ಎಸ್ ಪಿ ಬಾಲಸುಬ್ರಹ್ಮಣ್ಯಂ 
ದೇಶ

ಪೊಲೀಸ್ ಗೌರವಗಳೊಂದಿಗೆ ಎಸ್ ಪಿಬಿ ಅಂತ್ಯಕ್ರಿಯೆ: ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬಾರದ ಲೋಕಕ್ಕೆ ಪ್ರಯಾಣಿಸಿರುವ ಗಾನ ಗಾರುಡಿಗ, ಪದ್ಮ ವಿಭೂಷಣ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ.ಪೊಲೀಸ್ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ತಿಳಿಸಿದ್ದಾರೆ.

ತಮಿಳುನಾಡು: ಬಾರದ ಲೋಕಕ್ಕೆ ಪ್ರಯಾಣಿಸಿರುವ ಗಾನ ಗಾರುಡಿಗ, ಪದ್ಮ ವಿಭೂಷಣ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ.

ತಿರುವಳ್ಳೂರು ಜಿಲ್ಲೆಯ ತಮಾರೈಪಕ್ಕಂ ಗ್ರಾಮದಲ್ಲಿರುವ ಅವರ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಸಾರ್ವಜನಿಕರಿಗೆ ಪಾರ್ಥಿವ ಶರೀರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ತಮಿಳುನಾಡು ಮಾತ್ರವಲ್ಲದೇ, ದೇಶಾದ್ಯಂತ ಜನರ ಹೃದಯ ಗೆದಿದ್ದ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಸಂಸ್ಕಾರ ವೇಳೆಯಲ್ಲಿ ಪೊಲೀಸ್ ಇಲಾಖೆಯಿಂದ ಗೌರವ ಸಮರ್ಪಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಿನ್ನೆ ಮಧ್ಯಾಹ್ನ  ಎಂಜಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಪಾರ್ಥಿವ ಶರೀರವನ್ನು ಚೆನ್ನೈನಲ್ಲಿನ  ನಣಗಂಬುಕಂ ನಿವಾಸಕ್ಕೆ ತರಲಾಯಿತು. ತಡರಾತ್ರಿ ಪಾರ್ಥಿವ ಶರೀರವನ್ನು ಫಾರ್ಮ್ ಹೌಸ್ ಗೆ ತರಲಾಯಿತು.

ಕೊರೋನಾವೈರಸ್ ವಿರುದ್ಧ ಎರಡು ತಿಂಗಳು ಹೋರಾಟ ನಡೆಸಿದ 74 ವರ್ಷದ ಹಿರಿಯ ಗಾಯಕ, ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದು, ದೇಶದ ಸಂಗೀತ ಲೋಕದ ಕೊಂಡಿಯೊಂದು ಕಳಚಿದಂತಾಗಿದೆ. 

ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ 16 ಭಾಷೆಗಳಲ್ಲಿ ಸುಮಾರು 50 ಸಾವಿರ ಗೀತೆಗಳಿಗೆ ಧ್ವನಿಯಾಗಿರುವ
ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಇಡೀ ದೇಶವೇ ಮರುಗಿದೆ. ಸೂಪರ್ ಸ್ಟಾರ್ ರಜನಿಕಾಂತ್, ಕಮಲ ಹಾಸನ್, ಚಿರಂಜೀವಿ ಸೇರಿದಂತೆ ಹಲವು ಸ್ಟಾರ್ ನಟರು, ಸಂಗೀತ ದಿಗ್ಗಜರು, ವಿವಿಧ ಕ್ಷೇತ್ರಗಳ ಗಣ್ಯರು ಕಂಬನಿ ಮಿಡಿದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT