ಎಸ್ ಪಿ ಬಾಲಸುಬ್ರಹ್ಮಣ್ಯಂ 
ದೇಶ

ಪೊಲೀಸ್ ಗೌರವಗಳೊಂದಿಗೆ ಎಸ್ ಪಿಬಿ ಅಂತ್ಯಕ್ರಿಯೆ: ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬಾರದ ಲೋಕಕ್ಕೆ ಪ್ರಯಾಣಿಸಿರುವ ಗಾನ ಗಾರುಡಿಗ, ಪದ್ಮ ವಿಭೂಷಣ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ.ಪೊಲೀಸ್ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ತಿಳಿಸಿದ್ದಾರೆ.

ತಮಿಳುನಾಡು: ಬಾರದ ಲೋಕಕ್ಕೆ ಪ್ರಯಾಣಿಸಿರುವ ಗಾನ ಗಾರುಡಿಗ, ಪದ್ಮ ವಿಭೂಷಣ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ.

ತಿರುವಳ್ಳೂರು ಜಿಲ್ಲೆಯ ತಮಾರೈಪಕ್ಕಂ ಗ್ರಾಮದಲ್ಲಿರುವ ಅವರ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಸಾರ್ವಜನಿಕರಿಗೆ ಪಾರ್ಥಿವ ಶರೀರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ತಮಿಳುನಾಡು ಮಾತ್ರವಲ್ಲದೇ, ದೇಶಾದ್ಯಂತ ಜನರ ಹೃದಯ ಗೆದಿದ್ದ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಸಂಸ್ಕಾರ ವೇಳೆಯಲ್ಲಿ ಪೊಲೀಸ್ ಇಲಾಖೆಯಿಂದ ಗೌರವ ಸಮರ್ಪಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಿನ್ನೆ ಮಧ್ಯಾಹ್ನ  ಎಂಜಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಪಾರ್ಥಿವ ಶರೀರವನ್ನು ಚೆನ್ನೈನಲ್ಲಿನ  ನಣಗಂಬುಕಂ ನಿವಾಸಕ್ಕೆ ತರಲಾಯಿತು. ತಡರಾತ್ರಿ ಪಾರ್ಥಿವ ಶರೀರವನ್ನು ಫಾರ್ಮ್ ಹೌಸ್ ಗೆ ತರಲಾಯಿತು.

ಕೊರೋನಾವೈರಸ್ ವಿರುದ್ಧ ಎರಡು ತಿಂಗಳು ಹೋರಾಟ ನಡೆಸಿದ 74 ವರ್ಷದ ಹಿರಿಯ ಗಾಯಕ, ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದು, ದೇಶದ ಸಂಗೀತ ಲೋಕದ ಕೊಂಡಿಯೊಂದು ಕಳಚಿದಂತಾಗಿದೆ. 

ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ 16 ಭಾಷೆಗಳಲ್ಲಿ ಸುಮಾರು 50 ಸಾವಿರ ಗೀತೆಗಳಿಗೆ ಧ್ವನಿಯಾಗಿರುವ
ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಇಡೀ ದೇಶವೇ ಮರುಗಿದೆ. ಸೂಪರ್ ಸ್ಟಾರ್ ರಜನಿಕಾಂತ್, ಕಮಲ ಹಾಸನ್, ಚಿರಂಜೀವಿ ಸೇರಿದಂತೆ ಹಲವು ಸ್ಟಾರ್ ನಟರು, ಸಂಗೀತ ದಿಗ್ಗಜರು, ವಿವಿಧ ಕ್ಷೇತ್ರಗಳ ಗಣ್ಯರು ಕಂಬನಿ ಮಿಡಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT