿರ್ಧರಿಸುತ್ತೇವೆ" ಎಂದು ಥೋರತ್ ತಿಳಿಸಿದ್ದಾರೆ.

ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ(ಪ್ರಚಾರ ಮತ್ತು ಸೌಲಭ್ಯ) ಮಸೂದೆ, 2020 ಮತ್ತು ರೈತ(ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದದ ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ, 2020 ಅನ್ನು ಸಂಸತ್ತು ಭಾನುವಾರ ಅಂಗೀಕರಿಸಿದೆ.

ಇದಕ್ಕು ಮುನ್ನ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆಯಿಂದ ರೈತರು ಗುಲಾಮಗಿರಿಗೆ ಒಳಗಾಗಗುತ್ತಾರೆ ಎಂದು ಕಿಡಿ ಕಾರಿದ್ದರು.

ದೇಶಾದ್ಯಂತ ರೈತರು ನಡೆಸುತ್ತಿರುವ ಭಾರತ್ ಬಂದ್ ಗೆ ಬೆಂಬಲ ವ್ಯಕ್ತ ಪಡಿಸಿರುವ ರಾಹುಲ್ ಗಾಂಧಿ ಮೂರು ಮಸೂದೆಗಳು ರೈತ ವಿರೋಧಿಯಾಗಿವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT